AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ ಬಂಧನದಿಂದ ಸಂಕಷ್ಟಕ್ಕೆ ಸಿಲುಕಿದ ಶಾರುಖ್​ ಸಿನಿಮಾಗಳು; ಕೋಟ್ಯಂತರ ರೂಪಾಯಿ ನಷ್ಟ

ಶಾರುಖ್​ ಖಾನ್​ ಅವರು ಅಟ್ಲೀ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಕೂಡ ಪ್ರಗತಿಯಲ್ಲಿದೆ. ಆದರೆ, ಶಾರುಖ್​ ಇಲ್ಲದ ಕಾರಣ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ.

ಆರ್ಯನ್​ ಖಾನ್​ ಬಂಧನದಿಂದ ಸಂಕಷ್ಟಕ್ಕೆ ಸಿಲುಕಿದ ಶಾರುಖ್​ ಸಿನಿಮಾಗಳು; ಕೋಟ್ಯಂತರ ರೂಪಾಯಿ ನಷ್ಟ
ಆರ್ಯನ್ ಖಾನ್, ಶಾರುಖ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 06, 2021 | 8:47 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಎರಡು ಬಿಗ್​ ಬಜೆಟ್​ ಚಿತ್ರಗಳೇ. ಈ ಸಿನಿಮಾಗಳ ಶೂಟಿಂಗ್​ ಈಗಾಗಲೇ ಆರಂಭಗೊಂಡಿದೆ. ಆದರೆ, ಆರ್ಯನ್​ ಖಾನ್​ ಮಾಡಿಕೊಂಡ ಎಡವಟ್ಟಿನಿಂದ ಈ ಸಿನಿಮಾಗಳು ನಷ್ಟ ಅನುಭವಿಸುವಂತಾಗಿದೆ.

ಆರ್ಯನ್​ ಖಾನ್​ ಅಕ್ಟೋಬರ್​ 2ರ ರಾತ್ರಿ ಬಂಧನಕ್ಕೆ ಒಳಗಾದರು. ಅಂದಿನಿಂದ ಇಂದಿನವರೆಗೆ ಶಾರುಖ್​ ಖಾನ್​ಗೆ ಯಾವುದರ ಮೇಲೂ ಗಮನಹರಿಸೋಕೆ ಸಾಧ್ಯವಾಗುತ್ತಿಲ್ಲ. ಮಗನನ್ನು ಹೊರಗೆ ಕರೆದುಕೊಂಡು ಬರಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಶಾರುಖ್​ ಖಾನ್. ಅಕ್ಟೋಬರ್​ 3ರಂದು ಶಾರುಖ್​ ಖಾನ್ ಸ್ಪೇನ್​ಗೆ ತೆರಳಬೇಕಿತ್ತು. ‘ಪಠಾಣ್​’ ಸಿನಿಮಾದ ವಿಶೇಷ ಸಾಂಗ್​ ಶೂಟಿಂಗ್​ನಲ್ಲಿ ದೀಪಿಕಾ ಜತೆ ಅವರು ಹೆಜ್ಜೆ ಹಾಕಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದರಿಂದ ಇಡೀ ಸಿನಿಮಾ ತಂಡ ವಿದೇಶಕ್ಕೆ ತೆರಳೋದು ಕ್ಯಾನ್ಸಲ್​ ಆಗಿತ್ತು. ಇದರಿಂದ ಚಿತ್ರತಂಡಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎನ್ನಲಾಗಿದೆ.

ಶಾರುಖ್​ ಖಾನ್​ ಅವರು ಅಟ್ಲೀ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಕೂಡ ಪ್ರಗತಿಯಲ್ಲಿದೆ. ಆದರೆ, ಶಾರುಖ್​ ಇಲ್ಲದ ಕಾರಣ ಸಿನಿಮಾ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಇದರಿಂದಲೂ ಸಿನಿಮಾ ತಂಡಕ್ಕೆ ನಷ್ಟ ಉಂಟಾಗುತ್ತಿದೆ.

ಅಟ್ಲೀ ಸಿನಿಮಾ ಈಗ 20 ದಿನದ ಶೂಟಿಂಗ್​ ಪೂರ್ಣಗೊಳಿಸಿದೆ. ಇನ್ನೂ ಬರೋಬ್ಬರಿ 180 ದಿನಗಳ ಶೂಟಿಂಗ್​ ಬಾಕಿ ಇದೆ. ಈಗ ಶಾರುಖ್​ ಸೆಟ್​ಗೆ ಬರದೇ ಇರುವುದರಿಂದ ಸಿನಿಮಾ ಶೂಟಿಂಗ್​ ಕೂಡ ವಿಳಂಬವಾಗುತ್ತಿದೆ.

ಶಾರುಖ್​ ಖಾನ್ ಮಗ ಆರ್ಯನ್​ ಅವರು ಇನ್ನೂ ಎಷ್ಟು ದಿನ ಎನ್​ಸಿಬಿ ಕಸ್ಟಡಿಯಲ್ಲಿ ಇರಬೇಕು ಎಂಬುದು ಅನಿಶ್ಚಿತವಾಗಿದೆ. ಆರ್ಯನ್ ಹಿಂದಿರುಗುವವರೆಗೆ ಶಾರುಖ್​ ಸೆಟ್​ಗೆ ಮರಳುವುದಿಲ್ಲ.

ನಾನಾ ರೀತಿಯ ಬಟ್ಟೆ ಧರಿಸುತ್ತಿರುವ ಸ್ಟಾರ್​ ಕಿಡ್​​ ಆರ್ಯನ್​ಗೆ ಹೇಗಿದೆ ಉಪಚಾರ? ಇಲ್ಲಿದೆ ಮಾಹಿತಿ

ಡ್ರಗ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನಿಗೆ ದೊಡ್ಡ ಪಾಠ ಕಲಿಸಿದ್ದ ಜಾಕಿ ಚಾನ್​; ಶಾರುಖ್​ಗೆ ನೋಡಿ ಕಲಿಯಿರಿ ಎಂದ ಅಭಿಮಾನಿಗಳು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!