AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಕೆಆರ್ ಫೈನಲ್​ಗೆ, ತಂಡದ ಮಾಲೀಕ ಶಾರುಖ್ ಖಾನ್​ ಆಸ್ಪತ್ರೆಗೆ

ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ಫೈನಲ್ ಪ್ರವೇಶಿಸಿದೆ ಆದರೆ ಶಾರುಖ್ ಖಾನ್ ಪಾತ್ರ ಆಸ್ಪತ್ರೆ ಸೇರಿದ್ದಾರೆ.

ಕೆಕೆಆರ್ ಫೈನಲ್​ಗೆ, ತಂಡದ ಮಾಲೀಕ ಶಾರುಖ್ ಖಾನ್​ ಆಸ್ಪತ್ರೆಗೆ
ಮಂಜುನಾಥ ಸಿ.
|

Updated on:May 22, 2024 | 8:09 PM

Share

ನಿನ್ನೆ (ಮೇ 21) ಗುಜರಾತ್​ನ ಅಹ್ಮದಾಬಾದ್​ನ ನರೇಂದ್ರ ಮೋದಿ (Narendra Modi) ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್ ತಂಡವನ್ನು ಸೋಲಿಸಿದ ಶಾರುಖ್ ಖಾನ್ (Shah Rukh Khan) ಒಡೆತನದ ಕೊಲ್ಕತ್ತ ತಂಡ ಫೈನಲ್​ನಲ್ಲಿ ಸ್ಥಾನ ಪಡೆದುಕೊಂಡಿದೆ. ಪಂದ್ಯ ನೋಡಲು ಆಗಮಿಸಿದ್ದ ಶಾರುಖ್ ಖಾನ್, ಖುಷಿಯಿಂದ ಪಂದ್ಯ ವೀಕ್ಷಿಸಿ, ಪಂದ್ಯ ಮುಗಿದ ಬಳಿಕ ಮೈದಾನದ ಸುತ್ತು ಹೊಡೆದು ನೆರೆದಿದ್ದ ಪ್ರೇಕ್ಷಕರಿಗೆ ಧನ್ಯವಾದ ಸಹ ಅರ್ಪಿಸಿದರು. ಆದರೆ ಇದಾದ ಬಳಿಕ ಶಾರುಖ್ ಖಾನ್ ಆಸ್ಪತ್ರೆ ಸೇರಿದ್ದಾರೆ!

ಗುಜರಾತ್​ನಲ್ಲಿ ವಿಪರೀತ ಬಿಸಿಲಿದ್ದು ಬಿಸಿಗಾಳಿ ಎಲ್ಲೆಡೆ ಬೀಸುತ್ತಿದೆ. ನಿನ್ನೆಯ ಪಂದ್ಯದ ವೇಳೆ ಸಹ ಬಿಸಿಗಾಳಿ ಹೆಚ್ಚಾಗಿಯೇ ಇತ್ತು. ಇದರಿಂದಾಗಿ ಹೀಟ್ ಸ್ಟ್ರೋಕ್​ಗೆ ಒಳಗಾದ ಶಾರುಖ್ ಖಾನ್ ಅಹ್ಮದಾಬಾದ್​ನ ಕೆಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಶಾರುಖ್ ಖಾನ್​ ಗೆ ಚಿಕಿತ್ಸೆ ನೀಡಿರುವ ವೈದ್ಯರು ಹೇಳಿರುವಂತೆ, ಶಾರುಖ್ ಖಾನ್ ಡಿಹೈಡ್ರೇಷನ್​ನಿಂದ ಬಳಲಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಿ, ಕೆಲ ಸಮಯ ನಿಗಾವಣೆಯಲ್ಲಿ ಇಡಲಾಗಿತ್ತು. ಇಂದು ಶಾರುಖ್ ಖಾನ್ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದು ಮುಂಬೈಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕೆಕೆಆರ್ ಗೆಲುವಿನ ಬಳಿಕ ಸುರೇಶ್ ರೈನಾಗೆ ಕೈ ಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್

ಅಹ್ಮದಾಬಾದ್​ನಲ್ಲಿ ನಿನ್ನೆ (ಮೇ 21) 45 ಡಿಗ್ರಿ ಸೆಲ್ಷಿಯಸ್ ಬಿಸಿ ಇತ್ತು. ಗುಜರಾತ್​ನ ಹಲವೆಡೆ ಇದೇ ಪರಿಸ್ಥಿತಿ ಇದೆ. ಭಾರಿ ಬಿಸಿಲಿನಿಂದಾಗಿ ಬಿಸಿಗಾಳಿ ಹರಿದಾಡುತ್ತಿದ್ದು, ಹೀಟ್ ವೇವ್​ನಿಂದಾಗಿ ಹಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಶಾರುಖ್ ಖಾನ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹರಿದಾಡುತ್ತಿದ್ದಂತೆ ಅವರ ಅಭಿಮಾನಿಗಳು ಆತಂಕಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಶಾರುಖ್​ ಖಾನ್​ಗೆ ಯಾವುದೇ ಗಂಭೀರ ಸಮಸ್ಯೆ ಉಂಟಾಗಿಲ್ಲ.

ಇಂದು (ಮೇ 22) ಆರ್​ಸಿಬಿ ತಂಡ ಸಹ ಅದೇ ಕ್ರೀಡಾಂಗಣದಲ್ಲಿ ಪಂದ್ಯ ಆಡುತ್ತಿದೆ. ಆರ್​ಸಿಬಿ ತಂಡ ಸಹ ಹೀಟ್​ವೇವ್ ಭಯಕ್ಕೆ ಇಂದು (ಮೇ 22) ಬೆಳಿಗಿನಿಂದಲೂ ಅಭ್ಯಾಸ ಮಾಡಿಲ್ಲ. ಸಂಜೆ ಮೇಲೆ ಅಭ್ಯಾಸ ಮಾಡುವುದಾಗಿ ಹೇಳಿತ್ತಾದರೂ ಹೀಟ್ ವೇವ್ ಕಡಿಮೆ ಆಗದ ಕಾರಣ ಆರ್​ಸಿಬಿ ತಂಡದ ಸದಸ್ಯರು ಇಂದು ಅಭ್ಯಾಸವನ್ನೇ ಮಾಡಿಲ್ಲ. ಹಾಗೆಯೇ ನೇರವಾಗಿ ಅಂಗಳಕ್ಕೆ ಇಳಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Wed, 22 May 24

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್