AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ

‘ಕುಚ್​ ಕುಚ್ ಹೋತಾ ಹೈ’ ಸಿನಿಮಾ ರಿಲೀಸ್ ಆಗಿ 25 ವರ್ಷ ಕಳೆದಿದೆ. ಈ ವಿಶೇಷ ಸಂದರ್ಭದಲ್ಲಿ ಕರಣ್ ಜೋಹರ್ ಅವರು ವಿಶೇಷ ಶೋ ಆಯೋಜನೆ ಮಾಡಿದ್ದರು. ಇದಕ್ಕೆ ಶಾರುಖ್ ಖಾನ್ ಅವರು ವೈ+ ಸೆಕ್ಯುರಿಟಿ ಜೊತೆ ಥಿಯೇಟರ್​ಗೆ ಬಂದಿದ್ದಾರೆ.

ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ
ಶಾರುಖ್
ರಾಜೇಶ್ ದುಗ್ಗುಮನೆ
|

Updated on: Oct 17, 2023 | 7:07 AM

Share

ಕೊಲೆ ಬೆದರಿಕೆ ಬಂದಿದ್ದರಿಂದ ಶಾರುಖ್ ಖಾನ್ (Shah Rukh Khan) ಅವರಿಗೆ ಸರ್ಕಾರದ ಕಡೆಯಿಂದ Y+ ಭದ್ರತೆ ನೀಡಲಾಯಿತು. ಇದಾದ ಬಳಿಕ ಅವರು ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಶಾರುಖ್​ಗೆ ಭದ್ರತೆ ಹೆಚ್ಚಿಸಿದ ಬಳಿಕ ಇದೇ ಮೊದಲ ಬಾರಿಗೆ ಅವರು ಪಬ್ಲಿಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ ಅವರನ್ನು ಭೇಟಿ ಮಾಡೋದು ಈಗ ಮತ್ತಷ್ಟು ಕಷ್ಟ ಎಂದು ಅಭಿಮಾನಿಗಳು ಮಾತನಾಡಿಕೊಂಡಿದ್ದಾರೆ.

ಶಾರುಖ್ ಖಾನ್, ಕಾಜೋಲ್,  ರಾಣಿ ಮುಖರ್ಜಿ ನಟನೆಯ, ಕರಣ್ ಜೋಹರ್ ನಿರ್ದೇಶನದ ‘ಕುಚ್​ ಕುಚ್ ಹೋತಾ ಹೈ’ ಸಿನಿಮಾ ರಿಲೀಸ್ ಆಗಿ 25 ವರ್ಷ ಕಳೆದಿದೆ. ಈ ವಿಶೇಷ ಸಂದರ್ಭದಲ್ಲಿ ಕರಣ್ ಜೋಹರ್ ಅವರು ವಿಶೇಷ ಶೋ ಆಯೋಜನೆ ಮಾಡಿದ್ದರು. ಇದಕ್ಕೆ ಶಾರುಖ್ ಖಾನ್ ಅವರು ವೈ+ ಸೆಕ್ಯುರಿಟಿ ಜೊತೆ ಥಿಯೇಟರ್​ಗೆ ಬಂದಿದ್ದಾರೆ. ಅವರ ಸುತ್ತಲೂ ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ. ಶಾರುಖ್ ಖಾನ್ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಮಿಂಚಿದರೆ, ಕರಣ್ ಜೋಹರ್ ಕೂಡ ಇದೇ ರೀತಿಯ ಡ್ರೆಸ್ ಹಾಕಿದ್ದರು. ರಾಣಿ ಮುಖರ್ಜಿ ಅವರು ಸೀರೆಯಲ್ಲಿ ಗಮನ ಸೆಳೆದಿದ್ದಾರೆ.

ಮನೆಯಿಂದ ಹೊರ ಬಂದ ಬಳಿಕ ಶಾರುಖ್ ಖಾನ್ ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದರು. ಥಿಯೇಟರ್ ಒಳಗೂ ಶಾರುಖ್ ಖಾನ್​ಗೆ ಇವರೇ ಭದ್ರತೆ ಒದಗಿಸಿದ್ದಾರೆ. ಫ್ಯಾನ್ಸ್ ಜೊತೆ ಶಾರುಖ್ ಖಾನ್ ಮಾತನಾಡುವಾಗ ಭದ್ರತಾ ಸಿಬ್ಬಂದಿ ಹೆಚ್ಚು ಕಾಳಜಿವಹಿಸಿದ್ದಾರೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:  ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಾಜ್​ಕುಮಾರ್ ಇರಾನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನುವ ಮಾತು ಹರಿದಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ