AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

Shah Rukh Khan Health Update: ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು
ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: May 24, 2024 | 6:55 AM

ಶಾರುಖ್ ಖಾನ್ (Shah Rukh Khan) ಅವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು. ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರಿಗೆ ಸನ್​ ಸ್ಟ್ರೋಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಅಸಲಿಗೆ ಅವರಿಗೆ ಸನ್​ ಸ್ಟ್ರೋಕ್ ಆಗಿಯೇ ಇಲ್ಲವಂತೆ. ಶಾರುಖ್ ಖಾನ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಇದು ವೈರಲ್ ಫಿವರ್ ಅನ್ನೋದು ಬಳಿಕ ಗೊತ್ತಾಗಿದೆ. ಸದ್ಯ ಶಾರುಖ್ ಖಾನ್ ಅವರು ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಅವರು ಮುಂಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಶಾರುಖ್ ಖಾನ್ ಅವರು ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಸಹ ಮಾಲಿಕತ್ವ ಹೊಂದಿದ್ದಾರೆ. ಕೆಕೆಆರ್ ಈ ಬಾರಿ ಫೈನಲ್ ತಲುಪಿದೆ. ಶಾರುಖ್ ಖಾನ್ ಅವರು ಕುಟುಂಬದವರ ಜೊತೆ ಫೈನಲ್ ನೋಡಲು ಚೆನ್ನೈ ತೆರಳಲಿದ್ದಾರಂತೆ. ಅವರಿಗೆ ಅನಾರೋಗ್ಯ ಆಗಿದೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದರು. ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿರೋ ವಿಚಾರ ಕೇಳಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು. ಆ ಬಳಿಕ ಅದು ವೈರಲ್ ಫಿವರ್ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್ ಆರೋಗ್ಯ ಹೇಗಿದೆ? ಅಪ್​ಡೇಟ್ ಕೊಟ್ಟ ಜೂಹಿ ಚಾವ್ಲಾ

ವರದಿಗಳ ಪ್ರಕಾರ ಗುರುವಾರ (ಮೇ 23) ಸಂಜೆ ಶಾರುಖ್ ಖಾನ್ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅವರ ಕುಟುಂಬದವರು ಶಾರುಖ್​ಗೆ ಸಾತ್ ನೀಡಿದ್ದಾರೆ. ಇತ್ತೀಚೆಗೆ ಶಾರುಖ್ ಆರೋಗ್ಯದ ಬಗ್ಗೆ ಜೂಹಿ ಚಾವ್ಲಾ ಅವರು ಮಾಹಿತಿ ನೀಡಿದ್ದರು. ‘ಶಾರುಖ್ ಖಾನ್ ಈಗ ಆರೋಗ್ಯವಾಗಿದ್ದಾರೆ. ಅವರು ಐಪಿಎಲ್ ಫಿನಾಲೆ ನೋಡೋಕೆ ತೆರಳಲಿದ್ದಾರೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ