Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ಗೊತ್ತಾಗದಂತೆ ಕ್ಲಿನಿಕ್​ ಒಳಗೆ ಹೋದ ಶಾರುಖ್ ಖಾನ್; ಬರುವಾಗ ಆಗಿದ್ದೇನು?

ಶಾರುಖ್ ಖಾನ್​ನ ಇತ್ತೀಚೆಗೆ ಮುಂಬೈ ಕ್ಲಿನಿಕ್ ಒಂದಕ್ಕೆ ತೆರಳಿದ್ದಾರೆ. ಒಮ್ಮೆ ಕಣ್ತುಂಬಿಕೊಂಡರೆ ಸಾಕು ಎಂದು ಅನೇಕರು ಅಲ್ಲಿಯೇ ಸಾಕಷ್ಟು ಹೊತ್ತು ಕಾದರು. ಆದರೆ ಶಾರುಖ್ ಖಾನ್ ಯಾರ ಕೈಗೂ ಸಿಗಲಿಲ್ಲ.

ಯಾರಿಗೂ ಗೊತ್ತಾಗದಂತೆ ಕ್ಲಿನಿಕ್​ ಒಳಗೆ ಹೋದ ಶಾರುಖ್ ಖಾನ್; ಬರುವಾಗ ಆಗಿದ್ದೇನು?
ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Jan 17, 2024 | 10:30 AM

ಶಾರುಖ್ ಖಾನ್ (Shah Rukh Khan) ಅವರು ಹೋದಲ್ಲೆಲ್ಲ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಅಭಿಮಾನಿಗಳಿಗೆ ಗೊತ್ತಾಗದಂತೆ ತಲೆಮರಿಸಿಕೊಂಡು ಹೋಗುವುದು ಎಂದರೆ ಅದು ಸುಲಭದಮಾತಲ್ಲ. ಇತ್ತೀಚೆಗೆ ಶಾರುಖ್ ಖಾನ್ ಅವರು ಮುಂಬೈ ಕ್ಲಿನಿಕ್ ಒಂದಕ್ಕೆ ತೆರಳಿದ್ದರು. ಯಾರಿಗೂ ತಿಳಿಯಬಾರದು ಎನ್ನುವ ಕಾರಣಕ್ಕೆ ಹೂಡಿಯನ್ನು ಮುಖಕ್ಕೆ ಮುಚ್ಚಿಕೊಂಡಿದ್ದರು. ಆದರೆ, ಈ ಪ್ರಯತ್ನ ವ್ಯರ್ಥವಾಗಿದೆ. ಶಾರುಖ್ ಖಾನ್ ಅವರನ್ನು ಎಲ್ಲರೂ ಪತ್ತೆ ಹಚ್ಚಿದ್ದಾರೆ. ಅವರನ್ನು ನೋಡಲು ಜನಸಾಗರವೇ ನೆರದಿತ್ತು.

ಶಾರುಖ್ ಖಾನ್ ಅವರು ಮುಂಬೈನಲ್ಲಿ ಕ್ಲಿನಿಕ್ ಒಂದಕ್ಕೆ ತೆರಳಿದ್ದರು. ವಿಚಾರ ಗೊತ್ತಾಗುತ್ತಿದ್ದಂತೆ ಅಭಿಮಾನಿಗಳು ನೆರೆಯೋಕೆ ಆರಂಭಿಸಿದರು. ಶಾರುಖ್ ಖಾನ್ ಅವರನ್ನು ಒಮ್ಮೆ ಕಣ್ತುಂಬಿಕೊಂಡರೆ ಸಾಕು ಎಂದು ಅನೇಕರು ಅಲ್ಲಿಯೇ ಸಾಕಷ್ಟು ಹೊತ್ತು ಕಾದರು. ಆದರೆ ಶಾರುಖ್ ಖಾನ್ ಯಾರ ಕೈಗೂ ಸಿಗಲಿಲ್ಲ. ಶಾರುಖ್ ಖಾನ್ ಪಕ್ಕದಲ್ಲಿ ಅವರ ಮ್ಯಾನೇಜರ್ ಇದ್ದರು. ವೈ + ಕೆಟೆಗರಿ ರಕ್ಷಣೆ ಇದ್ದಿದ್ದರಿಂದ ಯಾರಿಗೂ ಅವರ ಬಳಿ ಸುಳಿಯೋಕೆ ಆಗಲಿಲ್ಲ. ಇದರಿಂದ ಫ್ಯಾನ್ಸ್ ಬೇಸರಗೊಂಡರು.

ಇದನ್ನೂ ಓದಿ: ‘ಧೂಮ್ 4’ನಲ್ಲಿ ಶಾರುಖ್ ಖಾನ್ ನಾಯಕ? ಜೊತೆಯಾಗಲಿದ್ದಾರೆ ದಕ್ಷಿಣದ ನಟ?

ಶಾರುಖ್ ಖಾನ್ ಅವರಿಗೆ 2023 ಆಶಾದಾಯಕವಾಗಿತ್ತು. ಅವರ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಚಿತ್ರಗಳು ಗೆದ್ದು ಬೀಗಿದವು. ಈಗ ಅವರ ಮುಂದಿನ ಸಿನಿಮಾ ಆಯ್ಕೆಯ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಮೂಡಿದೆ. ಅವರು ಸಾಕಷ್ಟು ಅಳೆದು ತೂಗಿ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಅವರ ಸಿನಿಮಾ ಬೇಗ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

View this post on Instagram

A post shared by Voompla (@voompla)

ಇದನ್ನೂ ಓದಿ: ಹೊಸ ಚಿತ್ರಕ್ಕೆ ಸಹಿ ಹಾಕಿದ ಶಾರುಖ್ ಖಾನ್? ಈ ಬಾರಿ ಮತ್ತೊಂದು ಪ್ರಯೋಗ

ಜನವರಿ 28ರಂದು ಫಿಲ್ಮ್​ಫೇರ್ ಅವಾರ್ಡ್ ನಡೆಯಲಿದೆ. ಅದಕ್ಕೆ ಶಾರುಖ್ ಖಾನ್ ಹೆಸರು ‘ಅತ್ಯುತ್ತಮ ನಟ’ ನಾಮಿನೇಷನ್​ನಲ್ಲಿ ಎರಡು ಬಾರಿ ನಾಮಿನೇಟ್ ಆಗಿದೆ. ಅವರ ಮೂರು ಸಿನಿಮಾಗಳು ಕೂಡ ಹಲವು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿವೆ. ಹೀಗಾಗಿ, ಅವರು ಈ ಬಾರಿ ಒಂದಷ್ಟು ಅವಾರ್ಡ್ ಬಾಚಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ