AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ
ಸುಹಾನಾ ಖಾನ್
TV9 Web
| Edited By: |

Updated on:Aug 18, 2021 | 12:07 PM

Share

ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ಈ ಮೊದಲಿನಿಂದಲೂ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಹಿಂಬಾಲಕರನ್ನು ಹೊಂದಿರುವ ಅವರು, ತಮ್ಮ ಬೋಲ್ಡ್​ ಪೋಸ್ಟ್​ಗಳ ಮೂಲಕ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಸುಹಾನಾ ಅವರನ್ನು ಸ್ಟಾರ್​ ನಿರ್ದೇಶಕಿ ಜೋಯಾ ಅಖ್ತರ್​ ಬಾಲಿವುಡ್​ಗೆ ಪರಿಚಯಿಸುವ ಜವಾಬ್ದಾರಿ ಹೊತ್ತಿದ್ದಾರೆ.

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ. ಈ ಸಿನಿಮಾವನ್ನು ಜೋಯಾ ಅವರೇ ನಿರ್ಮಾಣ ಮಾಡಿದ್ದರು. ಈಗ ಅವರು ಎಸ್​ಆರ್​​ಕೆ ಮಗಳನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಒಂದು ಕಾಮಿಕ್​ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಸುಹಾನಾ ಜತೆ ಇನ್ನೂ ಕೆಲ ಯುವ ನಟ-ನಟಿಯರು ಸಿನಿಮಾದಲ್ಲಿ ಇರಲಿದ್ದಾರಂತೆ. ಸುಹಾನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಹಾನಾ ಈಗಾಗಲೇ ಕಿರುಚಿತ್ರದ ಮೂಲಕ ನಟನೆ ತೋರಿಸಿದ್ದಾರೆ. ಈಗ ಅವರನ್ನು ಬೆಳ್ಳಿ ಪರದೆ ಮೇಲೆ ನೋಡೋಕೆ ಅಭಿಮಾನಿಗಳು ಕಾತುರರಾಗಿದ್ದಾರೆ.

ಸ್ಟಾರ್​ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂದರೆ ನೆನಪಾಗೋದು ನಿರ್ಮಾಪಕ ಕರಣ್​ ಜೋಹರ್​. ಬಾಲಿವುಡ್​ಗೆ ಸಾಕಷ್ಟು ಸ್ಟಾರ್​ ಕಿಡ್​ಗಳನ್ನು ಪರಿಚಯಿಸಿದ ಖ್ಯಾತಿ ಅವರಿಗಿದೆ.  ಹೀಗಾಗಿ ಈ ಸಿನಿಮಾಗೆ ಕರಣ್​ ನಿರ್ಮಾಣ ಇರುತ್ತದೆಯೋ ಅಥವಾ ಜೋಯಾ ಅವರೇ ಈ ಜವಾಬ್ದಾರಿ ಹೊತ್ತುಕೊಳ್ಳುತ್ತಾರೋ ಅನ್ನೋದು ಸದ್ಯದ ಕುತೂಹಲ.

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್ ಖಾನ್​​​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 11:42 am, Wed, 18 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ