ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?
ರಾಜು ರಾಹಿಕ್ವಾರ್​
Follow us
| Updated By: ಮದನ್​ ಕುಮಾರ್​

Updated on: Oct 12, 2021 | 9:16 AM

ನಟ ಶಾರುಖ್​ ಖಾನ್​ ಈಗ ಸಂಕಷ್ಟದಲ್ಲಿದ್ದಾರೆ. ಅವರ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಪಟ್ಟು, ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದಾರೆ. ಇದರಿಂದ ಬರೀ ಶಾರುಖ್​ ಮಾತ್ರವಲ್ಲದೇ, ಅವರನ್ನು ನಂಬಿಕೊಂಡಿದ್ದ ಅನೇಕರು ಕೂಡ ನೋವು ಅನುಭವಿಸುವಂತಾಗಿದೆ. ಶಾರುಖ್​ ರೀತಿಯೇ ಕಾಣುತ್ತಾರೆ ಎಂಬ ಕಾರಣಕ್ಕೆ ಫೇಮಸ್​ ಆಗಿದ್ದ ರಾಜು ರಾಹಿಕ್ವಾರ್​ ಕೂಡ ಈಗ ಕಷ್ಟದಲ್ಲಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲೂ ಕೂಡ ತಮ್ಮ ಬಳಿ ಹಣ ಇಲ್ಲ ಎಂದು ಅವರು ಗೋಳು ತೋಡಿಕೊಂಡಿದ್ದಾರೆ.

ಸಿನಿಮಾ ಸ್ಟಾರ್​ಗಳ ರೀತಿ ಕಾಣುವ ವ್ಯಕ್ತಿಗಳು ಆರ್ಕೆಸ್ಟ್ರಾ, ಸರ್ಕಸ್​, ರಿಯಾಲಿಟಿ ಶೋ ಮುಂತಾದ ಕಡೆಗಳಲ್ಲಿ ಕೆಲಸ ಮಾಡುತ್ತಾರೆ. ಅದೇ ರೀತಿ ಶಾರುಖ್​ ಖಾನ್​ ರೀತಿ ಕಾಣುವ ರಾಜು ರಾಹಿಕ್ವಾರ್​ ಕೂಡ ಜೀವನ ಸಾಗಿಸುತ್ತಿದ್ದರು. ಅನೇಕ ಇವೆಂಟ್​ಗಳಲ್ಲಿ ಶಾರುಖ್​ ರೀತಿ ವೇಷ ಧರಿಸಿಕೊಂಡು ಕಾಣಿಸಿಕೊಳ್ಳುತ್ತಿದ್ದ ರಾಜು ಅವರು ಜನರಿಗೆ ಮನರಂಜನೆ ನೀಡುತ್ತಿದ್ದರು. ಅದಕ್ಕೆ ಅವರಿಗೆ ಸಂಬಳ ಸಿಗುತ್ತಿತ್ತು. ಅದರಿಂದಲೇ ಅವರ ಜೀವನ ಸಾಗುತ್ತಿತ್ತು. ಆದರೆ ಈಗ ರಾಜು ಸಂಪಾದನೆಗೆ ಅಡ್ಡಿ ಉಂಟಾಗಿದೆ.

‘ಲಾಕ್​ಡೌನ್​ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಯಾವುದೇ ಕಾರ್ಯಕ್ರಮ ಇರಲಿಲ್ಲ. ಈಗತಾನೇ ಕೆಲವು ಇವೆಂಟ್​ಗಳು ಆರಂಭ ಆಗುತ್ತಿದ್ದವು. ಅ.10ರಂದು ನಾನೊಂದು ಬರ್ತ್​ಡೇ ಪಾರ್ಟಿಯಲ್ಲಿ ಕಾರ್ಯಕ್ರಮ ನೀಡಬೇಕಿತ್ತು. ಜೈಪುರದಲ್ಲಿ ಮತ್ತೊಂದು ಸಮಾವೇಷಕ್ಕೂ ತೆರಳಬೇಕಿತ್ತು. ಆದರೆ ಆ ಎರಡೂ ಕಾರ್ಯಕ್ರಮಗಳಿಗೆ ನಾನು ಹೋಗುವಂತಿಲ್ಲ. ಜನರಿಗೆ ಶಾರುಖ್​ ಖಾನ್​ ಅವರ ಸದ್ಯದ ಇಮೇಜ್​ ಕಿರಿಕಿರಿ ಉಂಟು ಮಾಡುತ್ತಿದೆ ಅಂತ ಆಯೋಜಕರು ನನಗೆ ಹೇಳಿದ್ದಾರೆ’ ಎಂದು ರಾಜು ರಾಹಿಕ್ವಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಹಾಗಂತ ಅವರು ಶಾರುಖ್​ರನ್ನು ನಿಂದಿಸುತ್ತಿಲ್ಲ. ‘ಇಂದು ನಾನು ಏನೇ ಗಳಿಸಿದ್ದರೂ ಅದಕ್ಕೆ ಶಾರುಖ್ ಕಾರಣ. ನನಗೆ ಒಂದು ಐಡೆಂಟಿಟಿ​ ಸಿಕ್ಕಿದ್ದೇ ಅವರಿಂದಾಗಿ. ಅವರೇ ನನ್ನ ಗಾಡ್​ ಫಾದರ್​. ಆರ್ಯನ್​ ಆದಷ್ಟು ಬೇಗ ಈ ಸಂಕಟದಿಂದ ಹೊರಬರಲಿ ಅಂತ ಪ್ರಾರ್ಥಿಸುತ್ತೇನೆ’ ಎಂದು ರಾಜು ಹೇಳಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ