Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

Shah Rukh Khan Accident: ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು
ಶಾರುಖ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 04, 2023 | 1:55 PM

ನಟ ಶಾರುಖ್ ಖಾನ್ (Shah Rukh Khan) ಅವರು ‘ಪಠಾಣ್’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಗೆಲುವಿನಿಂದ ಅವರ ಅಭಿಮಾನಿಗಳು ಕೂಡ ಸಖತ್ ಖುಷಿಯಾಗಿದ್ದರು. ಆದರೆ, ಅವರ ಫ್ಯಾನ್ಸ್​ಗೆ ಈಗ ಬೇಸರದ ಸುದ್ದಿ ಸಿಕ್ಕಿದೆ. ಶಾರುಖ್ ಖಾನ್ ಅವರು ಅಮೆರಿಕದ ಲಾಸ್ ಏಂಜಲೀಸ್​ನಲ್ಲಿ ಮುಂದಿನ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಆದರೆ, ಈ ವೇಳೆ ಉಂಟಾದ ಅವಘಡದಲ್ಲಿ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ. ಇದರಿಂದ ರಕ್ತ ಸುರಿದಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

‘ಪಠಾಣ್’ ಸಿನಿಮಾ ಈ ವರ್ಷದ ಆರಂಭದಲ್ಲಿ ತೆರೆಗೆ ಬಂತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಇದು ಶಾರುಖ್ ಖಾನ್ ಅವರಿಗೆ ಹೊಸ ಚೈತನ್ಯ ನೀಡಿದೆ. ಅವರು ತಮ್ಮ ಮುಂದಿನ ಚಿತ್ರವೊಂದರ ಶೂಟಿಂಗ್​ಗಾಗಿ ಅಮೆರಿಕಕ್ಕೆ ತೆರಳಿದ್ದರು. ಶೂಟಿಂಗ್ ವೇಳೆ ಮುಂಜಾಗೃತೆ ತೆಗೆದುಕೊಂಡ ಹೊರತಾಗಿಯೂ ಪೆಟ್ಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಅವರಿಗೆ ಸರ್ಜರಿ ಮಾಡಲಾಗಿದೆ. ಈ ಕಾರಣದಿಂದ ಶೂಟಿಂಗ್ ಅರ್ಧಕ್ಕೆ ನಿಂತಿದೆ.

ಶಾರುಖ್ ಖಾನ್ ಅವರು ಸದ್ಯ ಭಾರತಕ್ಕೆ ಮರಳಿದ್ದಾರೆ ಎನ್ನಲಾಗುತ್ತಿದೆ. ಅವರು ಮುಂಬೈ ವಿಮಾನ ನಿಲ್ದಾಣದಿಂದ ಬರುವಾಗ ಮೂಗಿನ ಮೇಲೆ ಬ್ಯಾಂಡೇಜ್ ಕಾಣಿಸಿದೆ. ಈ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಬಕ್ರಿದ್ ಹಬ್ಬಕ್ಕೆ ಜೋರಾದ ಕುರಿಗಳ ಹಬ್ಬ; ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಕುರಿಗೆ ಭಾರೀ ಡಿಮ್ಯಾಂಡ್

ಶಾರುಖ್ ಖಾನ್ ಅವರು ಸದ್ಯ ‘ಜವಾನ್’ ಹಾಗೂ ‘ಡಂಕಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈಗ ಶಾರುಖ್​ಗೆ ಗಾಯ ಆಗಿರುವುದರಿಂದ ಸಿನಿಮಾ ರಿಲೀಸ್ ದಿನಾಂಕ ವಿಳಂಬ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Tue, 4 July 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ