AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ಗೆ ಅಪಘಾತ ಆಗಿತ್ತು ಅನ್ನೋದೇ ಸುಳ್ಳು? ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ‘ಜವಾನ್’ ನಟ

‘ಶಾರುಖ್ ಖಾನ್ ಸಿನಿಮಾ ಒಂದರ ಶೂಟಿಂಗ್​ಗೆ ಲಾಸ್ ಏಂಜಲೀಸ್​ಗೆ ತೆರಳಿದ್ದರು. ಶೂಟಿಂಗ್ ವೇಳೆ ಸಂಭವಿಸಿದ ಅವಘಡದಿಂದ ಶಾರುಖ್ ಮೂಗಿಗೆ ಬಲವಾದ ಏಟು ಬಿದ್ದಿದೆ’ ಎಂದು ವರದಿ ಆಗಿತ್ತು.

ಶಾರುಖ್​ಗೆ ಅಪಘಾತ ಆಗಿತ್ತು ಅನ್ನೋದೇ ಸುಳ್ಳು? ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ‘ಜವಾನ್’ ನಟ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 05, 2023 | 9:08 AM

Share

ಶಾರುಖ್ ಖಾನ್ (Shah Rukh Khan) ಅವರ ಅಭಿಮಾನಿಗಳು ಆತಂಕ್ಕೆ ಒಳಗಾಗುವಂಥ ಸುದ್ದಿ ಒಂದು ಹರಿದಾಡಿತ್ತು. ಶೂಟಿಂಗ್ ವೇಳೆ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾದರು ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೆ, ಇದು ಸುಳ್ಳು ಅನ್ನೋದು ಸಾಬೀತಾಗಿದೆ. ಶಾರುಖ್ ಖಾನ್ ಅವರು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿದ್ದು, ಸರ್ಜರಿಗೆ ಒಳಗಾದ ಯಾವುದೇ ಗುರುತು ಅವರ ದೇಹದ ಮೇಲೆ ಇರಲಿಲ್ಲ. ಹೀಗಾಗಿ, ಅಪಘಾತ ಸುದ್ದಿ ಸುಳ್ಳೇ ಎನ್ನುವ ಪ್ರಶ್ನೆ ಮೂಡಿದೆ.

‘ಶಾರುಖ್ ಖಾನ್ ಸಿನಿಮಾ ಒಂದರ ಶೂಟಿಂಗ್​ಗೆ ಲಾಸ್ ಏಂಜಲೀಸ್​ಗೆ ತೆರಳಿದ್ದರು. ಶೂಟಿಂಗ್ ವೇಳೆ ಸಂಭವಿಸಿದ ಅವಘಡದಿಂದ ಶಾರುಖ್ ಮೂಗಿಗೆ ಬಲವಾದ ಏಟು ಬಿದ್ದಿದೆ’ ಎಂದು ಇಟೈಮ್ಸ್ ವರದಿ ಮಾಡಿತ್ತು. ಇಷ್ಟೇ ಅಲ್ಲ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಈಗ ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಶಾರುಖ್ ಆರೋಗ್ಯವಾಗಿದ್ದಾರೆ.

ಜುಲೈ 4ರ ರಾತ್ರಿ ಶಾರುಖ್ ಖಾನ್ ಅವರು ಮುಂಬೈ ವಿಮಾನ ನಿಲ್ದಾಣದಿಂದ ಹೊರ ಬರುವಾಗ ಕಾಣಿಸಿಕೊಂಡಿದ್ದಾರೆ. ಅವರ ಮೂಗು ಸರಿಯಾಗಿಯೇ ಇದೆ. ಹೀಗಾಗಿ ಅವರಿಗೆ ಅಪಘಾತ ಆಗಿತ್ತು ಎಂಬ ಸುದ್ದಿ ಎಷ್ಟು ಸತ್ಯ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ಇನ್ನೂ ಕೆಲವರು ‘ಮೂಗಿನ ಒಳಭಾಗದಲ್ಲಿ ಗಾಯ ಉಂಟಾಗಿರಬಹುದು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

ಒಂದು ವರ್ಗದ ಜನರು ಶಾರುಖ್ ಖಾನ್ ಅವರು ಆರೋಗ್ಯವಾಗಿ ಮರಳಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ‘ಕಿಂಗ್ ಈಸ್ ಬ್ಯಾಕ್’ ಎಂದು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್ ಅವರು ಸದ್ಯ ‘ಪಠಾಣ್’ ಗೆಲುವಿನ ಖುಷಿಯಲ್ಲಿ ಇದ್ದಾರೆ. ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ಕ್ಕೆ ರಿಲೀಸ್ ಆಗಲಿದೆ. ಇದಲ್ಲದೆ ‘ಡಂಕಿ’ ಚಿತ್ರದ ಕೆಲಸಗಳಲ್ಲೂ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ