AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ

ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಶಾರುಖ್​ ಖಾನ್​ ಅವರ ಮಗಳು ಸುಹಾನಾ ಖಾನ್​ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆ ಶಾರುಖ್ ಮಾಡಲಿರುವ ಸಿನಿಮಾ 2026ರಲ್ಲಿ ರಿಲೀಸ್ ಆಗಲಿದೆ.

ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ
ಶಾರುಖ್-ಸುಹಾನಾ
ರಾಜೇಶ್ ದುಗ್ಗುಮನೆ
|

Updated on: Sep 05, 2024 | 8:04 AM

Share

ಶಾರುಖ್ ಖಾನ್ ಅವರು 2018ರಲ್ಲಿ ‘ಜೀರೋ’ ಸಿನಿಮಾ ಮಾಡಿದ ಬಳಿಕ ಅವರ ನಟನೆಯ ಸಿನಿಮಾ ರಿಲೀಸ್ ಆಗಿದ್ದು 2023ರಲ್ಲಿ. ಆ ವರ್ಷ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳು ರಿಲೀಸ್ ಆದವು. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿತ್ತು. ಆದರೆ, ಈಗ ಅಭಿಮಾನಿಗಳಿಗೆ ಬೇಸರ ಆಗುವಂಥ ಸುದ್ದಿ ಒಂದು ಸಿಕ್ಕಿದೆ. ಶಾರುಖ್ ಖಾನ್ ಅವರ ಮುಂದಿನ ಸಿನಿಮಾ ಇನ್ನು ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಬೇಸರಗೊಂಡಿದ್ದಾರೆ.

ಶಾರುಖ್ ಖಾನ್ ಅವರು ಮಗಳು ಸುಹಾನಾ ಖಾನ್ ಜೊತೆ ಸಿನಿಮಾ ಮಾಡುತ್ತಿದ್ದು, ಇದಕ್ಕೆ ‘ಕಿಂಗ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಅಭಿಷೇಕ್ ಬಚ್ಚನ್ ಅವುರ ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಜನವರಿ 2025ರಲ್ಲಿ ಆರಂಭ ಆಗಲಿದೆ. ಸಿನಿಮಾ ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ.

ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರದ ಶೂಟಿಂಗ್ ಯುರೋಪ್​ನಲ್ಲಿ ನಡೆಯಲಿದೆ. ಅಲ್ಲಿನ ಜನವರಿ ವಾತಾವರಣದಲ್ಲೇ ಶೂಟ್ ಮಾಡುವ ಅಗತ್ಯತೆ ಇದೆ. ಈ ಕಾರಣದಿಂದಲೇ ನಿರ್ದೇಶಕ ಸುಜಯ್ ಘೋಷ್ ಅವರು ಜನವರಿಯಲ್ಲಿ ಸಿನಿಮಾ ಶೂಟ್ ಆರಂಭಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ:‘ಚಾರ್ ಬೋಟಲ್ ವೋಡ್ಕಾ‘ ಹಾಡು ಬರೆದಾಗ ಹನಿ ಸಿಂಗ್‌ಗೆ ಎಚ್ಚರಿಕೆ ನೀಡಿದ್ದ ಶಾರುಖ್ ಖಾನ್ 

ಶಾರುಖ್ ಖಾನ್​ಗೆ ಜನವರಿ ಲಕ್ಕಿ. 2023ರ ಜನವರಿಯಲ್ಲಿ ರಿಲೀಸ್ ಆದ ‘ಪಠಾಣ್’ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಹೀಗಾಗಿ, 2026ರ ಜನವರಿಯಲ್ಲಿ ‘ಕಿಂಗ್’ ಚಿತ್ರವನ್ನು ರಿಲೀಸ್ ಮಾಡುವ ಆಲೋಚನೆ ಶಾರುಖ್ ಖಾನ್​ಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅಭಿಷೇಕ್ ಅವರನ್ನು ವಿಲನ್ ಪಾತ್ರದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ