AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?
ರಾಜು ರಾಹಿಕ್ವಾರ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 12, 2021 | 9:16 AM

ನಟ ಶಾರುಖ್​ ಖಾನ್​ ಈಗ ಸಂಕಷ್ಟದಲ್ಲಿದ್ದಾರೆ. ಅವರ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಪಟ್ಟು, ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದಾರೆ. ಇದರಿಂದ ಬರೀ ಶಾರುಖ್​ ಮಾತ್ರವಲ್ಲದೇ, ಅವರನ್ನು ನಂಬಿಕೊಂಡಿದ್ದ ಅನೇಕರು ಕೂಡ ನೋವು ಅನುಭವಿಸುವಂತಾಗಿದೆ. ಶಾರುಖ್​ ರೀತಿಯೇ ಕಾಣುತ್ತಾರೆ ಎಂಬ ಕಾರಣಕ್ಕೆ ಫೇಮಸ್​ ಆಗಿದ್ದ ರಾಜು ರಾಹಿಕ್ವಾರ್​ ಕೂಡ ಈಗ ಕಷ್ಟದಲ್ಲಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲೂ ಕೂಡ ತಮ್ಮ ಬಳಿ ಹಣ ಇಲ್ಲ ಎಂದು ಅವರು ಗೋಳು ತೋಡಿಕೊಂಡಿದ್ದಾರೆ.

ಸಿನಿಮಾ ಸ್ಟಾರ್​ಗಳ ರೀತಿ ಕಾಣುವ ವ್ಯಕ್ತಿಗಳು ಆರ್ಕೆಸ್ಟ್ರಾ, ಸರ್ಕಸ್​, ರಿಯಾಲಿಟಿ ಶೋ ಮುಂತಾದ ಕಡೆಗಳಲ್ಲಿ ಕೆಲಸ ಮಾಡುತ್ತಾರೆ. ಅದೇ ರೀತಿ ಶಾರುಖ್​ ಖಾನ್​ ರೀತಿ ಕಾಣುವ ರಾಜು ರಾಹಿಕ್ವಾರ್​ ಕೂಡ ಜೀವನ ಸಾಗಿಸುತ್ತಿದ್ದರು. ಅನೇಕ ಇವೆಂಟ್​ಗಳಲ್ಲಿ ಶಾರುಖ್​ ರೀತಿ ವೇಷ ಧರಿಸಿಕೊಂಡು ಕಾಣಿಸಿಕೊಳ್ಳುತ್ತಿದ್ದ ರಾಜು ಅವರು ಜನರಿಗೆ ಮನರಂಜನೆ ನೀಡುತ್ತಿದ್ದರು. ಅದಕ್ಕೆ ಅವರಿಗೆ ಸಂಬಳ ಸಿಗುತ್ತಿತ್ತು. ಅದರಿಂದಲೇ ಅವರ ಜೀವನ ಸಾಗುತ್ತಿತ್ತು. ಆದರೆ ಈಗ ರಾಜು ಸಂಪಾದನೆಗೆ ಅಡ್ಡಿ ಉಂಟಾಗಿದೆ.

‘ಲಾಕ್​ಡೌನ್​ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಯಾವುದೇ ಕಾರ್ಯಕ್ರಮ ಇರಲಿಲ್ಲ. ಈಗತಾನೇ ಕೆಲವು ಇವೆಂಟ್​ಗಳು ಆರಂಭ ಆಗುತ್ತಿದ್ದವು. ಅ.10ರಂದು ನಾನೊಂದು ಬರ್ತ್​ಡೇ ಪಾರ್ಟಿಯಲ್ಲಿ ಕಾರ್ಯಕ್ರಮ ನೀಡಬೇಕಿತ್ತು. ಜೈಪುರದಲ್ಲಿ ಮತ್ತೊಂದು ಸಮಾವೇಷಕ್ಕೂ ತೆರಳಬೇಕಿತ್ತು. ಆದರೆ ಆ ಎರಡೂ ಕಾರ್ಯಕ್ರಮಗಳಿಗೆ ನಾನು ಹೋಗುವಂತಿಲ್ಲ. ಜನರಿಗೆ ಶಾರುಖ್​ ಖಾನ್​ ಅವರ ಸದ್ಯದ ಇಮೇಜ್​ ಕಿರಿಕಿರಿ ಉಂಟು ಮಾಡುತ್ತಿದೆ ಅಂತ ಆಯೋಜಕರು ನನಗೆ ಹೇಳಿದ್ದಾರೆ’ ಎಂದು ರಾಜು ರಾಹಿಕ್ವಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಹಾಗಂತ ಅವರು ಶಾರುಖ್​ರನ್ನು ನಿಂದಿಸುತ್ತಿಲ್ಲ. ‘ಇಂದು ನಾನು ಏನೇ ಗಳಿಸಿದ್ದರೂ ಅದಕ್ಕೆ ಶಾರುಖ್ ಕಾರಣ. ನನಗೆ ಒಂದು ಐಡೆಂಟಿಟಿ​ ಸಿಕ್ಕಿದ್ದೇ ಅವರಿಂದಾಗಿ. ಅವರೇ ನನ್ನ ಗಾಡ್​ ಫಾದರ್​. ಆರ್ಯನ್​ ಆದಷ್ಟು ಬೇಗ ಈ ಸಂಕಟದಿಂದ ಹೊರಬರಲಿ ಅಂತ ಪ್ರಾರ್ಥಿಸುತ್ತೇನೆ’ ಎಂದು ರಾಜು ಹೇಳಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ