AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್

ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್
ಶಾರುಖ್-ಗೌತಮ್
ರಾಜೇಶ್ ದುಗ್ಗುಮನೆ
|

Updated on: May 27, 2024 | 7:01 AM

Share

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೆಕೆಆರ್ (KKR)​ ನಡುವಿನ ಪಂದ್ಯದಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ಗೆಲುವು ಕಂಡಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಕೆಕೆಆರ್​ ಮೂರನೇ ಗೆಲುವು ಕಂಡಿದೆ. ಶಾರುಖ್ ಖಾನ್ ಅವರು ಈ ಗೆಲುವನ್ನು ಮಕ್ಕಳಾದ ಸುಹಾನಾ ಖಾನ್, ಅಬ್ರಾಮ್ ಖಾನ್ ಹಾಗೂ ಆರ್ಯನ್ ಖಾನ್ ಜೊತೆ ಸಂಭ್ರಮಿಸಿದರು. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 113 ರನ್​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕೆಕೆಆರ್​ ಈ ಗುರಿಯನ್ನು ಕೇವಲ 10.3 ಓವರ್​ನಲ್ಲಿ ತಲುಪಿ ಸುಲಭದ ಗೆಲುವನ್ನು ತನ್ನದಾಗಿಸಿಕೊಂಡಿತು.

ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಶಾರುಖ್ ಖಾನ್ ಅವರು ಹಗ್ ಕೊಟ್ಟರು. ಜೊತೆಗೆ ಪ್ರೀತಿಯಿಂದ ಮುತ್ತಿಟ್ಟರು. ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

ಕೆಕೆಆರ್​ ಗೆದ್ದ ಬಳಿಕ ಶಾರುಖ್ ಖಾನ್ ಅವರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಶಾರುಖ್ ಖಾನ್ ಅವರು ಮಗಳು ಸುಹಾನಾ ಅವರನ್ನು ಅಪ್ಪಿದರು. ಶಾರುಖ್ ಮಕ್ಕಳು ಕೂಡ ಈ ಗೆಲುವಿನಿಂದ ಸಾಕಷ್ಟು ಸಂತೋಷಪಟ್ಟರು. ಇನ್ನು ಈ ಬಾರಿ ಕೆಕೆಆರ್​ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ ಸುನಿಲ್ ನರೀನ್ ಅವರನ್ನು ಗೌತಮ್ ಗಂಭೀರ್ ಮೇಲಕ್ಕೆ ಎತ್ತಿ ಸಂಭ್ರಮಿಸಿದರು. 15 ಪಂದ್ಯಗಳಲ್ಲಿ ಸುನೀಲ್ ಅವರು 488 ರನ್​ಗಳನ್ನು ಬಾರಿಸಿದ್ದಲ್ಲದೆ, 17 ವಿಕೆಟ್ ಕಿತ್ತಿದ್ದಾರೆ. ಅವರಿಗೆ ಮೋಸ್ಟ್ ವ್ಯಾಲ್ಯುವೆಬಲ್ ಪ್ಲೇಯರ್ ಅವಾರ್ಡ್ ಸಿಕ್ಕಿದೆ.

ಶಾರುಖ್ ಖಾನ್ ಹಾಗೂ ಮಿಚೆಲ್ ಸ್ಟಾರ್ಕ್ ಕೆಲ ಹೊತ್ತು ಚರ್ಚೆ ನಡೆಸಿದ್ದು ಕಂಡು ಬಂದಿದೆ. ಈ ಬಾರಿ ಅತಿ ಹೆಚ್ಚಿನ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಅವರನ್ನು ಕೆಕೆಆರ್​ ಖರೀದಿಸಿದೆ. ಪ್ರಮುಖ ಪಂದ್ಯಗಳಲ್ಲಿ ಮಿಚೆಲ್ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ