AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಕೊನೆಯ ಮಗನಿಗೆ AbRam ಎಂದು ಇಟ್ಟಿದ್ದೇಕೆ? ಇದೆ ಹಿಂದೂ ಕನೆಕ್ಷನ್

ರಜತ್ ಶರ್ಮಾ ಅವರ ‘ಆಪ್​ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಪಾಲ್ಗೊಂಡಿದ್ದರು. ಈ ವೇಳೆ ಫ್ಯಾನ್ಸ್ ಶಾರುಖ್ ಖಾನ್​ಗೆ ಪ್ರಶ್ನೆಗಳನ್ನು ಕೇಳಿದ್ದರು. ಅಬ್​ರಾಮ್ (AbRam) ಎಂದು ಆತನಿಗೆ ಹೆಸರು ಇಟ್ಟಿದ್ದು ಏಕೆ ಎಂದು ಕೇಳಲಾಗಿದೆ.

ಶಾರುಖ್ ಕೊನೆಯ ಮಗನಿಗೆ AbRam ಎಂದು ಇಟ್ಟಿದ್ದೇಕೆ? ಇದೆ ಹಿಂದೂ ಕನೆಕ್ಷನ್
ಅಬ್​ರಾಮ್-ಶಾರುಖ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 23, 2024 | 11:55 AM

Share

ಶಾರುಖ್ ಖಾನ್ ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ಬಾಲಿವುಡ್​ನ ಆಳುತ್ತಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಅವರು ಹಲವು ದಶಕಗಳಿಂದ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಅವರಿಗೆ ಮೂವರು ಮಕ್ಕಳು. ಅವರ ಹಳೆಯ ಸಂದರ್ಶನ ಒಂದು ಈಗ ವೈರಲ್ ಆಗಿದೆ. ಇದರಲ್ಲಿ ಅವರು ಕೊನೆಯ ಮಗನಿಗೆ ಅಬ್​ರಾಮ್ ಎಂದು ಇಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದರು. ಈ ಹೆಸರಿನ ಹಿಂದೆ ಒಂದೊಳ್ಳೆಯ ಉದ್ದೇಶ ಇದೆ.

ರಜತ್ ಶರ್ಮಾ ಅವರ ‘ಆಪ್​ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಪಾಲ್ಗೊಂಡಿದ್ದರು. ಈ ವೇಳೆ ಫ್ಯಾನ್ಸ್ ಶಾರುಖ್ ಖಾನ್​ಗೆ ಪ್ರಶ್ನೆಗಳನ್ನು ಕೇಳಿದ್ದರು. ಅಬ್​ರಾಮ್ (AbRam) ಎಂದು ಆತನಿಗೆ ಹೆಸರು ಇಟ್ಟಿದ್ದು ಏಕೆ ಎಂದು ಕೇಳಲಾಗಿದೆ. ಈ ಬಗ್ಗೆ ಶಾರುಖ್ ಖಾನ್ ಅವರು ಮಾತನಾಡಿದ್ದರು.

‘ಇಸ್ಲಾಂನ ಹಜರತ್ ಇಬ್ರಾಹಿಂ ಅವರನ್ನು ಬೈಬಲ್​ನಲ್ಲಿ ಅಬ್ರಹಾಂ ಎಂದು ಕರೆಯಲಾಗುತ್ತದೆ ಮತ್ತು ಜುದಾಯಿಸಂನಲ್ಲಿ ಇದು ಅಬ್ರಾಮ್. ನನ್ನ ಪತ್ನಿ ಹಿಂದೂ ಹಾಗೂ ನಾನು ಮುಸ್ಲಿಂ. ಹೀಗಾಗಿ, ಮನೆಯಲ್ಲಿ ಅವರಿಗೆ ಸೆಕ್ಯುಲರ್ ಭಾವನೆ ಬರಬೇಕು ಅನ್ನೋದು ನನ್ನ ಆಸೆ. ಇದನ್ನು ಅನೇಕರು ಇಷ್ಟಪಡಲ್ಲ. ಇದು ವಿವಾದ ಕೂಡ ಆಯಿತು. ನಮ್ಮ ದೇಶದಲ್ಲಿ ಇರುವ ಸಾಮರಸ್ಯ ಇಲ್ಲೂ ಇದೆ ಎಂದು ನಂಬುತ್ತೇನೆ’ ಎಂದಿದ್ದಾರೆ ಅವರು.

ಇಂಗ್ಲಿಷ್​ನಲ್ಲಿ ಅವರ ಹೆಸರು AbRam ಎಂದಿದೆ. ರಾಮ್ ಎಂಬುದನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ. ಈ ವಿಚಾರ ಅನೇಕರಿಗೆ ಇಷ್ಟ ಆಗಿದೆ. ಶಾರುಖ್ ಖಾನ್ ಅವರು ಗೌರಿ ಅವರನ್ನು ಪ್ರೀತಿಸಿ ಮದುವೆ ಆಗಿದ್ದಾರೆ. ಅವರಿಗೆ ಪತ್ನಿಯ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಈ ಕಾರಣಕ್ಕೆ ಅವರು ಮನೆಯಲ್ಲಿ ಹಿಂದೂ ಹಬ್ಬಗಳ ಆಚರಣೆಯನ್ನು ಮಾಡುತ್ತಾರೆ.

ಇದನ್ನೂ ಓದಿ: ಶಾರುಖ್ ಖಾನ್​ಗೆ ಆಹಾರದಲ್ಲಿ ಇದನ್ನು ಸೇರಿಸಿಕೊಟ್ಟರೆ ಏನುಬೇಕಾದರೂ ತಿಂತಾರೆ 

ಶಾರುಖ್ ಖಾನ್ ಅವರು ಕಳೆದ ವರ್ಷ ಹ್ಯಾಟ್ರಿಕ್ ಹಿಟ್ ನೀಡಿದ್ದಾರೆ. ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ಬಿಡುಗಡೆ ಕಂಡಿದೆ. ಅವರು ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ 2025ರಲ್ಲಿ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ