AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​

Shah Rukh Khan: ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಮಾಡಿದ ಟ್ವೀಟ್​ ಕಂಡು ಶಾರುಖ್​ ಖಾನ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ವಿದೇಶದಲ್ಲಿ ತಮಗಾದ ಅನುಭವಗಳನ್ನೆಲ್ಲ ಶಾರುಖ್​ ಫ್ಯಾನ್ಸ್​ ಹಂಚಿಕೊಳ್ಳುತ್ತಿದ್ದಾರೆ.

ವಿದೇಶದಲ್ಲಿ ಶಾರುಖ್​ ಫ್ಯಾನ್​ ಅಂತ ಹೇಳಿಕೊಂಡ್ರೆ ಸಿಗುತ್ತೆ ವಿಶೇಷ ಗೌರವ; ಸಾಕ್ಷಿ ಸಮೇತ ವಿವರಿಸಿದ ಪ್ರೊಫೆಸರ್​
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Edited By: |

Updated on: Jan 03, 2022 | 7:10 AM

Share

ಭಾರತದ ಸಿನಿಮಾಗಳು ವಿಶ್ವಾದ್ಯಂತ ಮನರಂಜನೆ ನೀಡುತ್ತವೆ. ಅದರಲ್ಲೂ ಬಾಲಿವುಡ್​ (Bollywood) ಚಿತ್ರಗಳಿಗೆ ಮಾರುಕಟ್ಟೆ ದೊಡ್ಡದಿದೆ. ಅನೇಕ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ನೋಡುತ್ತಾರೆ. ವಿಶ್ವಾದ್ಯಂತ ರಿಲೀಸ್​ ಆಗುವ ಮೂಲಕ ಬಾಲಿವುಡ್​ ಚಿತ್ರಗಳು ತಮ್ಮ ವ್ಯಾಪ್ತಿ ವಿಸ್ತರಿಸಿಕೊಂಡಿವೆ. ಹಾಗಾಗಿ ಬಾಲಿವುಡ್​ ನಟರಿಗೆ ಪ್ರಪಂಚದೆಲ್ಲೆಡೆ ಫ್ಯಾನ್ಸ್​ ಇದ್ದಾರೆ. ಅದರಲ್ಲೂ ಶಾರುಖ್​ ಖಾನ್​ (Shah Rukh Khan) ಅವರನ್ನು ಅನೇಕ ವಿದೇಶಿಗರು ಇಷ್ಟಪಡುತ್ತಾರೆ. ಅದಕ್ಕೆ ಹೊಸ ಉದಾಹರಣೆಯೊಂದು ಸಿಕ್ಕಿದೆ. ಈ ಕುರಿತು ಪ್ರೊಫೆಸರ್​ ಒಬ್ಬರು ಟ್ವೀಟ್​ ಮಾಡಿದ್ದಾರೆ. ಈಜಿಪ್ಟ್​ನಲ್ಲಿ (Egypt) ತಮಗೆ ಆದ ಅನುಭವವನ್ನು ಅವರು ಬರೆದುಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ತನ್ನ ಜೀವನದಲ್ಲಿ ನಡೆದ ಘಟನೆಗಳನ್ನು ಕೂಡ ಮೆಲುಕು ಹಾಕಿದ್ದಾರೆ.

ಹರಿಯಾಣದ ಅಶೋಕ ಯೂನಿವರ್ಸಿಟಿಯ ಅರ್ಥಶಾಸ್ತ್ರದ ಪ್ರೊಫೆಸರ್​ ಅಶ್ವಿನಿ ದೇಶಪಾಂಡೆ ಅವರು ಇತ್ತೀಚಗೆ ಈಜಿಪ್ಟ್​ಗೆ ತೆರಳಿದ್ದರು. ಆಗ ಅವರಿಗೆ ಒಂದು ಅನಿವಾರ್ಯ ಪರಿಸ್ಥಿತಿ ಎದುರಾಗಿತ್ತು. ಆಗ ಆ ವಿದೇಶಿ ನೆಲದಲ್ಲಿ ಅವರ ಸಹಾಯಕ್ಕೆ ಬಂದಿದ್ದು ಒಬ್ಬ ಶಾರುಖ್​ ಅಭಿಮಾನಿ! ಅದನ್ನು ಅಶ್ವಿನಿ ದೇಶಪಾಂಡೆ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ.

ಈಜಿಪ್ಟ್​ನಲ್ಲಿ ಒಬ್ಬ ಟ್ರಾವೆಲ್​ ಏಜೆಂಟ್​ಗೆ ಅಶ್ವಿನಿ ದೇಶಪಾಂಡೆ ಹಣ ವರ್ಗಾವಣೆ ಮಾಡಬೇಕಿತ್ತು. ಆದರೆ ಅದಕ್ಕೆ ಕೆಲವು ಸಮಸ್ಯೆಗಳು ಎದುರಾಗಿದ್ದವು. ಆದರೆ ಆ ಟ್ರಾವೆಲ್​ ಏಜೆಂಟ್​ ಕೂಡ ಶಾರುಖ್​ ಖಾನ್​ ಅಭಿಮಾನಿ ಆಗಿದ್ದರಿಂದ ಆತ ಸಹಾಯ ಮಾಡಿದ. ‘ನೀವು ಶಾರುಖ್​ ಖಾನ್​ ಅವರ ದೇಶದವರು. ಹಾಗಾಗಿ ನಿಮ್ಮನ್ನು ನಾನು ನಂಬುತ್ತೇನೆ. ಮೊದಲು ನಿಮಗೆ ಬುಕಿಂಗ್​ ಮಾಡುತ್ತೇನೆ. ನಂತರ ಯಾವಾಗ ಬೇಕಿದ್ದರೂ ನೀವು ಹಣ ನೀಡಿ. ಶಾರುಖ್​ ಖಾನ್​ ಮೇಲಿನ ಅಭಿಮಾನಕ್ಕಲ್ಲದೇ ಬೇರೆ ಯಾವ ಕಾರಣಕ್ಕೂ ನಾನು ಈ ಸಹಾಯ ಮಾಡುತ್ತಿರಲಿಲ್ಲ’ ಅಂತ ಆತ ಹೇಳಿದ ಎಂದು ಅಶ್ವಿನಿ ದೇಶಪಾಂಡೆ ಟ್ವೀಟ್​ ಮಾಡಿದ್ದಾರೆ.

ಅಶ್ವಿನಿ ಅವರ ಟ್ವೀಟ್​ ಕಂಡು ಶಾರುಖ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಾವೂ ಸಹ ವಿದೇಶಕ್ಕೆ ಹೋದಾಗ ಇದೇ ರೀತಿಯ ಘಟನೆಗಳು ನಡೆದಿದ್ದವು ಎಂಬುದನ್ನು ಅವರೆಲ್ಲ ಕಮೆಂಟ್​ಗಳ ಮೂಲಕ ತಿಳಿಸಿದ್ದಾರೆ. ಒಟ್ಟಿನಲ್ಲಿ ವಿದೇಶದಲ್ಲಿ ಶಾರುಖ್​ ಹವಾ ಹೇಗಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ಸದ್ಯ ಶಾರುಖ್​ ಖಾನ್​ ಅವರು ‘ಪಠಾಣ್​’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಶಾರುಖ್​ ಕೊಂಚ ಮಂಕಾಗಿದ್ದರು. ಇತ್ತೀಚೆಗೆ ಅವರು ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್​ ಸೆಟ್​ಗೆ ಬಂದ ಅವರ ಫೋಟೋಗಳು ಸಖತ್​ ವೈರಲ್​ ಆಗಿದ್ದವು. ಒಮಿಕ್ರಾನ್​ ಕಾರಣದಿಂದ ‘ಪಠಾಣ್​’ ಚಿತ್ರದ ಕೆಲಸಗಳು ಮತ್ತೆ ವಿಳಂಬ ಆಗುವ ಸಾಧ್ಯತೆ ಇದೆ. ಈ ವಿಷಯ ಕೇಳಿ ಶಾರುಖ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಪುತ್ರ ಆರ್ಯನ್​ ವಿವಾದದ ಬಳಿಕ ಮೊದಲ ಬಾರಿಗೆ ಕೆಲಸಕ್ಕೆ ಮರಳಿದ ಶಾರುಖ್​: ಫೋಟೋ ವೈರಲ್​

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ