AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ನೋಡಲು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಶಾರುಖ್​ ಖಾನ್​ ಅಭಿಮಾನಿಗಳು

Shah Rukh Khan Fans | Bangladesh: ಕಾನೂನಿನ ಅಡೆತಡೆಗಳ ಕಾರಣದಿಂದಾಗಿ ಬಾಂಗ್ಲಾದೇಶದಲ್ಲಿ ‘ಪಠಾಣ್​’ ಸಿನಿಮಾ ರಿಲೀಸ್​ ಆಗಿಲ್ಲ. ಹಾಗಾಗಿ ಅಲ್ಲಿರುವ ಶಾರುಖ್​ ಖಾನ್​ ಅಭಿಮಾನಿಗಳು ಭಾರತಕ್ಕೆ ಬಂದಿದ್ದಾರೆ.

Shah Rukh Khan: ‘ಪಠಾಣ್​’ ನೋಡಲು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಶಾರುಖ್​ ಖಾನ್​ ಅಭಿಮಾನಿಗಳು
ಶಾರುಖ್ ಖಾನ್ ಫ್ಯಾನ್ಸ್
ಮದನ್​ ಕುಮಾರ್​
|

Updated on:Feb 03, 2023 | 10:20 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ‘ಪಠಾಣ್​’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. 30 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಇರುವ ಫ್ಯಾನ್ಸ್​ ಅವರನ್ನು ಇಷ್ಟಪಡುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಇತ್ತೀಚೆಗೆ ರಿಲೀಸ್​ ಆದ ‘ಪಠಾಣ್​’ (Pathan Movie) ಸಿನಿಮಾವನ್ನು ನೋಡಲು ಬಾಂಗ್ಲಾದೇಶದಿಂದ (Bangladesh) ಕೆಲವು ಅಭಿಮಾನಿಗಳು ಭಾರತಕ್ಕೆ ಬಂದಿದ್ದಾರೆ. ಕುಟುಂಬ ಸಮೇತರಾಗಿ ಬಂದ ಈ ಅಭಿಮಾನಿಗಳ ಫೋಟೋ ವೈರಲ್​ ಆಗಿದೆ. ನೆಟ್ಟಿಗರು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಕಾನೂನಿನ ಕೆಲವು ಅಡೆತಡೆಗಳ ಕಾರಣದಿಂದಾಗಿ ಬಾಂಗ್ಲಾದೇಶದಲ್ಲಿ ‘ಪಠಾಣ್​’ ಸಿನಿಮಾ ರಿಲೀಸ್​ ಆಗಿಲ್ಲ. ಆದರೆ ಅಲ್ಲಿರುವ ಶಾರುಖ್​ ಖಾನ್​ ಅಭಿಮಾನಿಗಳ ಉತ್ಸಾಹ ಕಡಿಮೆಯಾಗಿಲ್ಲ. ಹೇಗಾದರೂ ಮಾಡಿ ತಮ್ಮ ನೆಚ್ಚಿನ ನಟ ಸಿನಿಮಾ ನೋಡಲೇಬೇಕು ಎಂಬ ಹಠದಿಂದ ಕೆಲವು ಅಭಿಮಾನಿಗಳು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತದ ತ್ರಿಪುರಕ್ಕೆ ಬಂದು ‘ಪಠಾಣ್​’ ಚಿತ್ರವನ್ನು ನೋಡಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

ತ್ರಿಪುರದಲ್ಲಿನ ಚಿತ್ರಮಂದಿರದ ಮಾಲೀಕರೊಬ್ಬರು ಈ ವಿಚಾರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ‘ಇದು ನಿಜಕ್ಕೂ ಗ್ರೇಟ್​. ಜನರು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದು ‘ಪಠಾಣ್​’ ಸಿನಿಮಾವನ್ನು ನೋಡಿದ್ದಾರೆ. ನಮ್ಮ ‘ರೂಪಸಿ’ ಚಿತ್ರಮಂದಿರಕ್ಕೆ ಬಂದಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಶಾರುಖ್​ ಖಾನ್​ ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ‘ಜವಾನ್​’ ಚಿತ್ರಕ್ಕಾಗಿ ತಾವು ಕಾದಿರುವುದಾಗಿ ಬಾಂಗ್ಲಾದೇಶದಲ್ಲಿನ ಅಭಿಮಾನಿಗಳು ತಿಳಿಸಿದ್ದಾರೆ. ಆ ಚಿತ್ರಕ್ಕೆ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಆ ಬಳಿಕ ರಾಜ್​ಕುಮಾರ್​ ಹಿರಾನಿ ನಿರ್ದೇಶನದ ‘ಡಂಕಿ’ ಚಿತ್ರ ಬಿಡುಗಡೆ ಆಗಲಿದೆ. ಹೀಗೆ 2023ರಲ್ಲಿ ಶಾರುಖ್​ ಖಾನ್​ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ರಿಲೀಸ್​ ಆಗಲಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

350 ಕೋಟಿ ರೂಪಾಯಿ ದಾಟಿದ ‘ಪಠಾಣ್​’ ಕಲೆಕ್ಷನ್​:

ಈವರೆಗೂ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 351 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 2ನೇ ವೀಕೆಂಡ್​​ನಲ್ಲಿ ಮತ್ತೆ ಹಣದ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರ ಅನಾಯಾಸವಾಗಿ ಇನ್ನೆರಡು ದಿನಗಳಲ್ಲಿ 400 ಕೋಟಿ ರೂಪಾಯಿಯ ಗಡಿ ಮುಟ್ಟಲಿದೆ. ತೆಲುಗು ಮತ್ತು ತಮಿಳು ವರ್ಷನ್​ನಿಂದ ಈ ಚಿತ್ರಕ್ಕೆ ಈವರೆಗೆ 13 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:20 pm, Fri, 3 February 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?