AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​

Shah Rukh Khan: ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಮಾಡಿದ ಟ್ವೀಟ್​ ಕಂಡು ಶಾರುಖ್​ ಖಾನ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ವಿದೇಶದಲ್ಲಿ ತಮಗಾದ ಅನುಭವಗಳನ್ನೆಲ್ಲ ಶಾರುಖ್​ ಫ್ಯಾನ್ಸ್​ ಹಂಚಿಕೊಳ್ಳುತ್ತಿದ್ದಾರೆ.

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Updated By: ಮದನ್​ ಕುಮಾರ್​|

Updated on: Jan 03, 2022 | 7:10 AM

Share

ಭಾರತದ ಸಿನಿಮಾಗಳು ವಿಶ್ವಾದ್ಯಂತ ಮನರಂಜನೆ ನೀಡುತ್ತವೆ. ಅದರಲ್ಲೂ ಬಾಲಿವುಡ್​ (Bollywood) ಚಿತ್ರಗಳಿಗೆ ಮಾರುಕಟ್ಟೆ ದೊಡ್ಡದಿದೆ. ಅನೇಕ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ನೋಡುತ್ತಾರೆ. ವಿಶ್ವಾದ್ಯಂತ ರಿಲೀಸ್​ ಆಗುವ ಮೂಲಕ ಬಾಲಿವುಡ್​ ಚಿತ್ರಗಳು ತಮ್ಮ ವ್ಯಾಪ್ತಿ ವಿಸ್ತರಿಸಿಕೊಂಡಿವೆ. ಹಾಗಾಗಿ ಬಾಲಿವುಡ್​ ನಟರಿಗೆ ಪ್ರಪಂಚದೆಲ್ಲೆಡೆ ಫ್ಯಾನ್ಸ್​ ಇದ್ದಾರೆ. ಅದರಲ್ಲೂ ಶಾರುಖ್​ ಖಾನ್​ (Shah Rukh Khan) ಅವರನ್ನು ಅನೇಕ ವಿದೇಶಿಗರು ಇಷ್ಟಪಡುತ್ತಾರೆ. ಅದಕ್ಕೆ ಹೊಸ ಉದಾಹರಣೆಯೊಂದು ಸಿಕ್ಕಿದೆ. ಈ ಕುರಿತು ಪ್ರೊಫೆಸರ್​ ಒಬ್ಬರು ಟ್ವೀಟ್​ ಮಾಡಿದ್ದಾರೆ. ಈಜಿಪ್ಟ್​ನಲ್ಲಿ (Egypt) ತಮಗೆ ಆದ ಅನುಭವವನ್ನು ಅವರು ಬರೆದುಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ತನ್ನ ಜೀವನದಲ್ಲಿ ನಡೆದ ಘಟನೆಗಳನ್ನು ಕೂಡ ಮೆಲುಕು ಹಾಕಿದ್ದಾರೆ.

ಹರಿಯಾಣದ ಅಶೋಕ ಯೂನಿವರ್ಸಿಟಿಯ ಅರ್ಥಶಾಸ್ತ್ರದ ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಅವರು ಇತ್ತೀಚಗೆ ಈಜಿಪ್ಟ್​ಗೆ ತೆರಳಿದ್ದರು. ಆಗ ಅವರಿಗೆ ಒಂದು ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಆಗ ಆ ವಿದೇಶಿ ನೆಲದಲ್ಲಿ ಅವರ ಸಹಾಯಕ್ಕೆ ಬಂದಿದ್ದು ಒಬ್ಬ ಶಾರುಖ್​ ಅಭಿಮಾನಿ! ಅದನ್ನು ಅಶ್ವಿನಿ ದೇಶಪಾಂಡೆ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.

ಈಜಿಪ್ಟ್​ನಲ್ಲಿ ಒಬ್ಬ ಟ್ರಾವೆಲ್​ ಏಜೆಂಟ್​ಗೆ ಅಶ್ವಿನಿ ದೇಶಪಾಂಡೆ ಹಣ ವರ್ಗಾವಣೆ ಮಾಡಬೇಕಿತ್ತು. ಆದರೆ ಅದಕ್ಕೆ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಟ್ರಾವೆಲ್​ ಏಜೆಂಟ್​ ಕೂಡ ಶಾರುಖ್​ ಖಾನ್​ ಅಭಿಮಾನಿ ಆಗಿದ್ದರಿಂದ ಆತ ಸಹಾಯ ಮಾಡಿದ. ‘ನೀವು ಶಾರುಖ್​ ಖಾನ್​ ಅವರ ದೇಶದವರು. ಹಾಗಾಗಿ ನಿಮ್ಮನ್ನು ನಾನು ನಂಬುತ್ತೇನೆ. ಮೊದಲು ನಿಮಗೆ ಬುಕಿಂಗ್​ ಮಾಡುತ್ತೇನೆ. ನಂತರ ಯಾವಾಗ ಬೇಕಿದ್ದರೂ ನೀವು ಹಣ ನೀಡಿ. ಶಾರುಖ್​ ಖಾನ್​ ಮೇಲಿನ ಅಭಿಮಾನಕ್ಕಲ್ಲದೇ ಬೇರೆ ಯಾವ ಕಾರಣಕ್ಕೂ ನಾನು ಈ ಸಹಾಯ ಮಾಡುತ್ತಿರಲಿಲ್ಲ’ ಅಂತ ಆತ ಹೇಳಿದ ಎಂದು ಅಶ್ವಿನಿ ದೇಶಪಾಂಡೆ ಟ್ವೀಟ್​ ಮಾಡಿದ್ದಾರೆ.

ಅಶ್ವಿನಿ ಅವರ ಟ್ವೀಟ್​ ಕಂಡು ಶಾರುಖ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಾವೂ ಸಹ ವಿದೇಶಕ್ಕೆ ಹೋದಾಗ ಇದೇ ರೀತಿಯ ಘಟನೆಗಳು ನಡೆದಿದ್ದವು ಎಂಬುದನ್ನು ಅವರೆಲ್ಲ ಕಮೆಂಟ್​ಗಳ ಮೂಲಕ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿದೇಶದಲ್ಲಿ ಶಾರುಖ್​ ಹವಾ ಹೇಗಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಸದ್ಯ ಶಾರುಖ್​ ಖಾನ್​ ಅವರು ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಶಾರುಖ್​ ಕೊಂಚ ಮಂಕಾಗಿದ್ದರು. ಇತ್ತೀಚೆಗೆ ಅವರು ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್​ ಸೆಟ್​ಗೆ ಬಂದ ಅವರ ಫೋಟೋಗಳು ಸಖತ್​ ವೈರಲ್​ ಆಗಿದ್ದವು. ಒಮಿಕ್ರಾನ್​ ಕಾರಣದಿಂದ ‘ಪಠಾಣ್​’ ಚಿತ್ರದ ಕೆಲಸಗಳು ಮತ್ತೆ ವಿಳಂಬ ಆಗುವ ಸಾಧ್ಯತೆ ಇದೆ. ಈ ವಿಷಯ ಕೇಳಿ ಶಾರುಖ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ