AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ಶಾರುಖ್ ಖಾನ್ ಅವರು ‘ಕೊಯ್ಲಾ’ ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

Shah Rukh Khan: ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?
ಶಾರುಖ್
ರಾಜೇಶ್ ದುಗ್ಗುಮನೆ
|

Updated on: May 20, 2024 | 7:58 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರ ಖ್ಯಾತಿ ತುಂಬಾನೇ ದೊಡ್ಡದು. ಅವರು ಕೆಲವೊಮ್ಮೆ ಬೇಡದ ಕಾರಣಕ್ಕೆ ಸುದ್ದಿ ಆಗುತ್ತಾ ಇರುತ್ತಾರೆ. ಅವರ ಕೆಟ್ಟ ಹವ್ಯಾಸಗಳಲ್ಲಿ ಸಿಗರೇಟ್ ಸೇದುವುದು ಕೂಡ ಒಂದು. ಅವರು ಸಿಗರೇಟ್ ಬಿಡುವ ಪ್ರಯತ್ನವನ್ನು ಈ ಮೊದಲು ಮಾಡಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಶಾರುಖ್ ಖಾನ್ ಅವರು ಸಿಗರೇಟ್ ಸೇದೋಕೆ ನಿಂತರೆ ನಿರಂತರವಾಗಿ ಸೇದುತ್ತಲೇ ಇರುತ್ತಾರಂತೆ. ಈ ಬಗ್ಗೆ  ನಟ ಪ್ರದೀಪ್ ರಾವತ್ ಮಾತನಾಡಿದ್ದಾರೆ.

80 ಹಾಗೂ 90ರ ದಶಕದಲ್ಲಿ ಹಿಂದಿಯಲ್ಲಿ ನೆಗೆಟಿವ್ ಪಾತ್ರಗಳನ್ನು ಮಾಡಿ ಗಮನ ಸೆಳೆದವರು ಪ್ರದೀಪ್ ರಾವತ್. ರಾಕೇಶ್ ರೋಶನ್ ನಿರ್ದೇಶನದ ‘ಕೊಯ್ಲಾ’ ಸಿನಿಮಾದ ಶೂಟಿಂಗ್ ದಿನಗಳನ್ನು ಇತ್ತೀಚೆಗೆ ಅವರು ನೆನಪಿಸಿಕೊಂಡರು. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಮಾಧುರಿ ದೀಕ್ಷಿತ್ ಮುಖ್ಯಭೂಮಿಕೆ ನಿರ್ವಹಿಸಿದ್ದರು. ಸಿನಿಮಾದ ಸೆಟ್​ನಲ್ಲಿ ಶಾರುಖ್ ಖಾನ್ ಓರ್ವ ಚೈನ್ ಸ್ಮೋಕರ್ ಅನ್ನೋದು ಪ್ರದೀಪ್ ರಾವತ್​ಗೆ ಗೊತ್ತಾಗಿತ್ತು.

‘ಶೂಟಿಂಗ್ ಸಮಯದಲ್ಲಿ ನಾನು ಶಾರುಖ್ ಖಾನ್ ಜೊತೆ ಕ್ಲೋಸ್ ಆಗಿ ಇರಲಿಲ್ಲ. ಅವರು ಒಳ್ಳೆಯ ವ್ಯಕ್ತಿ. ಯಾವ ನಟರೂ ಶಾರುಖ್ ಖಾನ್ ಸಿಗರೇಟ್ ಸೇದಿದಷ್ಟು ಸೇದಿಲ್ಲ. ಶಾರುಖ್ ಅವರು ಸಿಗರೇಟ್ ಸೇದೋಕೆ ನಿಂತರೆ ಒಂದಾದ ಮೇಲೆ ಒಂದರಂತೆ ಸಿಗರೇಟ್ ಹಚ್ಚುತ್ತಲೇ ಇರುತ್ತಿದ್ದರು. ಅವರು ನಿಜವಾಗಲೂ ಚೈನ್ ಸ್ಮೋಕರ್. ಅದೇ ರೀತಿ ಸಿನಿಮಾದ ಕಡೆ ಅವರು ತೋರುವ ಶ್ರದ್ಧೆ ನಿಜಕ್ಕೂ ದೊಡ್ಡದು’ ಎಂದಿದ್ದಾರೆ ಅವರು.

ಇದನ್ನೂ ಓದಿ:  ಗುಟ್ಕಾ ತಿಂದು ಶಾರುಖ್ ಖಾನ್ ಇನ್ನು ಸತ್ತಿಲ್ಲ ಮತ್ತೆ ನಾವು ಹೇಗೆ ಸಾಯ್ತೀವಿ, ಈ ಬಾಲಕನ ಉತ್ತರ ಕೇಳಿ

ಶಾರುಖ್ ಖಾನ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್​ನ ಒಡೆತನ ಹೊಂದಿದ್ದಾರೆ. ಅವರು ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಸಿಗರೇಟ್ ಸೇದುತ್ತಿರುವ ವಿಡಿಯೋ ಲೀಕ್ ಆಗಿತ್ತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಸದ್ದು ಮಾಡಿತ್ತು. ಶಾರುಖ್ ಖಾನ್ ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಐಪಿಎಲ್ ಮುಗಿದ ಬಳಿಕ ಅವರು ಹೊಸ ಸಿನಿಮಾ ಘೋಷಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ