AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಬಂಗಾರದ ನಾಣ್ಯದ ಮೇಲೆ ಶಾರುಖ್​ ಖಾನ್​ ಹೆಸರು, ಚಿತ್ರ: ಇದು ವಿಶೇಷ ಗೌರವ

ಪಳಪಳನೆ ಹೊಳೆಯುವ ಬಂಗಾರದ ನಾಣ್ಯದ ಮೇಲೆ ಶಾರುಖ್​ ಖಾನ್​ ಅವರ ಹೆಸರು ಮತ್ತು ಚಿತ್ರ ಇದೆ. ಇಂಥ ಗೌರವ ಪಡೆದ ಮೊಟ್ಟ ಮೊದಲ ಭಾರತೀಯ ನಟ ಎಂಬ ಹೆಗ್ಗಳಿಕೆ ಶಾರುಖ್​ ಖಾನ್​ ಅವರದ್ದು. ಈ ಗೌರವ ಸಿಕ್ಕಿದ್ದಕ್ಕೆ ಶಾರುಖ್​ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬಂಗಾರದ ನಾಣ್ಯದ ಫೋಟೋ ವೈರಲ್​ ಆಗಿದೆ. ಆ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ..

ವಿದೇಶಿ ಬಂಗಾರದ ನಾಣ್ಯದ ಮೇಲೆ ಶಾರುಖ್​ ಖಾನ್​ ಹೆಸರು, ಚಿತ್ರ: ಇದು ವಿಶೇಷ ಗೌರವ
ಶಾರುಖ್​ ಖಾನ್​ ಬಂಗಾರದ ನಾಣ್ಯ
ಮದನ್​ ಕುಮಾರ್​
|

Updated on: Jul 24, 2024 | 8:52 PM

Share

ಬಾಲಿವುಡ್​ ನಟ ಶಾರುಖ್ ಖಾನ್​ ಅವರು ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಫ್ರಾನ್ಸ್​ನಲ್ಲೂ ಅವರನ್ನು ಇಷ್ಟಪಡುವ ಜನರು ಇದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಒಂದು ವಿಶೇಷ ಗೌರವವನ್ನು ನೀಡಲಾಗಿದೆ. ಫ್ರಾನ್ಸ್​ ರಾಜಧಾನಿ ಪ್ಯಾರಿಸ್​ನ ಗ್ರೇವಿನ್​ ಮ್ಯೂಸಿಯಂನಲ್ಲಿ ಹೊಸ ಬಂಗಾರದ ನಾಣ್ಯವನ್ನು ಬಿಡುಗಡೆ ಮಾಡಲಾಗಿದೆ. ಅದರ ಮೇಲೆ ಶಾರುಖ್​ ಖಾನ್ ಅವರು ಚಿತ್ರ ಮತ್ತು ಹೆಸರು ಇದೆ ಎಂಬುದು ವಿಶೇಷ. ಈ ಬಂಗಾರದ ನಾಣ್ಯದ ಫೋಟೋವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಸಿದ್ಧ ಗ್ರೆವಿನ್​ ಸಂಗ್ರಹಾಲಯದಲ್ಲಿ ಅನೇಕ ಸೆಲೆಬ್ರಿಟಿಗಳ ಮೇಣದ ಪ್ರತಿಮೆ ಇದೆ. ಶಾರುಖ್​ ಖಾನ್​ ಅವರ ಮೇಣದ ಪ್ರತಿಮೆ ಕೂಡ ಇಲ್ಲಿದೆ. ಅದರ ಜೊತೆಗೆ ಬಂಗಾರದ ನಾಣ್ಯವನ್ನು ಕೂಡ ಬಿಡುಗಡೆ ಮಾಡುವ ಮೂಲಕ ಶಾರುಖ್​ ಖಾನ್​ಗೆ ಗೌರವ ಸಲ್ಲಿಸಲಾಗಿದೆ. ಈ ಗೌರವ ಪಡೆದ ಭಾರತದ ಮೊದಲ ನಟ ಎಂಬ ಖ್ಯಾತಿಗೆ ಶಾರುಖ್​ ಖಾನ್ ಪಾತ್ರರಾಗಿದ್ದಾರೆ. ಅಲ್ಲದೇ, ಮಹಾತ್ಮ ಗಾಂಧಿ ಬಳಿಕ ಈ ಗೌರವ ಪಡೆದ ಎರಡನೇ ಭಾರತೀಯ ಎಂಬುದು ಕೂಡ ಶಾರುಖ್​ ಖಾನ್​ ಹೆಗ್ಗಳಿಕೆ.

ಇದನ್ನೂ ಓದಿ: ಶಾರುಖ್​ ಪುತ್ರ ಆರ್ಯನ್​ ಖಾನ್​ ನೋಡಲು ಮುಗಿಬಿದ್ದ ಜನ; ಅಬ್ಬಬ್ಬಾ ಎಂಥ ಕ್ರೇಜ್​

ಚಿತ್ರರಂಗದಲ್ಲಿ ಮೂರು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ಶಾರುಖ್​ ಖಾನ್​ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅನೇಕ ಪ್ರಶಸ್ತಿಗಳನ್ನು ಕೂಡ ಅವರು ಪಡೆದುಕೊಂಡಿದ್ದಾರೆ. ಇಂದಿಗೂ ಅವರಿಗೆ ಸಖತ್​ ಬೇಡಿಕೆ ಇದೆ. ಅವರನ್ನು ನೋಡಲು ಮುಂಬೈನ ನಿವಾಸದ ಎದುರ ವಿದೇಶಿ ಪ್ರಜೆಗಳು ಕೂಡ ಬರುತ್ತಾರೆ ಎಂಬುದು ಗಮನಾರ್ಹ ಸಂಗತಿ. ಎಲ್ಲ ದೇಶಗಳಲ್ಲೂ ಶಾರುಖ್​ ಫೇಮಸ್​ ಆಗಿದ್ದಾರೆ.

2023ಕ್ಕೂ ಮುನ್ನ ಒಂದಷ್ಟು ವರ್ಷಗಳ ಕಾಲ ಶಾರುಖ್​ ಖಾನ್​ ನಟನೆಯ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋಲುತ್ತಿದ್ದವು. ಆದರೆ 2023ರಲ್ಲಿ ಅವರು ‘ಜವಾನ್​’, ‘ಪಠಾಣ್​’, ‘ಡಂಕಿ’ ಸಿನಿಮಾಗಳ ಮೂಲಕ ಗೆಲುವು ಪಡೆದರು. ಈ ಚಿತ್ರಗಳ ಗೆಲುವಿನಿಂದ ಅವರು ಭರ್ಜರಿ ಕಮ್​ಬ್ಯಾಕ್​ ಮಾಡಿದರು. ಈಗ ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ. ಅವರ ಮಕ್ಕಳಾದ ಸುಹಾನಾ ಖಾನ್​ ಮತ್ತು ಆರ್ಯನ್​ ಖಾನ್​ ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ