AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಕಲೆಕ್ಷನ್ ಫೇಕ್ ಎಂದವನಿಗೆ ಗದರಿದ ಶಾರುಖ್ ಖಾನ್

‘ಜವಾನ್’ ಸಿನಿಮಾ ಯಶಸ್ಸನ್ನು ಕೆಲವರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಈ ಕಾರಣದಿಂದಲೋ ಏನೋ ಅನೇಕರು ‘ಜವಾನ್’ ಚಿತ್ರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ‘ಜವಾನ್’ ಚಿತ್ರದ ಕಲೆಕ್ಷನ್ ಫೇಕ್ ಎಂದು ಕೆಲವರು ಹೇಳಿದ್ದರು. ಇದನ್ನು ಶಾರುಖ್ ಖಾನ್ ಒಪ್ಪಿಲ್ಲ. ಅವರು ನೇರವಾಗಿಯೇ ಇದಕ್ಕೆ ಉತ್ತರ ನೀಡಿದ್ದಾರೆ.

‘ಜವಾನ್’ ಕಲೆಕ್ಷನ್ ಫೇಕ್ ಎಂದವನಿಗೆ ಗದರಿದ ಶಾರುಖ್ ಖಾನ್
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 29, 2023 | 2:30 PM

Share

‘ಜವಾನ್’ ಸಿನಿಮಾ (Jawan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ಶಾರುಖ್ ಖಾನ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಒಂದೇ ವರ್ಷ ಎರಡು ಗೆಲುವು ಕಂಡು ಶಾರುಖ್ ಖಾನ್ ಬೀಗಿದ್ದಾರೆ. ಈ ಚಿತ್ರದ ಗಳಿಕೆ ಲೆಕ್ಕಾಚಾರ ಸುಳ್ಳು ಎಂಬುದು ಕೆಲವರ ಆರೋಪ. ಈ ಆರೋಪಕ್ಕೆ ಸಂಬಂಧಿಸಿ ಶಾರುಖ್ ಖಾನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗೆ ಹೇಳಿದ ಅಭಿಮಾನಿಯನ್ನು ಶಾರುಖ್ (Shah Rukh Khan) ಗದರಿದ್ದಾನೆ.

‘ಜವಾನ್’ ಸಿನಿಮಾ ಯಶಸ್ಸನ್ನು ಕೆಲವರಿಂದ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಈ ಕಾರಣದಿಂದಲೋ ಏನೋ ಅನೇಕರು ‘ಜವಾನ್’ ಚಿತ್ರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ‘ಜವಾನ್’ ಚಿತ್ರದ ಕಲೆಕ್ಷನ್ ಫೇಕ್ ಎಂದು ಕೆಲವರು ಹೇಳಿದ್ದರು. ಇದನ್ನು ಶಾರುಖ್ ಖಾನ್ ಒಪ್ಪಿಲ್ಲ. ಅವರು ನೇರವಾಗಿಯೇ ಇದಕ್ಕೆ ಉತ್ತರ ನೀಡಿದ್ದಾರೆ.

ಶಾರುಖ್ ಖಾನ್ ಅವರು ಆಗಾಗ ‘AskSRK’ ಸೆಷನ್ ನಡೆಸುತ್ತಾರೆ. ಇತ್ತೀಚೆಗೆ ಅವರು ಟ್ವಿಟರ್​ನಲ್ಲಿ ಅಭಿಮಾನಿಗಳಿಗೆ ಪ್ರಶ್ನೆ ಕೇಳುವಂತೆ ಹೇಳಿದ್ದರು. ‘ಜವಾನ್‌ ಚಿತ್ರದ ಗಳಿಕೆಯಲ್ಲಿ ನಕಲಿ ಎಷ್ಟು? ಫೇಕ್ ಕಲೆಕ್ಷನ್ ಬಗ್ಗೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ’ ಎಂದು ವ್ಯಕ್ತಿಯೋರ್ವ ಬರೆದುಕೊಂಡಿದ್ದ. ಇದಕ್ಕೆ ಶಾರುಖ್ ಖಾನ್ ಅವರು ಉತ್ತರ ನೀಡಿದ್ದಾರೆ. ‘ಸುಮ್ಮನೆ ಕುಳಿತುಕೊಳ್ಳಿ ಅಥವಾ ಎಣಿಸುತ್ತಾ ಕೂರಿ. ಕೌಂಟಿಂಗ್ ಮಾಡುವಾಗ ಡಿಸ್ಟ್ರ್ಯಾಕ್ಟ್ ಆಗಬೇಡಿ’ ಎಂದು ಶಾರುಖ್ ಖಾನ್ ಟ್ವೀಟ್ ಮಾಡಿದ್ದಾರೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾಗೆ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಮೊದಲಾದವರು ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟಾಗಬಹುದು ಎನ್ನುವ ಕುತೂಹಲ ಇದೆ.

ಇದನ್ನೂ ಓದಿ: ಪ್ರಭಾಸ್, ಶಾರುಖ್ ಖಾನ್ ಅಭಿಮಾನಿಗಳಿಂದ ವಿವೇಕ್ ಅಗ್ನಿಹೋತ್ರಿಗೆ ನಿಂದನೆ; ಬೇಸರ ಹೊರಹಾಕಿದ ನಿರ್ದೇಶಕ

ಶಾರುಖ್ ಖಾನ್ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಇದೆ. ಈ ಚಿತ್ರಕ್ಕೆ ‘ಸಲಾರ್’ ಸಿನಿಮಾ ಪೈಪೋಟಿ ನೀಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ