AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

Shah Rukh Khan Health Update: ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು.

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು
ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 24, 2024 | 6:55 AM

Share

ಶಾರುಖ್ ಖಾನ್ (Shah Rukh Khan) ಅವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದರು. ಕೆಲವು ವರದಿಗಳ ಪ್ರಕಾರ ಶಾರುಖ್ ಖಾನ್ ಅವರಿಗೆ ಸನ್​ ಸ್ಟ್ರೋಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಅಸಲಿಗೆ ಅವರಿಗೆ ಸನ್​ ಸ್ಟ್ರೋಕ್ ಆಗಿಯೇ ಇಲ್ಲವಂತೆ. ಶಾರುಖ್ ಖಾನ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಇದು ವೈರಲ್ ಫಿವರ್ ಅನ್ನೋದು ಬಳಿಕ ಗೊತ್ತಾಗಿದೆ. ಸದ್ಯ ಶಾರುಖ್ ಖಾನ್ ಅವರು ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ ಅವರು ಮುಂಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಶಾರುಖ್ ಖಾನ್ ಅವರು ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಸಹ ಮಾಲಿಕತ್ವ ಹೊಂದಿದ್ದಾರೆ. ಕೆಕೆಆರ್ ಈ ಬಾರಿ ಫೈನಲ್ ತಲುಪಿದೆ. ಶಾರುಖ್ ಖಾನ್ ಅವರು ಕುಟುಂಬದವರ ಜೊತೆ ಫೈನಲ್ ನೋಡಲು ಚೆನ್ನೈ ತೆರಳಲಿದ್ದಾರಂತೆ. ಅವರಿಗೆ ಅನಾರೋಗ್ಯ ಆಗಿದೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದರು. ಈಗ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಿರೋ ವಿಚಾರ ಕೇಳಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ಶಾರುಖ್ ಖಾನ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರಿಗೆ ಸಣ್ಣ ಪುಟ್ಟ ತೊಂದರೆ ಎದುರಾದರೂ ಫ್ಯಾನ್ಸ್ ವಲಯದಲ್ಲಿ ಆತಂಕ ಸೃಷ್ಟಿ ಆಗುತ್ತದೆ. ಶಾರುಖ್ ಖಾನ್​ಗೆ ಸನ್​ಸ್ಟ್ರೋಕ್ ಆಗಿದೆ ಎಂದಾಗಲೂ ಎಲ್ಲರೂ ಗಾಬರಿ ಆಗಿದ್ದರು. ಆ ಬಳಿಕ ಅದು ವೈರಲ್ ಫಿವರ್ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್ ಆರೋಗ್ಯ ಹೇಗಿದೆ? ಅಪ್​ಡೇಟ್ ಕೊಟ್ಟ ಜೂಹಿ ಚಾವ್ಲಾ

ವರದಿಗಳ ಪ್ರಕಾರ ಗುರುವಾರ (ಮೇ 23) ಸಂಜೆ ಶಾರುಖ್ ಖಾನ್ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅವರ ಕುಟುಂಬದವರು ಶಾರುಖ್​ಗೆ ಸಾತ್ ನೀಡಿದ್ದಾರೆ. ಇತ್ತೀಚೆಗೆ ಶಾರುಖ್ ಆರೋಗ್ಯದ ಬಗ್ಗೆ ಜೂಹಿ ಚಾವ್ಲಾ ಅವರು ಮಾಹಿತಿ ನೀಡಿದ್ದರು. ‘ಶಾರುಖ್ ಖಾನ್ ಈಗ ಆರೋಗ್ಯವಾಗಿದ್ದಾರೆ. ಅವರು ಐಪಿಎಲ್ ಫಿನಾಲೆ ನೋಡೋಕೆ ತೆರಳಲಿದ್ದಾರೆ’ ಎಂದು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್