AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?
ರಾಜು ರಾಹಿಕ್ವಾರ್​
TV9 Web
| Edited By: |

Updated on: Oct 12, 2021 | 9:16 AM

Share

ನಟ ಶಾರುಖ್​ ಖಾನ್​ ಈಗ ಸಂಕಷ್ಟದಲ್ಲಿದ್ದಾರೆ. ಅವರ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಪಟ್ಟು, ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದಾರೆ. ಇದರಿಂದ ಬರೀ ಶಾರುಖ್​ ಮಾತ್ರವಲ್ಲದೇ, ಅವರನ್ನು ನಂಬಿಕೊಂಡಿದ್ದ ಅನೇಕರು ಕೂಡ ನೋವು ಅನುಭವಿಸುವಂತಾಗಿದೆ. ಶಾರುಖ್​ ರೀತಿಯೇ ಕಾಣುತ್ತಾರೆ ಎಂಬ ಕಾರಣಕ್ಕೆ ಫೇಮಸ್​ ಆಗಿದ್ದ ರಾಜು ರಾಹಿಕ್ವಾರ್​ ಕೂಡ ಈಗ ಕಷ್ಟದಲ್ಲಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲೂ ಕೂಡ ತಮ್ಮ ಬಳಿ ಹಣ ಇಲ್ಲ ಎಂದು ಅವರು ಗೋಳು ತೋಡಿಕೊಂಡಿದ್ದಾರೆ.

ಸಿನಿಮಾ ಸ್ಟಾರ್​ಗಳ ರೀತಿ ಕಾಣುವ ವ್ಯಕ್ತಿಗಳು ಆರ್ಕೆಸ್ಟ್ರಾ, ಸರ್ಕಸ್​, ರಿಯಾಲಿಟಿ ಶೋ ಮುಂತಾದ ಕಡೆಗಳಲ್ಲಿ ಕೆಲಸ ಮಾಡುತ್ತಾರೆ. ಅದೇ ರೀತಿ ಶಾರುಖ್​ ಖಾನ್​ ರೀತಿ ಕಾಣುವ ರಾಜು ರಾಹಿಕ್ವಾರ್​ ಕೂಡ ಜೀವನ ಸಾಗಿಸುತ್ತಿದ್ದರು. ಅನೇಕ ಇವೆಂಟ್​ಗಳಲ್ಲಿ ಶಾರುಖ್​ ರೀತಿ ವೇಷ ಧರಿಸಿಕೊಂಡು ಕಾಣಿಸಿಕೊಳ್ಳುತ್ತಿದ್ದ ರಾಜು ಅವರು ಜನರಿಗೆ ಮನರಂಜನೆ ನೀಡುತ್ತಿದ್ದರು. ಅದಕ್ಕೆ ಅವರಿಗೆ ಸಂಬಳ ಸಿಗುತ್ತಿತ್ತು. ಅದರಿಂದಲೇ ಅವರ ಜೀವನ ಸಾಗುತ್ತಿತ್ತು. ಆದರೆ ಈಗ ರಾಜು ಸಂಪಾದನೆಗೆ ಅಡ್ಡಿ ಉಂಟಾಗಿದೆ.

‘ಲಾಕ್​ಡೌನ್​ ಕಾರಣದಿಂದಾಗಿ ಕಳೆದ ಒಂದೂವರೆ ವರ್ಷದಿಂದ ಯಾವುದೇ ಕಾರ್ಯಕ್ರಮ ಇರಲಿಲ್ಲ. ಈಗತಾನೇ ಕೆಲವು ಇವೆಂಟ್​ಗಳು ಆರಂಭ ಆಗುತ್ತಿದ್ದವು. ಅ.10ರಂದು ನಾನೊಂದು ಬರ್ತ್​ಡೇ ಪಾರ್ಟಿಯಲ್ಲಿ ಕಾರ್ಯಕ್ರಮ ನೀಡಬೇಕಿತ್ತು. ಜೈಪುರದಲ್ಲಿ ಮತ್ತೊಂದು ಸಮಾವೇಷಕ್ಕೂ ತೆರಳಬೇಕಿತ್ತು. ಆದರೆ ಆ ಎರಡೂ ಕಾರ್ಯಕ್ರಮಗಳಿಗೆ ನಾನು ಹೋಗುವಂತಿಲ್ಲ. ಜನರಿಗೆ ಶಾರುಖ್​ ಖಾನ್​ ಅವರ ಸದ್ಯದ ಇಮೇಜ್​ ಕಿರಿಕಿರಿ ಉಂಟು ಮಾಡುತ್ತಿದೆ ಅಂತ ಆಯೋಜಕರು ನನಗೆ ಹೇಳಿದ್ದಾರೆ’ ಎಂದು ರಾಜು ರಾಹಿಕ್ವಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾರುಖ್​ ಇಮೇಜ್​ ಹದಗೆಟ್ಟಿರುವ ಕಾರಣದಿಂದಲೇ ರಾಜುಗೆ ಈ ಕಷ್ಟದ ಪರಿಸ್ಥಿತಿ ಉಂಟಾಗಿದೆ. ಹಾಗಂತ ಅವರು ಶಾರುಖ್​ರನ್ನು ನಿಂದಿಸುತ್ತಿಲ್ಲ. ‘ಇಂದು ನಾನು ಏನೇ ಗಳಿಸಿದ್ದರೂ ಅದಕ್ಕೆ ಶಾರುಖ್ ಕಾರಣ. ನನಗೆ ಒಂದು ಐಡೆಂಟಿಟಿ​ ಸಿಕ್ಕಿದ್ದೇ ಅವರಿಂದಾಗಿ. ಅವರೇ ನನ್ನ ಗಾಡ್​ ಫಾದರ್​. ಆರ್ಯನ್​ ಆದಷ್ಟು ಬೇಗ ಈ ಸಂಕಟದಿಂದ ಹೊರಬರಲಿ ಅಂತ ಪ್ರಾರ್ಥಿಸುತ್ತೇನೆ’ ಎಂದು ರಾಜು ಹೇಳಿದ್ದಾರೆ. ಮಕ್ಕಳ ಶಾಲೆ ಫೀಸ್​ ಕಟ್ಟಲು ಡಿಸೆಂಬರ್​ವರೆಗೆ ಸಮಯಾವಕಾಶ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ