AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಆರೋಗ್ಯ ಹೇಗಿದೆ? ಅಪ್​ಡೇಟ್ ಕೊಟ್ಟ ಜೂಹಿ ಚಾವ್ಲಾ

Shah Rukh Khan Health Update: ಇತ್ತೀಚೆಗೆ ಅಹಮದಾಬಾದ್​ನಲ್ಲಿ ನಡೆದ ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಕೆಕೆಆರ್​ ಜಯ ಗಳಿಸಿತ್ತು. ಆಗ ಶಾರುಖ್ ಖಾನ್ ಅವರು ಇಡೀ ಗ್ರೌಂಡ್ ಸುತ್ತಾಡಿದ್ದರು. ಅಭಿಮಾನಿಗಳತ್ತ ಕೈ ಬೀಸಿದ್ದರು. ಆ ಬಳಿಕ ಅವರಿಗೆ ಅನಾರೋಗ್ಯ ಉಂಟಾಗಿದೆ. ಅವರು ಆಸ್ಪತ್ರೆಯಲ್ಲಿದ್ದಾರೆ.

ಶಾರುಖ್ ಖಾನ್ ಆರೋಗ್ಯ ಹೇಗಿದೆ? ಅಪ್​ಡೇಟ್ ಕೊಟ್ಟ ಜೂಹಿ ಚಾವ್ಲಾ
ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 23, 2024 | 7:01 AM

Share

ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿದೆ. ಅವರಿಗೆ ಹೀಟ್ ಸ್ಟ್ರೋಕ್ ಹಾಗೂ ನಿರ್ಜಲೀಕರಣ ಉಂಟಾಗಿದೆ. ಈ ಕಾರಣಕ್ಕೆ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಶಾರುಖ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಶೀಘ್ರವೇ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಚೆನ್ನೈನಲ್ಲಿ ನಡೆಯಲಿರುವ ಫಿನಾಲೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಶಾರುಖ್ ಖಾನ್ ಒಡೆತನದ ಕೆಕೆಆರ್​ ತಂಡ ಐಪಿಎಲ್​ನಲ್ಲಿ ಫಿನಾಲೆ ತಲುಪಿದೆ. ಇತ್ತೀಚೆಗೆ ಅಹಮದಾಬಾದ್​ನಲ್ಲಿ ನಡೆದ ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಕೆಕೆಆರ್​ ಜಯ ಗಳಿಸಿತ್ತು. ಆಗ ಶಾರುಖ್ ಖಾನ್ ಅವರು ಇಡೀ ಗ್ರೌಂಡ್ ಸುತ್ತಾಡಿದ್ದರು. ಅಭಿಮಾನಿಗಳತ್ತ ಕೈ ಬೀಸಿದ್ದರು. ಅಹಮದಾಬಾದ್​ನಲ್ಲಿ ಸಾಕಷ್ಟು ಸೆಖೆ ಇದೆ. ಈ ಕಾರಣಕ್ಕೆ ಅವರಿಗೆ ಸನ್ ಸ್ಟ್ರೋಕ್ ಆಗಿರಬಹುದು ಎಂದು ಊಹಿಸಲಾಗಿದೆ.

ಅಹಮದಾಬಾದ್​ನ ಕೆಡಿ ಆಸ್ಪತ್ರೆಯಲ್ಲಿ ಶಾರುಖ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟಿ ಹಾಗೂ ಕೆಕೆಆರ್​ನ ಸಹ ಮಾಲೀಕರಾದ ಜೂಹಿ ಚಾವ್ಲಾ ಕೂಡ ಆಸ್ಪತ್ರೆಗೆ ತೆರಳಿ ಶಾರುಖ್ ಖಾನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೂಹಿ ಜೊತೆ ಅವರ ಪತಿ ಜಯ್ ಮೆಹ್ತಾ ಕೂಡ ಇದ್ದರು. ನ್ಯೂಸ್​18 ಇಂಗ್ಲಿಷ್ ಜೊತೆ ಮಾತನಾಡಿರುವ ಜೂಹಿ, ‘ಮೇ 21ರಂದು ಅವರಿಗೆ ಅನಾರೋಗ್ಯ ಕಾಡಿತ್ತು. ಆದಾಗ್ಯೂ ಅವರು ಮ್ಯಾಚ್​​ ವೀಕ್ಷಿಸಿದರು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ಫಿನಾಲೆ ವೀಕ್ಷಿಸಲಿದ್ದಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಕೆಕೆಆರ್ ಫೈನಲ್​ಗೆ, ತಂಡದ ಮಾಲೀಕ ಶಾರುಖ್ ಖಾನ್​ ಆಸ್ಪತ್ರೆಗೆ

ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಕೂಡ ಕೆಡಿ ಆಸ್ಪತ್ರೆಗೆ ತೆರಳಿ ಶಾರುಖ್ ಆರೋಗ್ಯ ವಿಚಾರಿಸಿದ್ದಾರೆ. ಈ ಮಧ್ಯೆ ಸುಹಾನಾ ಖಾನ್ ಅವರು ಮುಂಬೈಗೆ ಮರಳಿದ್ದು, ಅನನ್ಯಾ ಪಾಂಡೆ, ಶನಾಯಾ ಕಪೂರ್, ನವ್ಯಾ ನಂದ ಜೊತೆ ಖಾಸಗಿ ವಿಮಾನ ನಿಲ್ದಾಣ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​