Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ಬಗ್ಗೆ ಶಾರುಖ್​ ಪ್ರೀತಿಯ ಮಾತು; ವೈರಲ್​ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದು ಏನು?

Shah Rukh Khan Dubai: ‘ದುಬೈನಲ್ಲಿ ಪ್ರತಿ ಅನುಭವ ಕೂಡ ವಿಶೇಷ ನೆನಪಾಗಿ ಉಳಿದುಕೊಳ್ಳುತ್ತದೆ. ನನ್ನ ಜೊತೆ ಈ ನಗರವನ್ನು ನೋಡಿ’ ಎಂದು ಶಾರುಖ್​ ಖಾನ್​ ಕ್ಯಾಪ್ಷನ್​ ನೀಡಿದ್ದಾರೆ.

ದುಬೈ ಬಗ್ಗೆ ಶಾರುಖ್​ ಪ್ರೀತಿಯ ಮಾತು; ವೈರಲ್​ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದು ಏನು?
ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Mar 09, 2022 | 1:38 PM

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. 1990ರ ದಶಕದಿಂದ ಈವರೆಗೆ ಅನೇಕ ಬಗೆಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ ಅವರನ್ನು ವಿದೇಶದಲ್ಲಿ ಕೋಟ್ಯಂತರ ಜನರು ಇಷ್ಟಪಡುತ್ತಾರೆ. ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ (Dubai) ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಆ ಕಾರಣದಿಂದ ಅವರನ್ನು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಭಾಗವಾಗಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋವನ್ನು ಶಾರುಖ್​ ಖಾನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಸದ್ಯ ಈ ವಿಡಿಯೋ (Shah Rukh Khan Dubai video) ವೈರಲ್​ ಆಗಿದೆ. ಆ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಶಾರುಖ್​ ಟ್ರೆಂಡ್​​ ಆಗಿದ್ದಾರೆ.

ದುಬೈಗೆ ಒಮ್ಮೆಯಾದರೂ ಹೋಗಬೇಕು ಎಂಬುದು ಅನೇಕರ ಆಸೆ. ಅಲ್ಲಿನ ಆಕರ್ಷಕ ಕಟ್ಟಡಗಳನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಶೂಟಿಂಗ್​ ಮುಗಿಸಿದ ಬಳಿಕ ಸ್ವತಃ ಶಾರುಖ್​ ಖಾನ್​ ಅವರು ಅಲ್ಲಿನ ಸ್ಥಳಗನ್ನು ನೋಡಿ ಎಂಜಾಯ್​ ಮಾಡುತ್ತಿರುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ. ‘ದುಬೈನಲ್ಲಿ ಪ್ರತಿ ಅನುಭವ ಕೂಡ ವಿಶೇಷ ನೆನಪಾಗಿ ಉಳಿದುಕೊಳ್ಳುತ್ತದೆ. ನನ್ನ ಜೊತೆ ಈ ನಗರವನ್ನು ನೋಡಿ’ ಎಂದು ಶಾರುಖ್​ ಖಾನ್​ ಅವರು ಈ ವಿಡಿಯೋಗೆ ಕ್ಯಾಪ್ಷನ್​ ನೀಡಿದ್ದಾರೆ.

ಇದೊಂದು ಜಾಹೀರಾತು ಆಗಿದ್ದರೂ ಕೂಡ ಅಭಿಮಾನಿಗಳ ಪಾಲಿಗೆ ಸರ್ಪ್ರೈಸ್​ ಆಗಿದೆ. ಯಾಕೆಂದರೆ ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಲಾಕ್​ ಡೌನ್​, ಮಗನ ಡ್ರಗ್ಸ್​ ಪಾರ್ಟಿ ವಿವಾದ ಸೇರಿದಂತೆ ಅನೇಕ ಅಡೆತಡೆಗಳ ಕಾರಣದಿಂದ ಅಭಿಮಾನಿಗಳ ಎದುರು ಬರಲು ಶಾರುಖ್​ಗೆ ಸಾಧ್ಯವಾಗಿರಲಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

View this post on Instagram

A post shared by Shah Rukh Khan (@iamsrk)

ಇದು ಜಾಹೀರಾತು ಆಗಿದ್ದರೂ ಕೂಡ ಒಂದು ಹಾಡಿನ ರೀತಿಯಲ್ಲಿ ಮೂಡಿಬಂದಿದೆ. ಇದರ ಅವಧಿ ಮೂರು ನಿಮಿಷ ಇದೆ. ಹೊಸ ಗೆಟಪ್​ನಲ್ಲಿ ಶಾರುಖ್​ ಖಾನ್​ ಕಾಣಿಸಿಕೊಂಡಿದ್ದಾರೆ. ಹಾಡಿಗೆ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡುವ ಮೂಲಕ ಅಭಿಮಾನಿಗಳನ್ನು ಅವರು ಮನರಂಜಿಸಿದ್ದಾರೆ. ಅವರನ್ನು ಕಂಡು ಖುಷಿಪಟ್ಟಿರುವ ನೆಟ್ಟಿಗರು ‘ಕಿಂಗ್​ ಈಸ್​ ಬ್ಯಾಕ್​’ ಎಂದು ಕಮೆಂಟ್​ ಮಾಡುತ್ತಿದ್ದಾರೆ. ಶಾರುಖ್​ ಖಾನ್​ ಅವರು ಇತ್ತೀಚಿನ ವರ್ಷಗಳಲ್ಲಿ ಹಲವು ಸೋಲುಗಳನ್ನು ಕಂಡಿದ್ದಾರೆ. ಹಾಗಾಗಿ ಸಿನಿಮಾಗಳ ಆಯ್ಕೆಯಲ್ಲಿ ಈಗ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಸದ್ಯ ಅವರು ‘ಪಠಾಣ್​’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕೆಲವೇ ದಿನಗಳ ಹಿಂದೆ ‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ಕಾಣಿಸಿಕೊಂಡಿದ್ದಾರೆ. ಶಾರುಖ್​ ಖಾನ್​ ಅವರ ಹಿನ್ನೆಲೆ ಧ್ವನಿ ಕೇಳಿಸಿದೆ. ಆದರೆ ಲುಕ್​ ಬಹಿರಂಗ ಆಗಿಲ್ಲ. 2023ರ ಜ.25ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಇದನ್ನೂ ಓದಿ:

ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಶಾರುಖ್​ ಫೋಟೋ ಸಾಕ್ಷಿ; ಆದರೆ ಅವರ​ ಪಕ್ಕ ಇರೋದು ಗೌರಿ ಖಾನ್​ ಅಲ್ಲ

ತಾವೇ ನಟಿಸಿದ ಹಲವು ಹಿಟ್​ ಚಿತ್ರಗಳನ್ನು ನೋಡಿಯೇ ಇಲ್ಲ ಶಾರುಖ್​ ಖಾನ್​

Published On - 1:23 pm, Wed, 9 March 22

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ