ಶಾರುಖ್​ಗೆ ಅಪಘಾತ ಆಗಿತ್ತು ಅನ್ನೋದೇ ಸುಳ್ಳು? ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ‘ಜವಾನ್’ ನಟ

‘ಶಾರುಖ್ ಖಾನ್ ಸಿನಿಮಾ ಒಂದರ ಶೂಟಿಂಗ್​ಗೆ ಲಾಸ್ ಏಂಜಲೀಸ್​ಗೆ ತೆರಳಿದ್ದರು. ಶೂಟಿಂಗ್ ವೇಳೆ ಸಂಭವಿಸಿದ ಅವಘಡದಿಂದ ಶಾರುಖ್ ಮೂಗಿಗೆ ಬಲವಾದ ಏಟು ಬಿದ್ದಿದೆ’ ಎಂದು ವರದಿ ಆಗಿತ್ತು.

ಶಾರುಖ್​ಗೆ ಅಪಘಾತ ಆಗಿತ್ತು ಅನ್ನೋದೇ ಸುಳ್ಳು? ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ‘ಜವಾನ್’ ನಟ
ಶಾರುಖ್ ಖಾನ್
Follow us
|

Updated on: Jul 05, 2023 | 9:08 AM

ಶಾರುಖ್ ಖಾನ್ (Shah Rukh Khan) ಅವರ ಅಭಿಮಾನಿಗಳು ಆತಂಕ್ಕೆ ಒಳಗಾಗುವಂಥ ಸುದ್ದಿ ಒಂದು ಹರಿದಾಡಿತ್ತು. ಶೂಟಿಂಗ್ ವೇಳೆ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾದರು ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೆ, ಇದು ಸುಳ್ಳು ಅನ್ನೋದು ಸಾಬೀತಾಗಿದೆ. ಶಾರುಖ್ ಖಾನ್ ಅವರು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದು, ಸರ್ಜರಿಗೆ ಒಳಗಾದ ಯಾವುದೇ ಗುರುತು ಅವರ ದೇಹದ ಮೇಲೆ ಇರಲಿಲ್ಲ. ಹೀಗಾಗಿ, ಅಪಘಾತ ಸುದ್ದಿ ಸುಳ್ಳೇ ಎನ್ನುವ ಪ್ರಶ್ನೆ ಮೂಡಿದೆ.

‘ಶಾರುಖ್ ಖಾನ್ ಸಿನಿಮಾ ಒಂದರ ಶೂಟಿಂಗ್​ಗೆ ಲಾಸ್ ಏಂಜಲೀಸ್​ಗೆ ತೆರಳಿದ್ದರು. ಶೂಟಿಂಗ್ ವೇಳೆ ಸಂಭವಿಸಿದ ಅವಘಡದಿಂದ ಶಾರುಖ್ ಮೂಗಿಗೆ ಬಲವಾದ ಏಟು ಬಿದ್ದಿದೆ’ ಎಂದು ಇಟೈಮ್ಸ್ ವರದಿ ಮಾಡಿತ್ತು. ಇಷ್ಟೇ ಅಲ್ಲ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಈಗ ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಶಾರುಖ್ ಆರೋಗ್ಯವಾಗಿದ್ದಾರೆ.

ಜುಲೈ 4ರ ರಾತ್ರಿ ಶಾರುಖ್ ಖಾನ್ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುವಾಗ ಕಾಣಿಸಿಕೊಂಡಿದ್ದಾರೆ. ಅವರ ಮೂಗು ಸರಿಯಾಗಿಯೇ ಇದೆ. ಹೀಗಾಗಿ ಅವರಿಗೆ ಅಪಘಾತ ಆಗಿತ್ತು ಎಂಬ ಸುದ್ದಿ ಎಷ್ಟು ಸತ್ಯ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ಇನ್ನೂ ಕೆಲವರು ‘ಮೂಗಿನ ಒಳಭಾಗದಲ್ಲಿ ಗಾಯ ಉಂಟಾಗಿರಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

ಒಂದು ವರ್ಗದ ಜನರು ಶಾರುಖ್ ಖಾನ್ ಅವರು ಆರೋಗ್ಯವಾಗಿ ಮರಳಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ‘ಕಿಂಗ್ ಈಸ್ ಬ್ಯಾಕ್’ ಎಂದು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್ ಅವರು ಸದ್ಯ ‘ಪಠಾಣ್’ ಗೆಲುವಿನ ಖುಷಿಯಲ್ಲಿ ಇದ್ದಾರೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ಕ್ಕೆ ರಿಲೀಸ್ ಆಗಲಿದೆ. ಇದಲ್ಲದೆ ‘ಡಂಕಿ’ ಚಿತ್ರದ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ