AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್

ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಗೆದ್ದ ಖುಷಿಯಲ್ಲಿ ಕೆಕೆಆರ್​ ಮೆಂಟರ್ ಗೌತಮ್​ ಗಂಭೀರ್​ಗೆ ಮುತ್ತಿಟ್ಟ ಶಾರುಖ್ ಖಾನ್
ಶಾರುಖ್-ಗೌತಮ್
ರಾಜೇಶ್ ದುಗ್ಗುಮನೆ
|

Updated on: May 27, 2024 | 7:01 AM

Share

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೆಕೆಆರ್ (KKR)​ ನಡುವಿನ ಪಂದ್ಯದಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ಗೆಲುವು ಕಂಡಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಕೆಕೆಆರ್​ ಮೂರನೇ ಗೆಲುವು ಕಂಡಿದೆ. ಶಾರುಖ್ ಖಾನ್ ಅವರು ಈ ಗೆಲುವನ್ನು ಮಕ್ಕಳಾದ ಸುಹಾನಾ ಖಾನ್, ಅಬ್ರಾಮ್ ಖಾನ್ ಹಾಗೂ ಆರ್ಯನ್ ಖಾನ್ ಜೊತೆ ಸಂಭ್ರಮಿಸಿದರು. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 113 ರನ್​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕೆಕೆಆರ್​ ಈ ಗುರಿಯನ್ನು ಕೇವಲ 10.3 ಓವರ್​ನಲ್ಲಿ ತಲುಪಿ ಸುಲಭದ ಗೆಲುವನ್ನು ತನ್ನದಾಗಿಸಿಕೊಂಡಿತು.

ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ಅವರಿಗೆ ಶಾರುಖ್ ಖಾನ್ ಅವರು ಹಗ್ ಕೊಟ್ಟರು. ಜೊತೆಗೆ ಪ್ರೀತಿಯಿಂದ ಮುತ್ತಿಟ್ಟರು. ಗೌತಮ್ ಗಂಭೀರ್ ಅವರು ಕೆಕೆಆರ್​ನ ಮೆಂಟರ್​ ಆಗಿ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಕೋಲ್ಕತ್ತ ನೈಟ್ ರೈಡರ್ಸ್​ಗೆ ಗೌತಮ್ ಗಂಭೀರ್ ಈ ಮೊದಲು ಕ್ಯಾಪ್ಟನ್ ಆಗಿದ್ದರು. ಅವರ ನಾಯಕತ್ವದಲ್ಲಿ ತಂಡಕ್ಕೆ ಎರಡು ಟ್ರೋಫಿಗಳು ಬಂದಿದ್ದವು. ಈಗ 10 ವರ್ಷಗಳ ಬಳಿಕ ಮತ್ತೊಮ್ಮೆ ಕೆಕೆಆರ್​ ಗೆಲುವಿನ ಕೇಕೆ ಹಾಕಿದೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಶಾರುಖ್ ಖಾನ್; ಹೇಳಿದ್ದೇ ಒಂದು, ಆಗಿದ್ದೇ ಇನ್ನೊಂದು

ಕೆಕೆಆರ್​ ಗೆದ್ದ ಬಳಿಕ ಶಾರುಖ್ ಖಾನ್ ಅವರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಶಾರುಖ್ ಖಾನ್ ಅವರು ಮಗಳು ಸುಹಾನಾ ಅವರನ್ನು ಅಪ್ಪಿದರು. ಶಾರುಖ್ ಮಕ್ಕಳು ಕೂಡ ಈ ಗೆಲುವಿನಿಂದ ಸಾಕಷ್ಟು ಸಂತೋಷಪಟ್ಟರು. ಇನ್ನು ಈ ಬಾರಿ ಕೆಕೆಆರ್​ ತಂಡಕ್ಕೆ ಸಾಕಷ್ಟು ಕೊಡುಗೆ ನೀಡಿದ ಸುನಿಲ್ ನರೀನ್ ಅವರನ್ನು ಗೌತಮ್ ಗಂಭೀರ್ ಮೇಲಕ್ಕೆ ಎತ್ತಿ ಸಂಭ್ರಮಿಸಿದರು. 15 ಪಂದ್ಯಗಳಲ್ಲಿ ಸುನೀಲ್ ಅವರು 488 ರನ್​ಗಳನ್ನು ಬಾರಿಸಿದ್ದಲ್ಲದೆ, 17 ವಿಕೆಟ್ ಕಿತ್ತಿದ್ದಾರೆ. ಅವರಿಗೆ ಮೋಸ್ಟ್ ವ್ಯಾಲ್ಯುವೆಬಲ್ ಪ್ಲೇಯರ್ ಅವಾರ್ಡ್ ಸಿಕ್ಕಿದೆ.

ಶಾರುಖ್ ಖಾನ್ ಹಾಗೂ ಮಿಚೆಲ್ ಸ್ಟಾರ್ಕ್ ಕೆಲ ಹೊತ್ತು ಚರ್ಚೆ ನಡೆಸಿದ್ದು ಕಂಡು ಬಂದಿದೆ. ಈ ಬಾರಿ ಅತಿ ಹೆಚ್ಚಿನ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಅವರನ್ನು ಕೆಕೆಆರ್​ ಖರೀದಿಸಿದೆ. ಪ್ರಮುಖ ಪಂದ್ಯಗಳಲ್ಲಿ ಮಿಚೆಲ್ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ