AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್​ನ ಸಿನಿಮಾ ದೇವರು ಎಂದು ಹೊಗಳಿದ ಕಂಗನಾ ರಣಾವಾತ್

ಕಂಗನಾ ರಣಾವತ್ ತುಂಬಾನೇ ಕಷ್ಟದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಅವರ ರೀತಿ ಕಷ್ಟಪಟ್ಟವರು ಅನೇಕರಿದ್ದಾರೆ. ಆದರೆ, ಸ್ಟಾರ್​ ಕಿಡ್​ಗಳಿಗೆ ಸುಲಭದಲ್ಲಿ ಅವಕಾಶ ಸಿಗುತ್ತದೆ. ಈ ತಾರತಮ್ಯ ಕಂಡರೆ ಕಂಗನಾಗೆ ಆಗುವುದಿಲ್ಲ. ಈ ಕಾರಣಕ್ಕೆ ಅವರು ರಣಬೀರ್ ಕಪೂರ್, ಆಲಿಯಾ ಭಟ್ ಮೊದಲಾದವರನ್ನು ದ್ವೇಷಿಸುತ್ತಾರೆ.

ಶಾರುಖ್ ಖಾನ್​ನ ಸಿನಿಮಾ ದೇವರು ಎಂದು ಹೊಗಳಿದ ಕಂಗನಾ ರಣಾವಾತ್
ಶಾರುಖ್
ರಾಜೇಶ್ ದುಗ್ಗುಮನೆ
|

Updated on: Sep 08, 2023 | 7:04 AM

Share

ನಟಿ ಕಂಗನಾ ರಣಾವತ್ ಅವರು ಅನೇಕರನ್ನು ಟೀಕೆ ಮಾಡಿಕೊಂಡೇ ಇರುತ್ತಾರೆ. ಅವರಿಗೆ ಬಾಲಿವುಡ್​ನ ಬಹುತೇಕರನ್ನು ಕಂಡರೆ ಆಗೋದಿಲ್ಲ. ಹೀಗಾಗಿ, ಮಾಡಿದ್ದೆಲ್ಲವೂ ತಪ್ಪು ಎನ್ನುತ್ತಾರೆ. ಆದರೆ ಅಪರೂಪಕ್ಕೊಮ್ಮೆ ಒಬ್ಬೊಬ್ಬರನ್ನು ಹೊಗಳಿ ಅಚ್ಚರಿ ಮೂಡಿಸುತ್ತಾರೆ. ಈಗ ಶಾರುಖ್ ಖಾನ್ (Shah Rukh Khan)​ ಕೆಲಸದ ಮೇಲೆ ಅವರಿಗೆ ಪ್ರೀತಿ ಬಂದಿದೆ. ಶಾರುಖ್ ಖಾನ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ. ಅವರನ್ನು ಸಿನೆಮಾ ದೇವರು ಎಂದು ಘೋಷಣೆ ಮಾಡಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಶಾರುಖ್ ಖಾನ್ ಬಗ್ಗೆ ಕಂಗನಾ ಬರೆದುಕೊಂಡಿದ್ದಾರೆ. ಇದಕ್ಕೆ ಶಾರುಖ್ ಯಾವ ರೀತಿಯಲ್ಲಿ ಉತ್ತರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕಂಗನಾ ರಣಾವತ್ ತುಂಬಾನೇ ಕಷ್ಟದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಅವರ ರೀತಿ ಕಷ್ಟಪಟ್ಟವರು ಅನೇಕರಿದ್ದಾರೆ. ಆದರೆ, ಸ್ಟಾರ್​ ಕಿಡ್​ಗಳಿಗೆ ಸುಲಭದಲ್ಲಿ ಅವಕಾಶ ಸಿಗುತ್ತದೆ. ಈ ತಾರತಮ್ಯ ಕಂಡರೆ ಕಂಗನಾಗೆ ಆಗುವುದಿಲ್ಲ. ಈ ಕಾರಣಕ್ಕೆ ಅವರು ರಣಬೀರ್ ಕಪೂರ್, ಆಲಿಯಾ ಭಟ್ ಮೊದಲಾದವರನ್ನು ದ್ವೇಷಿಸುತ್ತಾರೆ. ಕೆಲವೊಮ್ಮೆ ಆಲಿಯಾರನ್ನು ಅವರು ಹೊಗಳಿದ್ದಿದೆ. ‘ಜವಾನ್’ ಸಿನಿಮಾ ಮೂಲಕ ಅಬ್ಬರಿಸಿದ ಶಾರುಖ್ ಬಗ್ಗೆ ಕಂಗನಾ ಮೆಚ್ಚುಗೆ ಸೂಚಿಸಿದ್ದಾರೆ.

‘ತೊಂಬತ್ತರ ದಶಕದಲ್ಲಿ ಲವರ್ ಬಾಯ್ ಆಗಿದ್ದ ಈ ವ್ಯಕ್ತಿ ಈಗ ಸುಮಾರು 60ನೇ ವಯಸ್ಸಿನಲ್ಲಿ ಸೂಪರ್ ಹೀರೋ ಆಗಿ ಹೊರಹೊಮ್ಮಿದ್ದಾರೆ. ಜನರು ಅವರ ಸಿನಿಮಾ ಆಯ್ಕೆಯ ಬಗ್ಗೆ ಅಪಹಾಸ್ಯ ಮಾಡಿದ ಸಮಯ ನನಗೆ ನೆನಪಿದೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಮತ್ತೊಮ್ಮೆ ಸ್ಥಾಪಿತಗೊಳ್ಳಬೇಕು ಎಂದು ಕನಸು ಕಾಣುತ್ತಿರುವ ಎಲ್ಲಾ ಕಲಾವಿದರಿಗೆ ಶಾರುಖ್ ಖಾನ್ ಅವರು ಮಾದರಿ. ಶಾರುಖ್ ಖಾನ್ ಸಿನಿಮಾ ದೇವರು. ಕಠಿಣ ಪರಿಶ್ರಮ ಮತ್ತು ನಮ್ರತೆಗೆ ಕಿಂಗ್ ಖಾನ್ ನಿಮಗೆ ನಮನಗಳು’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್ ನಿವಾಸದ ಎದುರು ಭಾರೀ ಪ್ರತಿಭಟನೆ; ಮನ್ನತ್​ಗೆ ಬಿಗಿ ಭದ್ರತೆ ನೀಡಿದ ಪೊಲೀಸರು

‘ಜವಾನ್’ ಸಿನಿಮಾ ಮೊದಲ ದಿನ ಬಹುತೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಸಿನಿಮಾದ ಮಾಸ್ ಮಸಾಲ ಅಂಶ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಟ್ಲಿ ನಿರ್ದೇಶನ ಇರುವ ಈ ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ, ಸಂಜಯ್ ದತ್, ದೀಪಿಕಾ ಪಡುಕೋಣೆ ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ