AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ಶಾರುಖ್ ಖಾನ್ ಅವರು ‘ಕೊಯ್ಲಾ’ ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?
ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 20, 2024 | 7:58 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಖ್ಯಾತಿ ತುಂಬಾನೇ ದೊಡ್ಡದು. ಅವರು ಕೆಲವೊಮ್ಮೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಾ ಇರುತ್ತಾರೆ. ಅವರ ಕೆಟ್ಟ ಹವ್ಯಾಸಗಳಲ್ಲಿ ಸಿಗರೇಟ್ ಸೇದುವುದು ಕೂಡ ಒಂದು. ಅವರು ಸಿಗರೇಟ್ ಬಿಡುವ ಪ್ರಯತ್ನವನ್ನು ಈ ಮೊದಲು ಮಾಡಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಶಾರುಖ್ ಖಾನ್ ಅವರು ಸಿಗರೇಟ್ ಸೇದೋಕೆ ನಿಂತರೆ ನಿರಂತರವಾಗಿ ಸೇದುತ್ತಲೇ ಇರುತ್ತಾರಂತೆ. ಈ ಬಗ್ಗೆ  ನಟ ಪ್ರದೀಪ್ ರಾವತ್ ಮಾತನಾಡಿದ್ದಾರೆ.

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ರಾಕೇಶ್ ರೋಶನ್ ನಿರ್ದೇಶನದ ‘ಕೊಯ್ಲಾ’ ಸಿನಿಮಾದ ಶೂಟಿಂಗ್ ದಿನಗಳನ್ನು ಇತ್ತೀಚೆಗೆ ಅವರು ನೆನಪಿಸಿಕೊಂಡರು. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಮಾಧುರಿ ದೀಕ್ಷಿತ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

‘ಶೂಟಿಂಗ್ ಸಮಯದಲ್ಲಿ ನಾನು ಶಾರುಖ್ ಖಾನ್ ಜೊತೆ ಕ್ಲೋಸ್ ಆಗಿ ಇರಲಿಲ್ಲ. ಅವರು ಒಳ್ಳೆಯ ವ್ಯಕ್ತಿ. ಯಾವ ನಟರೂ ಶಾರುಖ್ ಖಾನ್ ಸಿಗರೇಟ್ ಸೇದಿದಷ್ಟು ಸೇದಿಲ್ಲ. ಶಾರುಖ್ ಅವರು ಸಿಗರೇಟ್ ಸೇದೋಕೆ ನಿಂತರೆ ಒಂದಾದ ಮೇಲೆ ಒಂದರಂತೆ ಸಿಗರೇಟ್ ಹಚ್ಚುತ್ತಲೇ ಇರುತ್ತಿದ್ದರು. ಅವರು ನಿಜವಾಗಲೂ ಚೈನ್ ಸ್ಮೋಕರ್. ಅದೇ ರೀತಿ ಸಿನಿಮಾದ ಕಡೆ ಅವರು ತೋರುವ ಶ್ರದ್ಧೆ ನಿಜಕ್ಕೂ ದೊಡ್ಡದು’ ಎಂದಿದ್ದಾರೆ ಅವರು.

ಇದನ್ನೂ ಓದಿ:  ಗುಟ್ಕಾ ತಿಂದು ಶಾರುಖ್ ಖಾನ್ ಇನ್ನು ಸತ್ತಿಲ್ಲ ಮತ್ತೆ ನಾವು ಹೇಗೆ ಸಾಯ್ತೀವಿ, ಈ ಬಾಲಕನ ಉತ್ತರ ಕೇಳಿ

ಶಾರುಖ್ ಖಾನ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್​ನ ಒಡೆತನ ಹೊಂದಿದ್ದಾರೆ. ಅವರು ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಸಿಗರೇಟ್ ಸೇದುತ್ತಿರುವ ವಿಡಿಯೋ ಲೀಕ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಸದ್ದು ಮಾಡಿತ್ತು. ಶಾರುಖ್ ಖಾನ್ ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಐಪಿಎಲ್ ಮುಗಿದ ಬಳಿಕ ಅವರು ಹೊಸ ಸಿನಿಮಾ ಘೋಷಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ