AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಆರ್ಯನ್​ ಬಗ್ಗೆ ಚಿಂತಿಸಿ ಶಾರುಖ್​ ಖಾನ್​ ಹೀಗಾದರೆ? ಈ ಫೋಟೋದ ಅಸಲಿಯತ್ತು ಇಲ್ಲಿದೆ

ಶಾರುಖ್​ ಖಾನ್​ಗೆ ಸರಿಯಾಗಿ ಊಟ ಸೇರುತ್ತಿಲ್ಲ. ಅವರು ರಾತ್ರಿ ನಿದ್ದೆ ಮಾಡುತ್ತಿಲ್ಲ ಎಂಬಿತ್ಯಾದಿ ಸುದ್ದಿಗಳು ಇತ್ತೀಚೆಗೆ ಹರಿದಾಡಿದ್ದವು. ಇದಾದ ಬೆನ್ನಲ್ಲೇ ಶಾರುಖ್​ ಅವರ ಫೋಟೋ ಒಂದು ವೈರಲ್​ ಆಗುತ್ತಿದೆ.

ಮಗ ಆರ್ಯನ್​ ಬಗ್ಗೆ ಚಿಂತಿಸಿ ಶಾರುಖ್​ ಖಾನ್​ ಹೀಗಾದರೆ? ಈ ಫೋಟೋದ ಅಸಲಿಯತ್ತು ಇಲ್ಲಿದೆ
ಶಾರುಖ್​ ಖಾನ್​
TV9 Web
| Edited By: |

Updated on: Oct 24, 2021 | 1:37 PM

Share

ಶಾರುಖ್​ ಖಾನ್​ ಅಕ್ಷರಶಃ ಚಿಂತೆಗೆ ಒಳಗಾಗಿದ್ದಾರೆ. ಮಗ ಆರ್ಯನ್​ ಖಾನ್ ಡ್ರಗ್​ ಕೇಸ್​ನಲ್ಲಿ​ ಬಂಧನಕ್ಕೊಳಗಾದ ನಂತರ ಅವರು ಯಾವ ಕೆಲಸದ ಮೇಲೂ ಗಮನ ಕೊಡೋಕೆ ಸಾಧ್ಯವಾಗುತ್ತಿಲ್ಲ. ಜಿಮ್​ಗೆ ಅವರು ಸರಿಯಾಗಿ ತೆರಳುತ್ತಿಲ್ಲ. ಸಿನಿಮಾ ಕೆಲಸಗಳಲ್ಲಿ ಭಾಗಿಯಾಗುವುದಂತೂ ಸದ್ಯದ ಮಟ್ಟಿಗೆ ದೂರದ ಮಾತಾಗಿದೆ. ನವೆಂಬರ್​ 2ರಂದು ಶಾರುಖ್​ ಜನ್ಮದಿನ. ಅದನ್ನು ಕೂಡ ಅವರು ಆಚರಿಸಿಕೊಳ್ಳುತ್ತಿಲ್ಲ. ಆರ್ಯನ್​ ಅವರನ್ನು ಜೈಲಿನಿಂದ ಹೊರಗೆ ತರಬೇಕು ಎನ್ನುವ ಪ್ರಯತ್ನದಲ್ಲಿ ಅವರಿದ್ದಾರೆ. ಈ ಮಧ್ಯೆ ಶಾರುಖ್​ ಅವರ ಫೋಟೋ ಒಂದು ವೈರಲ್​ ಆಗಿದೆ. ಈ ಫೋಟೋ ನೋಡಿದ ಅಭಿಮಾನಿಳು ನಿಜಕ್ಕೂ ಅಚ್ಚರಿಗೊಂಡಿದ್ದಾರೆ.

ಶಾರುಖ್​ ಖಾನ್​ಗೆ ಸರಿಯಾಗಿ ಊಟ ಸೇರುತ್ತಿಲ್ಲ. ಅವರು ರಾತ್ರಿ ನಿದ್ದೆ ಮಾಡುತ್ತಿಲ್ಲ ಎಂಬಿತ್ಯಾದಿ ಸುದ್ದಿಗಳು ಇತ್ತೀಚೆಗೆ ಹರಿದಾಡಿದ್ದವು. ಇದಾದ ಬೆನ್ನಲ್ಲೇ ಶಾರುಖ್​ ಅವರ ಫೋಟೋ ಒಂದು ವೈರಲ್​ ಆಗುತ್ತಿದೆ. ಶಾರುಖ್​ ಗಡ್ಡ ಬಿಳಿಯಾಗಿದೆ. ಕಣ್ಣ ಕೆಳಗೆ ಸಂಪೂರ್ಣವಾಗಿ ಕಪ್ಪಾಗಿದೆ. ಕಣ್ಣಂತೂ ಹಲವು ದಿನ ನಿದ್ದೆ ಮಾಡದೇ ಇದ್ದಾಗ ಆಗುವಷ್ಟು ಕೆಂಪಾಗಿದೆ. ಮಗನ ಬಗ್ಗೆ ಶಾರುಖ್ ಚಿಂತೆಗೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇಷ್ಟು ಕೆಟ್ಟ ಪರಿಸ್ಥಿತಿಗೆ ತಲುಪಿದ್ದಾರೆ ಎನ್ನುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಇದರ ಅಸಲಿಯತ್ತೇ ಬೇರೆ.

ಅಸಲಿಗೆ ಈ ಫೋಟೋ ಇತ್ತೀಚಿಗಿನದ್ದು ಅಲ್ಲವೇ ಅಲ್ಲ. ಇದು 2017ರ ಫೋಟೋ. ಮಾರ್ಚ್​ 15 ಆಲಿಯಾ ಹುಟ್ಟಿದ ದಿನ. ಆ ವರ್ಷ ಆಲಿಯಾ ಅದ್ದೂರಿಯಾಗಿ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದರು. ಮನೆಗೆ ಸೆಲೆಬ್ರೆಟಿಗಳಿಗೆ ಆಹ್ವಾನ ನೀಡಲಾಗಿತ್ತು. ಆ ವೇಳೆ ಶಾರುಖ್​ ಕೂಡ ಆಗಮಿಸಿದ್ದರು. ಆಗ ತೆಗೆದ ಫೋಟೋ ಇದಾಗಿದೆ. ಇದು ಈಗ ವೈರಲ್​ ಆಗಿದೆ. ಅಂದು ಮತ್ತೊಂದು ಘಟನೆಯೂ ನಡೆದಿತ್ತು. ಶಾರುಖ್​ ಖಾನ್​ ಕಾರಿನ ಚಕ್ರಕ್ಕೆ ಸಿಲುಕಿ ಫೋಟೋಗ್ರಾಫರ್​ ಒಬ್ಬನ ಕಾಲಿಗೆ ಏಟಾಗಿತ್ತು. ಈ ವೇಳೆ ಶಾರುಖ್​ ಖಾನ್​ ಸಹಾಯಕ್ಕೆ ಧಾವಿಸಿದ್ದರು. ಈ ಮೂಲಕ ಅವರು ಮಾನವೀಯತೆ ಮೆರೆದಿದ್ದರು.

ಇದನ್ನೂ ಓದಿ: ಆರ್ಯನ್​ ಭೇಟಿ ಮಾಡಿದ  ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ