AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಮದುವೆ ಡೇಟ್​ ಮುಂದೂಡಿಕೊಳ್ಳಿ’: ಅಭಿಮಾನಿಗೆ ಸಲಹೆ ನೀಡಿದ ‘ಪಠಾಣ್​’ ಹೀರೋ ಶಾರುಖ್​ ಖಾನ್​

AskSRK | Pathaan Movie: ಶಾರುಖ್​ ಖಾನ್​ ಅವರನ್ನು ಒಂದು ವರ್ಗದ ಜನರು ಟ್ರೋಲ್​ ಮಾಡುತ್ತಿದ್ದಾರೆ. ಆದರೆ ಅಪ್ಪಟ ಅಭಿಮಾನಿಗಳು ಮೊದಲಿನಷ್ಟೇ ಪ್ರೀತಿ ತೋರಿಸುತ್ತಿದ್ದಾರೆ.

Shah Rukh Khan: ‘ಮದುವೆ ಡೇಟ್​ ಮುಂದೂಡಿಕೊಳ್ಳಿ’: ಅಭಿಮಾನಿಗೆ ಸಲಹೆ ನೀಡಿದ ‘ಪಠಾಣ್​’ ಹೀರೋ ಶಾರುಖ್​ ಖಾನ್​
ಶಾರುಖ್ ಖಾನ್
TV9 Web
| Edited By: |

Updated on:Dec 18, 2022 | 6:17 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಬಹಳಷ್ಟು ಸುದ್ದಿ ಆಗುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರ ಬಗ್ಗೆ ತುಂಬ ಚರ್ಚೆ ಆಗುತ್ತಿದೆ. ಅವರು ನಟಿಸಿರುವ ಹೊಸ ಸಿನಿಮಾ ‘ಪಠಾಣ್​’ (Pathaan Movie) ಬಿಡುಗಡೆಗೆ ಹತ್ತಿರ ಆಗಿದೆ. 2023ರ ಜನವರಿ 25ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಪರ-ವಿರೋಧದ ಚರ್ಚೆ ಹುಟ್ಟುಹಾಕಿದೆ. ಅದರ ಬೆನ್ನಲ್ಲೇ ‘ಪಠಾಣ್​’ ಚಿತ್ರದ ರಿಲೀಸ್​ ದಿನಾಂಕವನ್ನು (Pathaan Movie Release Date) ಮುಂದೂಡಿಕೊಳ್ಳುವಂತೆ ಅಭಿಮಾನಿಯೊಬ್ಬರು ಶಾರುಖ್​ ಖಾನ್​ಗೆ ಮನವಿ ಮಾಡಿದ್ದಾರೆ. ಅವರಿಗೆ ಶಾರುಖ್ ನೀಡಿದ ಉತ್ತರ ಕೂಡ ಫನ್ನಿಯಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಶಾರುಖ್​ ಖಾನ್​ ಅವರು ಪ್ರಶ್ನೋತ್ತರ ನಡೆಸಿದಾಗ ಈ ಮಜವಾದ ಮಾತುಕತೆ ಆಗಿದೆ. ಆದರ ಬಗ್ಗೆ ಇಲ್ಲಿದೆ ವಿವರ..

ಶಾರುಖ್​ ಖಾನ್​ ಅವರನ್ನು ಒಂದು ವರ್ಗದ ಜನರು ಟ್ರೋಲ್​ ಮಾಡುತ್ತಿದ್ದಾರೆ. ಆದರೆ ಅಪ್ಪಟ ಅಭಿಮಾನಿಗಳು ಮೊದಲಿನಷ್ಟೇ ಪ್ರೀತಿ ತೋರಿಸುತ್ತಿದ್ದಾರೆ. ‘ಪಠಾಣ್​’ ಸಿನಿಮಾ ನೋಡಲು ಶಾರಖ್​ ಫ್ಯಾನ್ಸ್​ ಕಾಯುತ್ತಿದ್ದಾರೆ. ಈ ಸಮಯದಲ್ಲಿ ‘AskSRK’ ಎಂದು ಅಭಿಮಾನಿಗಳ ಜೊತೆ 15 ಮಿನಿಷಗಳ ಕಾಲ ಶಾರುಖ್​ ಖಾನ್​ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ಅವರಿಗೆ ಬಗೆಬಗೆಯ ಪ್ರಶ್ನೆಗಳು ಎದುರಾಗಿವೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Pathaan: ಬಾಯ್ಕಾಟ್​ ಎಂದವರಿಗೆ, ಕೇಸರಿ ಬಿಕಿನಿಗೂ ಕಿರಿಕ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾರುಖ್​ ಖಾನ್​

‘ಸರ್​, ನಾನು ಜನವರಿ 25ರಂದು ಮದುವೆ ಆಗುತ್ತಿದೇನೆ. ನೀವು ದಯವಿಟ್ಟು ಪಠಾಣ್​ ಚಿತ್ರದ ಬಿಡುಗಡೆ ದಿನಾಂಕವನ್ನು ಜನವರಿ 26ಕ್ಕೆ ಮುಂದೂಡಬಹುದೇ? ಆಗ ತುಂಬ ಒಳ್ಳೆಯದಾಗುತ್ತದೆ. ಧನ್ಯವಾದಗಳು’ ಎಂದು ಅಭಿಮಾನಿಯೊಬ್ಬರು ಶಾರುಖ್​ ಖಾನ್​ಗೆ ಹೇಳಿದ್ದಾರೆ. ‘ನೀವು ಜನವರಿ 26ರಂದು ಗಣರಾಜ್ಯೋತ್ಸವದ ಪರೇಡ್​ ಬಳಿಕ ಮದುವೆ ಮಾಡಿಕೊಳ್ಳಿ. ಅಂದು ರಜೆ ಕೂಡ ಇದೆ’ ಎಂದು ಶಾರುಖ್ ಉತ್ತರಿಸಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

ಇದನ್ನೂ ಓದಿ: ​Aryan Khan: ಚಿತ್ರರಂಗಕ್ಕೆ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಎಂಟ್ರಿ; ಬ್ರೇಕಿಂಗ್​ ನ್ಯೂಸ್​ ನೀಡಿದ ಸ್ಟಾರ್​ ಕಿಡ್​

‘ಪಠಾಣ್​’ ಸಿನಿಮಾದಲ್ಲಿ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ ಮಾತ್ರವಲ್ಲದೇ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದು, ಯಶ್​ ರಾಜ್​ ಫಿಲ್ಮ್ಸ್​ ಬ್ಯಾನರ್​ ಮೂಲಕ ನಿರ್ಮಾಣ ಆಗಿದೆ. ವಿರೋಧದ ನಡುವೆಯೂ ಈ ಚಿತ್ರದ ‘ಬೇಷರಂ ರಂಗ್​..’ ಹಾಡು ಸೂಪರ್​ ಹಿಟ್​ ಆಗಿದೆ. ದಿನದಿಂದ ದಿನಕ್ಕೆ ಈ ಹಾಡಿನ ಕ್ರೇಜ್​ ಹೆಚ್ಚಾಗುತ್ತಿದೆ.

ಶಾರುಖ್​ ಖಾನ್​ ಅವರು ಗಲ್ಲಾಪೆಟ್ಟಿಗೆಯಲ್ಲಿ ಗೆಲುವು ಕಾಣದೇ ಬಹಳ ವರ್ಷಗಳಾಗಿವೆ. 2018ರಲ್ಲಿ ಬಂದ ‘ಜೀರೋ’ ಸಿನಿಮಾ ಹೀನಾಯವಾಗಿ ಸೋತ ಬಳಿಕ ಅವರು ನಾಲ್ಕು ವರ್ಷ ಬ್ರೇಕ್​ ತೆಗೆದುಕೊಂಡರು. ಈಗ ‘ಪಠಾಣ್​’ ಮೂಲಕ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾದ ಗೆಲುವು ಅವರಿಗೆ ಬಹಳ ಮುಖ್ಯವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:17 pm, Sun, 18 December 22

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ