AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ
ಸುಹಾನಾ ಖಾನ್
TV9 Web
| Edited By: |

Updated on:Aug 18, 2021 | 12:07 PM

Share

ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ಈ ಮೊದಲಿನಿಂದಲೂ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಹಿಂಬಾಲಕರನ್ನು ಹೊಂದಿರುವ ಅವರು, ತಮ್ಮ ಬೋಲ್ಡ್​ ಪೋಸ್ಟ್​ಗಳ ಮೂಲಕ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಸುಹಾನಾ ಅವರನ್ನು ಸ್ಟಾರ್​ ನಿರ್ದೇಶಕಿ ಜೋಯಾ ಅಖ್ತರ್​ ಬಾಲಿವುಡ್​ಗೆ ಪರಿಚಯಿಸುವ ಜವಾಬ್ದಾರಿ ಹೊತ್ತಿದ್ದಾರೆ.

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ. ಈ ಸಿನಿಮಾವನ್ನು ಜೋಯಾ ಅವರೇ ನಿರ್ಮಾಣ ಮಾಡಿದ್ದರು. ಈಗ ಅವರು ಎಸ್​ಆರ್​​ಕೆ ಮಗಳನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಒಂದು ಕಾಮಿಕ್​ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಸುಹಾನಾ ಜತೆ ಇನ್ನೂ ಕೆಲ ಯುವ ನಟ-ನಟಿಯರು ಸಿನಿಮಾದಲ್ಲಿ ಇರಲಿದ್ದಾರಂತೆ. ಸುಹಾನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಹಾನಾ ಈಗಾಗಲೇ ಕಿರುಚಿತ್ರದ ಮೂಲಕ ನಟನೆ ತೋರಿಸಿದ್ದಾರೆ. ಈಗ ಅವರನ್ನು ಬೆಳ್ಳಿ ಪರದೆ ಮೇಲೆ ನೋಡೋಕೆ ಅಭಿಮಾನಿಗಳು ಕಾತುರರಾಗಿದ್ದಾರೆ.

ಸ್ಟಾರ್​ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂದರೆ ನೆನಪಾಗೋದು ನಿರ್ಮಾಪಕ ಕರಣ್​ ಜೋಹರ್​. ಬಾಲಿವುಡ್​ಗೆ ಸಾಕಷ್ಟು ಸ್ಟಾರ್​ ಕಿಡ್​ಗಳನ್ನು ಪರಿಚಯಿಸಿದ ಖ್ಯಾತಿ ಅವರಿಗಿದೆ.  ಹೀಗಾಗಿ ಈ ಸಿನಿಮಾಗೆ ಕರಣ್​ ನಿರ್ಮಾಣ ಇರುತ್ತದೆಯೋ ಅಥವಾ ಜೋಯಾ ಅವರೇ ಈ ಜವಾಬ್ದಾರಿ ಹೊತ್ತುಕೊಳ್ಳುತ್ತಾರೋ ಅನ್ನೋದು ಸದ್ಯದ ಕುತೂಹಲ.

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್ ಖಾನ್​​​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 11:42 am, Wed, 18 August 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!