AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ

DYavol X Jacket price: ಶಾರುಖ್​ ಖಾನ್​ ಅವರು ಟ್ವಿಟರ್​ ಮೂಲಕ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ನೆಟ್ಟಿಗರೊಬ್ಬರು ಆರ್ಯನ್​ ಖಾನ್​ ಮಾರಾಟ ಮಾಡುತ್ತಿರುವ ಜಾಕೆಟ್​ ಬೆಲೆಯ ಬಗ್ಗೆ ತಕರಾರು ತೆಗೆದಿದ್ದಾರೆ.

Shah Rukh Khan: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on: May 07, 2023 | 2:35 PM

ನಟ ಶಾರುಖ್​ ಖಾನ್​ ಅವರ ಪುತ್ರ ಆರ್ಯನ್​ ಖಾನ್​ (Aryan Khan) ಅವರು ಬಿಸ್ನೆಸ್​ನಲ್ಲಿ ಆಸಕ್ತಿ ಹೊಂದಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಬಟ್ಟೆ ವ್ಯಾಪಾರ ಶುರು ಮಾಡಿದ್ದರು. D’YAVOL X ಎಂಬ ಬ್ರ್ಯಾಂಡ್​ನ ಬಟ್ಟೆಗಳನ್ನು ಅವರು ಆನ್​ಲೈನ್​ ಮೂಲಕ ಮಾರಾಟ ಮಾಡುತ್ತಿದ್ದಾರೆ. ಆದರೆ ಇವುಗಳ ಬೆಲೆ ಸಖತ್​ ದುಬಾರಿ ಆಗಿದೆ. ಒಂದು ಜಾಕೆಟ್​ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ. ಇದರಿಂದ ಸಾಮಾನ್ಯ ಜನರು ಈ ಬ್ರ್ಯಾಂಡ್​ನ ಬಟ್ಟೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ವಿಚಾರವಾಗಿ ಕೆಲವರು ಶಾರುಖ್​ ಖಾನ್​ (Shah Rukh Khan) ಬಳಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಶಾರುಖ್​ ನೀಡಿದ ಉತ್ತರ ಸಖತ್​ ಫನ್ನಿ ಆಗಿದೆ. ಮಗನ ಬಟ್ಟೆ ವ್ಯಾಪಾರದಲ್ಲಿ ತಾವು ಕೂಡ ಚೌಕಾಸಿ ಮಾಡಲಾಗುತ್ತಿಲ್ಲ ಎಂದು ಶಾರುಖ್​ ಹೇಳಿದ್ದಾರೆ.

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಖಚಿತ ಪಡಿಸಲು ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಅದರ ಬೆನ್ನಲ್ಲೇ ಶಾರುಖ್​ ಖಾನ್​ ಅವರು ಟ್ವಿಟರ್​ ಮೂಲಕ ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ನೆಟ್ಟಿಗರೊಬ್ಬರು ಆರ್ಯನ್​ ಖಾನ್​ ಮಾರಾಟ ಮಾಡುತ್ತಿರುವ ಜಾಕೆಟ್​ ಬೆಲೆಯ ಬಗ್ಗೆ ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ

‘1000 ಅಥವಾ 2000 ರೂಪಾಯಿ ಬೆಲೆಯಲ್ಲೂ DYavol X ಬ್ರ್ಯಾಂಡ್​ನ ಜಾಕೆಟ್​ಗಳನ್ನು ತಯಾರು ಮಾಡಿ. ಈಗಿರುವ ಬೆಲೆಯ ಜಾಕೆಟ್​ಗಳನ್ನು ಖರೀದಿಸಲು ಮನೆ ಮಾರಾಟ ಮಾಡಬೇಕಾಗುತ್ತದೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ಅದಕ್ಕೆ ಉತ್ತರಿಸಿರುವ ಶಾರುಖ್​ ಖಾನ್​, ‘ಇವರು ನನಗೂ ಕಡಿಮೆ ಬೆಲೆಗೆ ಕೊಡುತ್ತಿಲ್ಲ. ಏನಾದರೂ ಮಾಡ್ತೀನಿ ಬಿಡಿ’ ಎಂದು ಪೋಸ್ಟ್​ ಮಾಡಿದ್ದಾರೆ.

ಒಂದು ಜಾಕೆಟ್​ನ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ ಹಾಗೂ ಟಿ-ಶರ್ಟ್​ ಬೆಲೆ 24 ಸಾವಿರ ರೂಪಾಯಿ ಇದ್ದರೂ ಕೂಡ ಜನರು ಇದನ್ನು ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರು ತೋರಿಸಿದ ಪ್ರೀತಿಗೆ ಆರ್ಯನ್​ ಖಾನ್​ ಫಿದಾ ಆಗಿದ್ದಾರೆ. ಈ ಬಗ್ಗೆ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ ಮೂಲಕ ಮಾಹಿತಿ ಹಂಚಿಕೊಂಡು ಎಲ್ಲರಿಗೂ ಧನ್ಯವಾದ ತಿಳಿಸಿದ್ದರು. ಮಗನ ಬಿಸ್ನೆಸ್​ಗೆ ಶಾರುಖ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಈ ಬ್ರ್ಯಾಂಡ್​ನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಇದು ಆರ್ಯನ್​ ಖಾನ್​ಗೆ ಸಹಕಾರಿ ಆಗಿದೆ. ಈ ಹಿಂದೆ ಡ್ರಗ್ಸ್​ ಪಾರ್ಟಿ ಆರೋಪದ ಮೇಲೆ ಆರ್ಯನ್​ ಖಾನ್​ ಅರೆಸ್ಟ್​ ಆಗಿದ್ದರು. ಆಗ ಮಗನ ಭವಿಷ್ಯದ ಬಗ್ಗೆ ಶಾರುಖ್​ಗೆ ಚಿಂತೆ ಆಗಿತ್ತು. ಆದರೆ ಈಗ ಪುತ್ರನ ಬಗ್ಗೆ ಅವರು ಹೆಮ್ಮೆಪಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್