AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ

Shah Rukh Khan: ಆರ್ಯನ್​ ಖಾನ್​ ಅವರು ಮಾರಾಟ ಮಾಡುತ್ತಿರುವ ಬಟ್ಟೆಗಳ ಬೆಲೆ ಸಿಕ್ಕಾಪಟ್ಟೆ ದುಬಾರಿ. ಹಾಗಿದ್ದರೂ ಕೂಡ ಜನರು ಇದನ್ನು ಮುಗಿಬಿದ್ದು ಖರೀದಿಸಿದ್ದಾರೆ.

Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ
ಆರ್ಯನ್ ಖಾನ್
ಮದನ್​ ಕುಮಾರ್​
|

Updated on:May 02, 2023 | 11:36 AM

Share

ಮುಖ್ಯಾಂಶಗಳು

  • ಒಂದು ಜಾಕೆಟ್​ನ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ, ಟಿ-ಶರ್ಟ್​ ಬೆಲೆ 24 ಸಾವಿರ ರೂಪಾಯಿ
  • ಪುತ್ರ ಆರ್ಯನ್​ ಖಾನ್​ ಬಿಸ್ನೆಸ್​ಗೆ ಶಾರುಖ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ
  • ಹೊಸ ಬ್ರ್ಯಾಂಡ್​ನ ಕಾಸ್ಟ್ಯೂಮ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ ಪುತ್ರ ಆರ್ಯನ್​

ಸ್ಟಾರ್​ ಮಕ್ಕಳಿಗೆ ಅವಕಾಶಗಳು ಸುಲಭವಾಗಿ ಸಿಗುತ್ತದೆ. ಹಾಗಾಗಿ ಅನೇಕ ಹೀರೋಗಳ ಮಕ್ಕಳು ನೇರವಾಗಿ ಚಿತ್ರರಂಗಕ್ಕೆ ಎಂಟ್ರಿ ಪಡೆಯುತ್ತಾರೆ. ಬಾಲಿವುಡ್​ನಲ್ಲಿ ಅನೇಕ ಸ್ಟಾರ್​ ಕಿಡ್​ಗಳು ತೆರೆಮೇಲೆ ಮಿಂಚುತ್ತಿದ್ದಾರೆ. ಆದರೆ ಶಾರುಖ್​ ಖಾನ್​ (Shah Rukh Khan) ಮಗ ಆರ್ಯನ್​ ಖಾನ್​ ಈ ವಿಚಾರದಲ್ಲಿ ಕೊಂಚ ಭಿನ್ನ. ನಟನೆಗಿಂತಲೂ ಹೆಚ್ಚಾಗಿ ಬೇರೆ ವಿಚಾರಗಳಲ್ಲಿ ಅವರಿಗೆ ಆಸಕ್ತಿ ಇದೆ. ನಿರ್ದೇಶನದಲ್ಲಿ ಅವರು ವೃತ್ತಿಜೀವನ ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ. ಇನ್ನು, ಬಿಸ್ನೆಸ್​ ಬಗ್ಗೆಯೂ ಅವರು ಇಂಟರೆಸ್ಟ್​ ತೋರಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಆರ್ಯನ್​ ಖಾನ್​ (Aryan Khan) ಅವರು ಬಟ್ಟೆ ವ್ಯಾಪಾರ ಆರಂಭಿದರು. ಅಂದರೆ, ತಮ್ಮದೇ ಹೊಸ ಬ್ರ್ಯಾಂಡ್​ನ ಕಾಸ್ಟ್ಯೂಮ್​ಗಳನ್ನು ಅವರು ಮಾರುಕಟ್ಟೆಗೆ ಪರಿಚಯಿಸಿದರು. ಆ ಕ್ಷೇತ್ರದಲ್ಲಿ ಅವರಿಗೆ ಭರ್ಜರಿ ಲಾಭ ಆಗುತ್ತಿದೆ. ಮಗನ ವ್ಯಾಪಾರ ಕಂಡು ಶಾರುಖ್​ ಖಾನ್​ಗೆ ಖುಷಿ ಆಗಿದೆ.

ಸಲ್ಮಾನ್​ ಖಾನ್​, ದೀಪಿಕಾ ಪಡುಕೋಣೆ, ಆಲಿಯಾ ಭಟ್​, ಹೃತಿಕ್​ ರೋಷನ್​, ಸೈಫ್​ ಅಲಿ ಖಾನ್​ ಮುಂತಾದ ಸೆಲೆಬ್ರಿಟಿಗಳು ತಮ್ಮ ಬಟ್ಟೆ ಬ್ರ್ಯಾಂಡ್​ ಹೊಂದಿದ್ದಾರೆ. ಅದಕ್ಕೆ ಆರ್ಯನ್​ ಖಾನ್​ ಕೂಡ ಸೇರ್ಪಡೆ ಆಗಿದ್ದಾರೆ. ಕೇವಲ ಆನ್​ಲೈನ್​ನಲ್ಲಿ ಮಾತ್ರ ಅವರು ಮಾರಾಟ ಮಾಡುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಸಖತ್​ ಲಾಭ ಆಗಿದೆ.

ಇದನ್ನೂ ಓದಿ
Image
ಫ್ಯಾಮಿಲಿ ಜೊತೆ ಖುಷಿಖುಷಿಯಾಗಿ ಫೋಟೋಶೂಟ್​ ಮಾಡಿಸಿದ ಶಾರುಖ್​ ಖಾನ್​
Image
Aryan Khan: ನಿಜಕ್ಕೂ ಆರ್ಯನ್ ಖಾನ್ ವ್ಯಕ್ತಿತ್ವ ಹೇಗೆ? ಶಾರುಖ್ ಮಗನ ನಿಜವಾದ ಮುಖ ತೆರೆದಿಟ್ಟ ಯುವ ನಟಿ
Image
Suhana Khan: ‘ಮಗಳನ್ನು ಸರಿಯಾಗಿ ಬೆಳೆಸಿದ್ದೇನೆ’ ಎಂದು ಹೆಮ್ಮೆಯಿಂದ ಹೇಳಿಕೊಂಡ ಶಾರುಖ್​ ಖಾನ್​
Image
ಶಾರುಖ್ ಖಾನ್ ಪುತ್ರ ಆರ್ಯನ್​ ಬಿಡುಗಡೆಗೆ ಜಾಮೀನು ಬಾಂಡ್ ನೀಡಿದ ಬಗ್ಗೆ ಜೂಹಿ ಚಾವ್ಲಾ ಮಾತು

ಇದನ್ನೂ ಓದಿ: ​Aryan Khan: ಚಿತ್ರರಂಗಕ್ಕೆ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಎಂಟ್ರಿ; ಬ್ರೇಕಿಂಗ್​ ನ್ಯೂಸ್​ ನೀಡಿದ ಸ್ಟಾರ್​ ಕಿಡ್​

ಆರ್ಯನ್​ ಖಾನ್​ ಅವರು ಮಾರಾಟ ಮಾಡುತ್ತಿರುವ ಬಟ್ಟೆಗಳ ಬೆಲೆ ಸಿಕ್ಕಾಪಟ್ಟೆ ದುಬಾರಿ ಆಗಿವೆ. ಒಂದು ಜಾಕೆಟ್​ನ ಬೆಲೆ ಬರೋಬ್ಬರಿ 2 ಲಕ್ಷ ರೂಪಾಯಿ. ಟಿ-ಶರ್ಟ್​ ಬೆಲೆ 24 ಸಾವಿರ ರೂಪಾಯಿ. ಹಾಗಿದ್ದರೂ ಕೂಡ ಜನರು ಇದನ್ನು ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರು ತೋರಿಸಿದ ಪ್ರೀತಿಗೆ ಆರ್ಯನ್​ ಖಾನ್​ ಫಿದಾ ಆಗಿದ್ದಾರೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

View this post on Instagram

A post shared by @dyavol.x

ಮಗನ ಬಿಸ್ನೆಸ್​ಗೆ ಶಾರುಖ್​ ಖಾನ್​ ಅವರು ಬೆಂಬಲವಾಗಿ ನಿಂತಿದ್ದಾರೆ. ಈ ಬ್ರ್ಯಾಂಡ್​ನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಇದು ಆರ್ಯನ್​ ಖಾನ್​ಗೆ ಸಹಕಾರಿ ಆಗಿದೆ. ಈ ಹಿಂದೆ ಡ್ರಗ್ಸ್​ ಪಾರ್ಟಿ ಆರೋಪದ ಮೇಲೆ ಆರ್ಯನ್​ ಖಾನ್​ ಅರೆಸ್ಟ್​ ಆಗಿದ್ದರು. ಆಗ ಮಗನ ಭವಿಷ್ಯದ ಬಗ್ಗೆ ಶಾರುಖ್​ಗೆ ಚಿಂತೆ ಆಗಿತ್ತು. ಆದರೆ ಈಗ ಪುತ್ರನ ಬಗ್ಗೆ ಅವರು ಹೆಮ್ಮೆಪಡುತ್ತಿದ್ದಾರೆ.

ಇದನ್ನೂ ಓದಿ: Aryan Khan: 25ರ ಪ್ರಾಯದ ಆರ್ಯನ್​ ಖಾನ್​ ಜತೆ 30ರ ನೋರಾ ಫತೇಹಿ ಡೇಟಿಂಗ್​? ಎಲ್ಲೆಲ್ಲೂ ಇವರದ್ದೇ ಗುಸುಗುಸು

ನಿರ್ದೇಶನದಲ್ಲಿ ಆರ್ಯನ್​ ಖಾನ್​ಗೆ ಆಸಕ್ತಿ ಇದೆ. ಈಗಾಗಲೇ ಅವರು ಸ್ಕ್ರಿಪ್ಟ್​ ಕೆಲಸ ಶುರು ಮಾಡಿದ್ದಾರೆ. ಅವರ ಈ ಪ್ರಾಜೆಕ್ಟ್​ಗೆ ಶಾರುಖ್​ ಖಾನ್​ ಒಡೆತನದ ರೆಡ್ ಚಿಲ್ಲೀಸ್​ ಎಂಟರ್​ಟೇನ್ಮೆಂಟ್ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗ ಆಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:36 am, Tue, 2 May 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ