ಎಷ್ಟೇ ಟ್ರೋಲ್ ಆದರೂ ಕಡಿಮೆ ಆಗಿಲ್ಲ ಶಾರುಖ್ ಖಾನ್ ಖ್ಯಾತಿ; ಸ್ಟಾರ್ ನಟನ ಅಪರೂಪದ ಸಾಧನೆ

ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್, ಸಾರ್ವಕಾಲಿಕ 50 ಶ್ರೇಷ್ಠ ನಟರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ. ಈ ಮ್ಯಾಗಜಿನ್​ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಹೀರೋ ಶಾರುಖ್ ಖಾನ್ ಅನ್ನೋದು ವಿಶೇಷ.

ಎಷ್ಟೇ ಟ್ರೋಲ್ ಆದರೂ ಕಡಿಮೆ ಆಗಿಲ್ಲ ಶಾರುಖ್ ಖಾನ್ ಖ್ಯಾತಿ; ಸ್ಟಾರ್ ನಟನ ಅಪರೂಪದ ಸಾಧನೆ
ಶಾರುಖ್
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 21, 2022 | 9:25 AM

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರು ಸಾಲು ಸಾಲು ಸೋಲು ಕಾಣುತ್ತಿದ್ದಾರೆ. 2018ರಲ್ಲಿ ತೆರೆಗೆ ಬಂದ ‘ಜೀರೋ’ ಸಿನಿಮಾ ಬಳಿಕ ಶಾರುಖ್ ಖಾನ್ ಅವರು ನಟನೆಯಿಂದ ಹಿಂದೆ ಸರಿದರು. ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎನ್ನುವಾಗಲೇ ಮಗ ಆರ್ಯನ್ ಖಾನ್ ಡ್ರಗ್​ ಕೇಸ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತು. ಈಗ ‘ಪಠಾಣ್​’ ಚಿತ್ರದ (Pathan Movie) ‘ಬೇಷರಂ ರಂಗ್​..’ ಹಾಡಿನ ವಿವಾದದಿಂದ ಶಾರುಖ್ ಖಾನ್ ಟೀಕೆಗೆ ಒಳಗಾಗುತ್ತಿದ್ದಾರೆ. ಆದರೆ, ಅವರ ಜನಪ್ರಿಯತೆ ಕೊಂಚವೂ ತಗ್ಗಿಲ್ಲ. ಇದಕ್ಕೆ ಹೊಸ ಸಾಕ್ಷ್ಯ ಸಿಕ್ಕಿದೆ.

ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್, ಸಾರ್ವಕಾಲಿಕ 50 ಶ್ರೇಷ್ಠ ನಟರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ. ಈ ಮ್ಯಾಗಜಿನ್​ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಹೀರೋ ಶಾರುಖ್ ಖಾನ್ ಅನ್ನೋದು ವಿಶೇಷ. ಶಾರುಖ್ ಖಾನ್ ಅವರ ಜನಪ್ರಿಯತೆಗೆ ಸಿಕ್ಕ ಸಾಕ್ಷಿಯಾಗಿದೆ. ಶಾರುಖ್ ಖಾನ್ ಮಾಡಿದ ಅಪರೂಪದ ಸಾಧನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಪಟ್ಟಿಯಲ್ಲಿ ಹಾಲಿವುಡ್​ನ ಅನೇಕ ಹೀರೋಗಳ ಹೆಸರು ಇದೆ.

ಶಾರುಖ್ ಖಾನ್ ಮಾಡಿದ ಸಾಧನೆ ವಿಚಾರದ ಬಗ್ಗೆ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ. ‘ಯಾರು ಎಷ್ಟೇ ವಿವಾದ ಸೃಷ್ಟಿ ಮಾಡಬಹುದು. ಆದರೆ, ಶಾರುಖ್ ಖಾನ್ ಅವರ ಖ್ಯಾತಿ ಕಡಿಮೆ ಆಗುವುದಿಲ್ಲ’ ಎಂದಿದ್ದಾರೆ  ಫ್ಯಾನ್ಸ್.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರ 2023ರ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಧರಿಸಿದ್ದು ವಿವಾದ ಆಗಿತ್ತು. ಅನೇಕರು ಈ ಬಗ್ಗೆ ಅಪಸ್ವರ ತೆಗೆದಿದ್ದರು. ಕೆಲ ಮುಸ್ಲಿಂ ಸಮುದಾಯದವರೂ ಈ ಚಿತ್ರದ ಟೈಟಲ್​ ಬಗ್ಗೆ ಟೀಕೆ ಮಾಡಿದ್ದರು. ಪಠಾಣರಿಗೆ ಅವಮಾನ ಮಾಡುವ ಕೆಲಸ ಆಗುತ್ತಿದೆ ಎಂದು ಕೆಲವರು ಹೇಳಿದ್ದರು. ಸಿನಿಮಾ ರಿಲೀಸ್​ಗೂ ಮೊದಲೇ ಬೈಕಾಟ್​ ಟ್ರೆಂಡ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Wed, 21 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ