AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕನ ಮೊಬೈಲ್​ಅನ್ನು ದಾಲ್​ನಲ್ಲಿ ಮುಳುಗಿಸಿದ ಶಾರುಖ್​ ಖಾನ್​; ವಿಡಿಯೋ ವೈರಲ್​

ಶಾರುಖ್​ ಹಾಗೂ ಅನುರಾಗ್​ ಕಶ್ಯಪ್​ ಇಬ್ಬರೂ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಇತ್ತೀಚೆಗೆ ರಿಲೀಸ್​ ಆದ ಜಾಹೀರಾತು ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಹೊಸ ಜಾಹೀರಾತು ರಿಲೀಸ್​ ಆಗಿದೆ.

ಖ್ಯಾತ ನಿರ್ದೇಶಕನ ಮೊಬೈಲ್​ಅನ್ನು ದಾಲ್​ನಲ್ಲಿ ಮುಳುಗಿಸಿದ ಶಾರುಖ್​ ಖಾನ್​; ವಿಡಿಯೋ ವೈರಲ್​
ಶಾರುಖ್​ ಖಾನ್
TV9 Web
| Edited By: |

Updated on: Mar 24, 2022 | 7:29 PM

Share

ನಟ ಶಾರುಖ್​ ಖಾನ್ (Shah Rukh Khan)​ ಅವರ ಕೊನೆಯ ಸಿನಿಮಾ ತೆರೆಗೆ ಬಂದು ಸುಮಾರು ನಾಲ್ಕು ವರ್ಷಗಳೇ ಕಳೆದಿವೆ. ಈಗ ಅವರು ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಇದರ ಜತೆಗೆ ಶಾರುಖ್​ ಸಾಕಷ್ಟು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಎಸ್​ಆರ್​ಕೆ+ (SRK+)  ಹೆಸರಿನ ಒಟಿಟಿ ತರುವುದಾಗಿಯೂ ಅವರು ಘೋಷಣೆ ಮಾಡಿದ್ದರು. ಅದು ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ಗಾಗಿ ಮಾಡಿದ ಜಾಹೀರಾತು ಎಂಬುದು ಆ ಬಳಿಕ ಗೊತ್ತಾಗಿತ್ತು. ಈ ಮಧ್ಯೆ, ಶಾರುಖ್​ ಖ್ಯಾತ ನಿರ್ದೇಶಕ ಅನುರಾಗ್​ ಕಶ್ಯಪ್ (Anurag Kashyap)​ ಅವರ ಮೊಬೈಲ್​ಅನ್ನು ದಾಲ್​ನಲ್ಲಿ ಮುಳುಗಿಸಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಶಾರುಖ್​ ಹಾಗೂ ಅನುರಾಗ್​ ಕಶ್ಯಪ್​ ಇಬ್ಬರೂ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಇತ್ತೀಚೆಗೆ ರಿಲೀಸ್​ ಆದ ಜಾಹೀರಾತು ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಹೊಸ ಜಾಹೀರಾತು ರಿಲೀಸ್​ ಆಗಿದೆ. ಈ ಜಾಹೀರಾತಿನಲ್ಲಿ ಶಾರುಖ್​, ಅನುರಾಗ್​ ಊಟ ಮಾಡುತ್ತಿರುತ್ತಾರೆ. ಈ ವೇಳೆ ಶಾರುಖ್ ಪಿ.ಎ. ‘ಒಟಿಟಿ ಪ್ಲಾಟ್​ಫಾರ್ಮ್​ಗೆ ಹೊಹೊಸ ಆಲೋಚನೆಗಳು ಬೇಕು’ ಎಂದು ಹೇಳುತ್ತಾರೆ. ಆದರೆ, ಅನುರಾಗ್​ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುವುದೇ ಇಲ್ಲ. ಒಂದೇ ಸಮನೆ ಊಟ ಮಾಡುತ್ತಲೇ ಇರುತ್ತಾರೆ. ಈ ವೇಳೆ ಸಿಟ್ಟಾದ ಶಾರುಖ್​ ಅವರು ಅನುರಾಗ್​ ಮೊಬೈಲ್​ಅನ್ನು ದಾಲಿನ​ ಪಾತ್ರೆಯಲ್ಲಿ ಹಾಕುತ್ತಾರೆ. ಆ ಬಳಿಕ ಕ್ಷಮೆ ಕೇಳುತ್ತಾರೆ.

ಶಾರುಖ್​ ಖಾನ್ ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟ. ‘ಪಠಾಣ್​’ ಸಿನಿಮಾ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದರ ಜತೆಗೆ ನಿರ್ಮಾಣದಲ್ಲೂ ಶಾರುಖ್​ ಖಾನ್​ ಬ್ಯುಸಿ ಆಗಿದ್ದಾರೆ. ‘ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್​​’ ಸ್ಟುಡಿಯೋಸ್​ ಅಡಿಯಲ್ಲಿ ಹಲವು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈಗ ಅವರು ಎಸ್​ಆರ್​ಕೆ+ ಹೆಸರಿನ ಒಟಿಟಿ ಪ್ಲಾಟ್​ಫಾರ್ಮ್​ ಲಾಂಚ್ ಮಾಡೋಕೆ ರೆಡಿ ಆಗಿದ್ದಾರೆ ಎನ್ನಲಾಗಿತ್ತು. ಖುದ್ದು ಶಾರುಖ್​ ಅವರೇ ಹೊಸ ಪೋಸ್ಟರ್​ ಹಂಚಿಕೊಂಡು ಈ ಬಗ್ಗೆ ಅಪ್​ಡೇಟ್​ ನೀಡಿದ್ದರು. ಆದರೆ, ಇದು ಡಿಸ್ನಿ+ ಸ್ಟಾರ್ ಜತೆಗೆ ಮಾಡಿಕೊಂಡಿದ್ದ ಒಪ್ಪಂದ ಎಂಬುದು ಆ ಬಳಿಕ ಗೊತ್ತಾಗಿತ್ತು. ಈ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

‘ಪಠಾಣ್​’ ಸಿನಿಮಾದಿಂದ ಒಂದು ಗೆಲುವು ಕಾಣುವುದು ಶಾರುಖ್​ ಖಾನ್​ ಅವರಿಗೆ ತುಂಬ ಅನಿವಾರ್ಯ ಆಗಿದೆ. ಹಾಗಾಗಿ ಅವರು ಈ ಚಿತ್ರಕ್ಕಾಗಿ ಎಲ್ಲಿಲ್ಲದಂತೆ ಕಷ್ಟಪಡುತ್ತಿದ್ದಾರೆ ಎನ್ನಲಾಗಿದೆ. 8 ಪ್ಯಾಕ್​ ಆ್ಯಬ್ಸ್​ ಮೂಲಕ ಅಭಿಮಾನಿಗಳ ಮುಂದೆ ಬಂದು ಮನರಂಜನೆ ನೀಡಲು ಅವರು ತೀರ್ಮಾನಿಸಿದಂತಿದೆ. ಅದಕ್ಕಾಗಿ ದೇಹ ದಂಡಿಸಿ ತಯಾರಾಗಿದ್ದಾರೆ. ಆದರೆ ಶೂಟಿಂಗ್​ ಸಂದರ್ಭದಲ್ಲಿಯೇ ಈ ಫೋಟೋಗಳು ಲೀಕ್​ ಆಗಿರುವುದರಿಂದ ಅಭಿಮಾನಿಗಳಿಗೆ ಮತ್ತು ಚಿತ್ರತಂಡಕ್ಕೆ ಬೇಸರ ಮೂಡಿಸಿದೆ.

ಇದನ್ನೂ ಓದಿ: ಶಾರುಖ್​ ನಟನೆಯ ‘ಪಠಾಣ್​’ ರಿಲೀಸ್ ​ಡೇಟ್​ ಬಗ್ಗೆ ಹೊಸ ಅಪ್​ಡೇಟ್​ ನೀಡಿದ ದೀಪಿಕಾ ಪಡುಕೋಣೆ

ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ