ಕೆಕೆಆರ್ ಫೈನಲ್​ಗೆ, ತಂಡದ ಮಾಲೀಕ ಶಾರುಖ್ ಖಾನ್​ ಆಸ್ಪತ್ರೆಗೆ

ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ಫೈನಲ್ ಪ್ರವೇಶಿಸಿದೆ ಆದರೆ ಶಾರುಖ್ ಖಾನ್ ಪಾತ್ರ ಆಸ್ಪತ್ರೆ ಸೇರಿದ್ದಾರೆ.

ಕೆಕೆಆರ್ ಫೈನಲ್​ಗೆ, ತಂಡದ ಮಾಲೀಕ ಶಾರುಖ್ ಖಾನ್​ ಆಸ್ಪತ್ರೆಗೆ
Follow us
|

Updated on:May 22, 2024 | 8:09 PM

ನಿನ್ನೆ (ಮೇ 21) ಗುಜರಾತ್​ನ ಅಹ್ಮದಾಬಾದ್​ನ ನರೇಂದ್ರ ಮೋದಿ (Narendra Modi) ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿದ ಶಾರುಖ್ ಖಾನ್ (Shah Rukh Khan) ಒಡೆತನದ ಕೊಲ್ಕತ್ತ ತಂಡ ಫೈನಲ್​ನಲ್ಲಿ ಸ್ಥಾನ ಪಡೆದುಕೊಂಡಿದೆ. ಪಂದ್ಯ ನೋಡಲು ಆಗಮಿಸಿದ್ದ ಶಾರುಖ್ ಖಾನ್, ಖುಷಿಯಿಂದ ಪಂದ್ಯ ವೀಕ್ಷಿಸಿ, ಪಂದ್ಯ ಮುಗಿದ ಬಳಿಕ ಮೈದಾನದ ಸುತ್ತು ಹೊಡೆದು ನೆರೆದಿದ್ದ ಪ್ರೇಕ್ಷಕರಿಗೆ ಧನ್ಯವಾದ ಸಹ ಅರ್ಪಿಸಿದರು. ಆದರೆ ಇದಾದ ಬಳಿಕ ಶಾರುಖ್ ಖಾನ್ ಆಸ್ಪತ್ರೆ ಸೇರಿದ್ದಾರೆ!

ಗುಜರಾತ್​ನಲ್ಲಿ ವಿಪರೀತ ಬಿಸಿಲಿದ್ದು ಬಿಸಿಗಾಳಿ ಎಲ್ಲೆಡೆ ಬೀಸುತ್ತಿದೆ. ನಿನ್ನೆಯ ಪಂದ್ಯದ ವೇಳೆ ಸಹ ಬಿಸಿಗಾಳಿ ಹೆಚ್ಚಾಗಿಯೇ ಇತ್ತು. ಇದರಿಂದಾಗಿ ಹೀಟ್ ಸ್ಟ್ರೋಕ್​ಗೆ ಒಳಗಾದ ಶಾರುಖ್ ಖಾನ್ ಅಹ್ಮದಾಬಾದ್​ನ ಕೆಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಶಾರುಖ್ ಖಾನ್​ ಗೆ ಚಿಕಿತ್ಸೆ ನೀಡಿರುವ ವೈದ್ಯರು ಹೇಳಿರುವಂತೆ, ಶಾರುಖ್ ಖಾನ್ ಡಿಹೈಡ್ರೇಷನ್​ನಿಂದ ಬಳಲಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಿ, ಕೆಲ ಸಮಯ ನಿಗಾವಣೆಯಲ್ಲಿ ಇಡಲಾಗಿತ್ತು. ಇಂದು ಶಾರುಖ್ ಖಾನ್ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದು ಮುಂಬೈಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕೆಕೆಆರ್ ಗೆಲುವಿನ ಬಳಿಕ ಸುರೇಶ್ ರೈನಾಗೆ ಕೈ ಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್

ಅಹ್ಮದಾಬಾದ್​ನಲ್ಲಿ ನಿನ್ನೆ (ಮೇ 21) 45 ಡಿಗ್ರಿ ಸೆಲ್ಷಿಯಸ್ ಬಿಸಿ ಇತ್ತು. ಗುಜರಾತ್​ನ ಹಲವೆಡೆ ಇದೇ ಪರಿಸ್ಥಿತಿ ಇದೆ. ಭಾರಿ ಬಿಸಿಲಿನಿಂದಾಗಿ ಬಿಸಿಗಾಳಿ ಹರಿದಾಡುತ್ತಿದ್ದು, ಹೀಟ್ ವೇವ್​ನಿಂದಾಗಿ ಹಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಶಾರುಖ್ ಖಾನ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹರಿದಾಡುತ್ತಿದ್ದಂತೆ ಅವರ ಅಭಿಮಾನಿಗಳು ಆತಂಕಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಶಾರುಖ್​ ಖಾನ್​ಗೆ ಯಾವುದೇ ಗಂಭೀರ ಸಮಸ್ಯೆ ಉಂಟಾಗಿಲ್ಲ.

ಇಂದು (ಮೇ 22) ಆರ್​ಸಿಬಿ ತಂಡ ಸಹ ಅದೇ ಕ್ರೀಡಾಂಗಣದಲ್ಲಿ ಪಂದ್ಯ ಆಡುತ್ತಿದೆ. ಆರ್​ಸಿಬಿ ತಂಡ ಸಹ ಹೀಟ್​ವೇವ್ ಭಯಕ್ಕೆ ಇಂದು (ಮೇ 22) ಬೆಳಿಗಿನಿಂದಲೂ ಅಭ್ಯಾಸ ಮಾಡಿಲ್ಲ. ಸಂಜೆ ಮೇಲೆ ಅಭ್ಯಾಸ ಮಾಡುವುದಾಗಿ ಹೇಳಿತ್ತಾದರೂ ಹೀಟ್ ವೇವ್ ಕಡಿಮೆ ಆಗದ ಕಾರಣ ಆರ್​ಸಿಬಿ ತಂಡದ ಸದಸ್ಯರು ಇಂದು ಅಭ್ಯಾಸವನ್ನೇ ಮಾಡಿಲ್ಲ. ಹಾಗೆಯೇ ನೇರವಾಗಿ ಅಂಗಳಕ್ಕೆ ಇಳಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Wed, 22 May 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್