AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ದಿಲ್ಲದೆ ಸಿನಿಮಾ ಶೂಟ್ ಮಾಡಲು ಹೋಗಿ ತೀವ್ರ ಗಾಯ ಮಾಡಿಕೊಂಡ ಶಾರುಖ್ ಖಾನ್  

ಶಾರುಖ್ ಖಾನ್ ಅವರು ತಮ್ಮ ಹೊಸ ಚಿತ್ರ 'ಕಿಂಗ್'ನ ಚಿತ್ರೀಕರಣದ ಸಮಯದಲ್ಲಿ ಗಾಯಗೊಂಡಿದ್ದಾರೆ. ಇದರಿಂದಾಗಿ ಚಿತ್ರೀಕರಣ ಮುಂದೂಡಲ್ಪಟ್ಟಿದೆ ಮತ್ತು ಅವರು ಅಮೆರಿಕಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳಲಿದ್ದಾರೆ ಎಂದು ವರದಿಯಾಗಿದೆ. 'ಪಠಾಣ್', 'ಜವಾನ್' ಮತ್ತು 'ಡಂಕಿ' ಚಿತ್ರಗಳ ಯಶಸ್ಸಿನ ನಂತರ ಈ ಘಟನೆ ನಡೆದಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಸದ್ದಿಲ್ಲದೆ ಸಿನಿಮಾ ಶೂಟ್ ಮಾಡಲು ಹೋಗಿ ತೀವ್ರ ಗಾಯ ಮಾಡಿಕೊಂಡ ಶಾರುಖ್ ಖಾನ್  
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Jul 19, 2025 | 2:36 PM

Share

ಶಾರುಖ್ ಖಾನ್ ಅವರು ಸದ್ಯ ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಶೂಟ್ ಕೂಡ ಆರಂಭ ಆಗಿತ್ತು. ಆದರೆ, ಶೂಟಿಂಗ್ ವೇಳೆ ಉಂಟಾದ ಎಡವಟ್ಟಿನಿಂದ ಅವರಿಗೆ ಗಾಯ ಆಗಿದೆ. ಈ ಕಾರಣಕ್ಕೆ ಅವರು ಒಂದು ತಿಂಗಳು ವಿಶ್ರಾಂತಿ ಪಡೆಯಬೇಕಿದೆ. ಹೀಗಾಗಿ, ‘ಕಿಂಗ್’ ಸಿನಿಮಾ ಶೂಟಿಂಗ್ ಮುಂದಕ್ಕೆ ಹೋಗಿದೆ. ಈಗ ಶಾರುಖ್ (Shah Rukh Khan) ಅವರು ಅಮೆರಿಕಕ್ಕೆ ತೆರಳುತ್ತಾರೆ ಎಂಬ ವರದಿ ಕೂಡ ಇದೆ.

ಶಾರುಖ್ ಖಾನ್ ಅವರು 2023ರಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟರು. ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾಗಳು ಹಿಟ್ ಆದವು. ಆ ಬಳಿಕ ಶಾರುಖ್ ಖಾನ್ ಯಾವುದೇ ಸಿನಿಮಾನ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ, ಅವರು ‘ಕಿಂಗ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಅನ್ನೋದು ಗೊತ್ತಾಗಿದೆ. ಸುಹಾನಾ ಖಾನ್, ಅಭಿಷೇಕ್ ಬಚ್ಚನ್ ಈ ಚಿತ್ರದಲ್ಲಿ ಇದ್ದಾರೆ.

ಈ ಸಿನಿಮಾ ಶೂಟಿಂಗ್ ಇತ್ತೀಚೆಗೆ ಮುಂಬೈನ ಗೋಲ್ಡನ್ ಟೊಬ್ಯಾಕೋ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಸದ್ದಿಲ್ಲದೆ ಶೂಟ್ ಮಾಡಲಾಗುತ್ತಿತ್ತು. ಈ ವೇಳೆ ಶಾರುಖ್ ಖಾನ್ ಅವರು ಸ್ಟಂಟ್ ಮಾಡುತ್ತಿದ್ದರು. ಆಗ ಅವರಿಗೆ ಮಸಲ್ ಇಂಜೂರಿ ಆಗಿದೆ.

ಇದನ್ನೂ ಓದಿ
Image
ರಿಯಾಲಿಟಿ ಶೋ ಸಂಭಾವನೆಯಲ್ಲಿ ಸಲ್ಮಾನ್ ಖಾನ್ ಹಿಂದಿಕ್ಕಿದ ಅಮಿತಾಭ್ ಬಚ್ಚನ್
Image
ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು?
Image
‘ಎಕ್ಕ’ ಸಿನಿಮಾ ಗಳಿಕೆ; ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿದ ಯುವ
Image
ಬರ್ತ್​ಡೇ ಗರ್ಲ್ ಪ್ರಿಯಾಂಕಾ ಚೋಪ್ರಾ ಎಷ್ಟು ಶ್ರೀಮಂತೆ ಗೊತ್ತಾ?

ಶಾರುಖ್ ಖಾನ್​ಗೆ ಗಂಭೀರ ಸಮಸ್ಯೆ ಏನೂ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಅವರು ಅಮೆರಿಕಕ್ಕೆ ತೆರಳಿ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳಲಿದ್ದಾರಂತೆ. ಶಾರುಖ್ ಖಾನ್​ಗೆ ವಯಸ್ಸು 60 ಸಮೀಪಿಸಿದೆ. ಈ ಸಂದರ್ಭದಲ್ಲಿ ಗಾಯಗೊಂಡರೆ ರಿಕವರಿ ಆಗೋಕೆ ಸಾಕಷ್ಟು ಸಮಯ ಬೇಕಿದೆ. ಹೀಗಾಗಿ, ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದೆ.

ಇದನ್ನೂ ಓದಿ: ಮನೆಯ ನಾಯಿಗೆ ಶಾರುಖ್ ಖಾನ್ ಎಂದು ಹೆಸರು ಇಟ್ಟಿದ್ದ ಆಮಿರ್ ಖಾನ್

‘ಕಿಂಗ್’ ಸಿನಿಮಾ ಸೆಪ್ಟೆಂಬರ್ ಅಥವಾ ಅಕ್ಟೋಬರ್​ನಲ್ಲಿ ಹೊಸ ಶೆಡ್ಯೂಲ್​ನಲ್ಲಿ ಶೂಟ್ ಮಾಡಲು ಸಿದ್ಧತೆ ನಡೆದಿದೆ. ಅವರು ಸಂಪೂರ್ಣ ರಿಕವರಿ ಆದ ಬಳಿಕವೇ ಬರಲಿದ್ದಾರೆ. ಫಿಲ್ಮ್ ಸಿಟಿ, ಗೋಲ್ಡನ್ ಟೊಬ್ಯಾಕೋ ಸ್ಟುಡಿಯೋ ಹಾಗೂ ಯಶ್ ರಾಜ್ ಫಿಲ್ಮ್ಸ್ ಸ್ಟುಡಿಯೋನ ಬುಕ್ ಮಾಡಲಾಗಿತ್ತು.  ಅದು ಈಗ ಕ್ಯಾನ್ಸಲ್ ಆಗಿದೆ. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಇದೆ. ದೀಪಿಕಾ ಕೂಡ ಈ ಚಿತ್ರದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:36 pm, Sat, 19 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು