AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

Shah Rukh Khan Accident: ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು
ಶಾರುಖ್ ಖಾನ್
TV9 Web
| Edited By: |

Updated on:Jul 04, 2023 | 1:55 PM

Share

ನಟ ಶಾರುಖ್ ಖಾನ್ (Shah Rukh Khan) ಅವರು ‘ಪಠಾಣ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಗೆಲುವಿನಿಂದ ಅವರ ಅಭಿಮಾನಿಗಳು ಕೂಡ ಸಖತ್ ಖುಷಿಯಾಗಿದ್ದರು. ಆದರೆ, ಅವರ ಫ್ಯಾನ್ಸ್​ಗೆ ಈಗ ಬೇಸರದ ಸುದ್ದಿ ಸಿಕ್ಕಿದೆ. ಶಾರುಖ್ ಖಾನ್ ಅವರು ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಮುಂದಿನ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ ವೇಳೆ ಉಂಟಾದ ಅವಘಡದಲ್ಲಿ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ. ಇದರಿಂದ ರಕ್ತ ಸುರಿದಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

‘ಪಠಾಣ್’ ಸಿನಿಮಾ ಈ ವರ್ಷದ ಆರಂಭದಲ್ಲಿ ತೆರೆಗೆ ಬಂತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಇದು ಶಾರುಖ್ ಖಾನ್ ಅವರಿಗೆ ಹೊಸ ಚೈತನ್ಯ ನೀಡಿದೆ. ಅವರು ತಮ್ಮ ಮುಂದಿನ ಚಿತ್ರವೊಂದರ ಶೂಟಿಂಗ್​ಗಾಗಿ ಅಮೆರಿಕಕ್ಕೆ ತೆರಳಿದ್ದರು. ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

ಶಾರುಖ್ ಖಾನ್ ಅವರು ಸದ್ಯ ಭಾರತಕ್ಕೆ ಮರಳಿದ್ದಾರೆ ಎನ್ನಲಾಗುತ್ತಿದೆ. ಅವರು ಮುಂಬೈ ವಿಮಾನ ನಿಲ್ದಾಣದಿಂದ ಬರುವಾಗ ಮೂಗಿನ ಮೇಲೆ ಬ್ಯಾಂಡೇಜ್ ಕಾಣಿಸಿದೆ. ಈ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಬಕ್ರಿದ್ ಹಬ್ಬಕ್ಕೆ ಜೋರಾದ ಕುರಿಗಳ ಹಬ್ಬ; ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಕುರಿಗೆ ಭಾರೀ ಡಿಮ್ಯಾಂಡ್

ಶಾರುಖ್ ಖಾನ್ ಅವರು ಸದ್ಯ ‘ಜವಾನ್’ ಹಾಗೂ ‘ಡಂಕಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈಗ ಶಾರುಖ್​ಗೆ ಗಾಯ ಆಗಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ವಿಳಂಬ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Tue, 4 July 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್