ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​

Shah Rukh Khan: ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಮಾಡಿದ ಟ್ವೀಟ್​ ಕಂಡು ಶಾರುಖ್​ ಖಾನ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ವಿದೇಶದಲ್ಲಿ ತಮಗಾದ ಅನುಭವಗಳನ್ನೆಲ್ಲ ಶಾರುಖ್​ ಫ್ಯಾನ್ಸ್​ ಹಂಚಿಕೊಳ್ಳುತ್ತಿದ್ದಾರೆ.

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​
ಆರ್ಯನ್​ ಖಾನ್​, ಶಾರುಖ್​ ಖಾನ್​
Follow us
| Updated By: ಮದನ್​ ಕುಮಾರ್​

Updated on: Jan 03, 2022 | 7:10 AM

ಭಾರತದ ಸಿನಿಮಾಗಳು ವಿಶ್ವಾದ್ಯಂತ ಮನರಂಜನೆ ನೀಡುತ್ತವೆ. ಅದರಲ್ಲೂ ಬಾಲಿವುಡ್​ (Bollywood) ಚಿತ್ರಗಳಿಗೆ ಮಾರುಕಟ್ಟೆ ದೊಡ್ಡದಿದೆ. ಅನೇಕ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ನೋಡುತ್ತಾರೆ. ವಿಶ್ವಾದ್ಯಂತ ರಿಲೀಸ್​ ಆಗುವ ಮೂಲಕ ಬಾಲಿವುಡ್​ ಚಿತ್ರಗಳು ತಮ್ಮ ವ್ಯಾಪ್ತಿ ವಿಸ್ತರಿಸಿಕೊಂಡಿವೆ. ಹಾಗಾಗಿ ಬಾಲಿವುಡ್​ ನಟರಿಗೆ ಪ್ರಪಂಚದೆಲ್ಲೆಡೆ ಫ್ಯಾನ್ಸ್​ ಇದ್ದಾರೆ. ಅದರಲ್ಲೂ ಶಾರುಖ್​ ಖಾನ್​ (Shah Rukh Khan) ಅವರನ್ನು ಅನೇಕ ವಿದೇಶಿಗರು ಇಷ್ಟಪಡುತ್ತಾರೆ. ಅದಕ್ಕೆ ಹೊಸ ಉದಾಹರಣೆಯೊಂದು ಸಿಕ್ಕಿದೆ. ಈ ಕುರಿತು ಪ್ರೊಫೆಸರ್​ ಒಬ್ಬರು ಟ್ವೀಟ್​ ಮಾಡಿದ್ದಾರೆ. ಈಜಿಪ್ಟ್​ನಲ್ಲಿ (Egypt) ತಮಗೆ ಆದ ಅನುಭವವನ್ನು ಅವರು ಬರೆದುಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ತನ್ನ ಜೀವನದಲ್ಲಿ ನಡೆದ ಘಟನೆಗಳನ್ನು ಕೂಡ ಮೆಲುಕು ಹಾಕಿದ್ದಾರೆ.

ಹರಿಯಾಣದ ಅಶೋಕ ಯೂನಿವರ್ಸಿಟಿಯ ಅರ್ಥಶಾಸ್ತ್ರದ ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಅವರು ಇತ್ತೀಚಗೆ ಈಜಿಪ್ಟ್​ಗೆ ತೆರಳಿದ್ದರು. ಆಗ ಅವರಿಗೆ ಒಂದು ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಆಗ ಆ ವಿದೇಶಿ ನೆಲದಲ್ಲಿ ಅವರ ಸಹಾಯಕ್ಕೆ ಬಂದಿದ್ದು ಒಬ್ಬ ಶಾರುಖ್​ ಅಭಿಮಾನಿ! ಅದನ್ನು ಅಶ್ವಿನಿ ದೇಶಪಾಂಡೆ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.

ಈಜಿಪ್ಟ್​ನಲ್ಲಿ ಒಬ್ಬ ಟ್ರಾವೆಲ್​ ಏಜೆಂಟ್​ಗೆ ಅಶ್ವಿನಿ ದೇಶಪಾಂಡೆ ಹಣ ವರ್ಗಾವಣೆ ಮಾಡಬೇಕಿತ್ತು. ಆದರೆ ಅದಕ್ಕೆ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಟ್ರಾವೆಲ್​ ಏಜೆಂಟ್​ ಕೂಡ ಶಾರುಖ್​ ಖಾನ್​ ಅಭಿಮಾನಿ ಆಗಿದ್ದರಿಂದ ಆತ ಸಹಾಯ ಮಾಡಿದ. ‘ನೀವು ಶಾರುಖ್​ ಖಾನ್​ ಅವರ ದೇಶದವರು. ಹಾಗಾಗಿ ನಿಮ್ಮನ್ನು ನಾನು ನಂಬುತ್ತೇನೆ. ಮೊದಲು ನಿಮಗೆ ಬುಕಿಂಗ್​ ಮಾಡುತ್ತೇನೆ. ನಂತರ ಯಾವಾಗ ಬೇಕಿದ್ದರೂ ನೀವು ಹಣ ನೀಡಿ. ಶಾರುಖ್​ ಖಾನ್​ ಮೇಲಿನ ಅಭಿಮಾನಕ್ಕಲ್ಲದೇ ಬೇರೆ ಯಾವ ಕಾರಣಕ್ಕೂ ನಾನು ಈ ಸಹಾಯ ಮಾಡುತ್ತಿರಲಿಲ್ಲ’ ಅಂತ ಆತ ಹೇಳಿದ ಎಂದು ಅಶ್ವಿನಿ ದೇಶಪಾಂಡೆ ಟ್ವೀಟ್​ ಮಾಡಿದ್ದಾರೆ.

ಅಶ್ವಿನಿ ಅವರ ಟ್ವೀಟ್​ ಕಂಡು ಶಾರುಖ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಾವೂ ಸಹ ವಿದೇಶಕ್ಕೆ ಹೋದಾಗ ಇದೇ ರೀತಿಯ ಘಟನೆಗಳು ನಡೆದಿದ್ದವು ಎಂಬುದನ್ನು ಅವರೆಲ್ಲ ಕಮೆಂಟ್​ಗಳ ಮೂಲಕ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿದೇಶದಲ್ಲಿ ಶಾರುಖ್​ ಹವಾ ಹೇಗಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಸದ್ಯ ಶಾರುಖ್​ ಖಾನ್​ ಅವರು ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಶಾರುಖ್​ ಕೊಂಚ ಮಂಕಾಗಿದ್ದರು. ಇತ್ತೀಚೆಗೆ ಅವರು ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್​ ಸೆಟ್​ಗೆ ಬಂದ ಅವರ ಫೋಟೋಗಳು ಸಖತ್​ ವೈರಲ್​ ಆಗಿದ್ದವು. ಒಮಿಕ್ರಾನ್​ ಕಾರಣದಿಂದ ‘ಪಠಾಣ್​’ ಚಿತ್ರದ ಕೆಲಸಗಳು ಮತ್ತೆ ವಿಳಂಬ ಆಗುವ ಸಾಧ್ಯತೆ ಇದೆ. ಈ ವಿಷಯ ಕೇಳಿ ಶಾರುಖ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ