AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಶಾರುಖ್​ ಖಾನ್​ ಅವರು ‘ಪಠಾಣ್​’  ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್​ಗೆ ಅವರು ವಿದೇಶಕ್ಕೆ ತೆರಳಬೇಕಿತ್ತು. ಆದರೆ, ಆರ್ಯನ್​ ಜೈಲಿನಲ್ಲಿ ಇದ್ದಿದ್ದರಿಂದ ಅದು ಸಾಧ್ಯವಾಗಿಲ್ಲ.

ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ
ಶಾರುಖ್​ ಕುಟುಂಬ
TV9 Web
| Edited By: |

Updated on:Nov 12, 2021 | 7:57 PM

Share

ಶಾರುಖ್​ ಖಾನ್ (Shah Rukh Khan)​ ಮಗ ಆರ್ಯನ್​ ಖಾನ್ (Aryan Khan)​ ಮುಖಪರಿಚಯ ಅಷ್ಟಾಗಿ ಇರಲಿಲ್ಲ. ಹೀಗಾಗಿ, ಆರ್ಯನ್​ ಸಾಕಷ್ಟು ಕಡೆಗಳಲ್ಲಿ ಬಾಡಿಗಾರ್ಡ್​ ಇಲ್ಲದೆ ಫ್ರೆಂಡ್ಸ್ ಜತೆ ಓಡಾಡುತ್ತಿದ್ದರು. ಆದರೆ, ಈಗ ಹಾಗಿಲ್ಲ. ಆರ್ಯನ್​ ಖಾನ್​ ಎಂದರೆ ಎಲ್ಲರಿಗೂ ಗೊತ್ತಾಗಿದೆ. ಡ್ರಗ್​ ಕೇಸ್​ನಲ್ಲಿ (Bollywood Drug Case) ಸಿಕ್ಕಿ ಬಿದ್ದು ಅವರು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಈ ಕಾರಣಕ್ಕೆ ಅಕ್ಟೋಬರ್​ ತಿಂಗಳಿಂದ ಅವರು ಹೆಚ್ಚು ಸುದ್ದಿಯಲ್ಲಿದ್ದಾರೆ. ಈ ಕಾರಣಕ್ಕೆ ಅವರು ಈಗ ಒಬ್ಬಂಟಿಯಾಗಿ ಹೊರಗೆ ತಿರುಗಾಡುವಂತಿಲ್ಲ. ಅವರು ಹೊರ ಬಂದರೆ ಸಾಕು ಮಾಧ್ಯಮಗಳು ಅವರನ್ನು ಮುತ್ತಿಕೊಳ್ಳುತ್ತವೆ. ಈ ಕಾರಣಕ್ಕೆ ಆರ್ಯನ್​ಗೆ ಬಾಡಿಗಾರ್ಡ್​ ನೇಮಕ ಮಾಡೋದು ಶಾರುಖ್​ಗೆ ಅನಿವಾರ್ಯವಾಗಿದೆ. ಹೀಗಾಗಿ, ಅವರು ಈಗ ಒಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ಶಾರುಖ್​ ಖಾನ್​ ಅವರು ‘ಪಠಾಣ್​’  ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಂಗ್​ ಶೂಟಿಂಗ್​ಗೆ ಅವರು ವಿದೇಶಕ್ಕೆ ತೆರಳಬೇಕಿತ್ತು. ಆದರೆ, ಆರ್ಯನ್​ ಜೈಲಿನಲ್ಲಿ ಇದ್ದಿದ್ದರಿಂದ ಅದು ಸಾಧ್ಯವಾಗಿಲ್ಲ. ಈಗ ಅವರು ಸಿನಿಮಾ ಕೆಲಸಕ್ಕೆ ಮರಳಬೇಕಿದೆ. ಅದಕ್ಕೂ ಮೊದಲು ಆರ್ಯನ್​ಗೆ ಬಾಡಿಗಾರ್ಡ್​ ನೇಮಕ ಮಾಡೋದು ಶಾರುಖ್​ಗೆ ಅನಿವಾರ್ಯ. ಹೀಗಾಗಿ, ಶಾರುಖ್​ ಮಹತ್ವದ ನಿರ್ಧಾರ ತೆಗೆದುಕೊಳ್ಳೋಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಕಳೆದ 10 ವರ್ಷಗಳಿಂದಲೂ ಶಾರುಖ್​ ಖಾನ್​ಗೆ ಬಾಡಿಗಾರ್ಡ್​ ಆಗಿ ರವಿ ಸಿಂಗ್​ ಕೆಲಸ ಮಾಡುತ್ತಿದ್ದಾರೆ. ಶಾರುಖ್​ ಎಲ್ಲಿಯೇ ಹೋದರು ಅವರ ಜತೆ ರವಿ ಇರುತ್ತಾರೆ. ಎಷ್ಟೇ ದೊಡ್ಡ ಗುಂಪಿದ್ದರೂ ಶಾರುಖ್​ ಖಾನ್​ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವ ಕೆಲಸವನ್ನು ರವಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಈಗ ಆರ್ಯನ್​ ಜತೆ ರವಿ ಸಿಂಗ್​ ಅವರನ್ನು ಬಿಟ್ಟು, ತಾವು ಹೊಸ ಬಾಡಿಗಾರ್ಡ್ ಹುಡುಕಲು ಶಾರುಖ್​ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಶಾರುಖ್​ ಖಾನ್ ಅವರು ರವಿಗೆ​ ವರ್ಷಕ್ಕೆ 2.7 ಕೋಟಿ ರೂ. ಸಂಬಳ ನೀಡುತ್ತಾರೆ. ಅತಿ ಹೆಚ್ಚು ಸಂಬಳ ಪಡೆಯುವ ಬಾಡಿಗಾರ್ಡ್​ ಎಂಬ ಖ್ಯಾತಿ ರವಿ ಅವರದ್ದು. ಈಗ ಅವರು ಆರ್ಯನ್​ ಬಾಡಿಗಾರ್ಡ್​ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಎಲ್ಲರ ಜತೆ ಮಾತನಾಡುವುದನ್ನೇ ನಿಲ್ಲಿಸಿದ ಆರ್ಯನ್​ ಖಾನ್? ಜೈಲುವಾಸದಿಂದ ಆಘಾತ 

ವಿಚ್ಛೇದನದ ಬಳಿಕ ಸಮಂತಾಗೆ ಶಾರುಖ್​ ಕಡೆಯಿಂದ 2ನೇ ಚಾನ್ಸ್​; ಸ್ಟಾರ್​ ನಟಿಯ ಉತ್ತರ ಏನು?

Published On - 6:45 pm, Fri, 12 November 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು