AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ

ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಶಾರುಖ್​ ಖಾನ್​ ಅವರ ಮಗಳು ಸುಹಾನಾ ಖಾನ್​ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆ ಶಾರುಖ್ ಮಾಡಲಿರುವ ಸಿನಿಮಾ 2026ರಲ್ಲಿ ರಿಲೀಸ್ ಆಗಲಿದೆ.

ಶಾರುಖ್ ಮುಂದಿನ ಸಿನಿಮಾಕ್ಕಾಗಿ ಕಾಯಬೇಕು ಇನ್ನೂ ಎರಡು ವರ್ಷ; ಫ್ಯಾನ್ಸ್​ಗೆ ನಿರಾಸೆ
ಶಾರುಖ್-ಸುಹಾನಾ
Follow us
ರಾಜೇಶ್ ದುಗ್ಗುಮನೆ
|

Updated on: Sep 05, 2024 | 8:04 AM

ಶಾರುಖ್ ಖಾನ್ ಅವರು 2018ರಲ್ಲಿ ‘ಜೀರೋ’ ಸಿನಿಮಾ ಮಾಡಿದ ಬಳಿಕ ಅವರ ನಟನೆಯ ಸಿನಿಮಾ ರಿಲೀಸ್ ಆಗಿದ್ದು 2023ರಲ್ಲಿ. ಆ ವರ್ಷ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳು ರಿಲೀಸ್ ಆದವು. ಈ ವಿಚಾರ ಫ್ಯಾನ್ಸ್​ಗೆ ಖುಷಿ ನೀಡಿತ್ತು. ಆದರೆ, ಈಗ ಅಭಿಮಾನಿಗಳಿಗೆ ಬೇಸರ ಆಗುವಂಥ ಸುದ್ದಿ ಒಂದು ಸಿಕ್ಕಿದೆ. ಶಾರುಖ್ ಖಾನ್ ಅವರ ಮುಂದಿನ ಸಿನಿಮಾ ಇನ್ನು ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಬೇಸರಗೊಂಡಿದ್ದಾರೆ.

ಶಾರುಖ್ ಖಾನ್ ಅವರು ಮಗಳು ಸುಹಾನಾ ಖಾನ್ ಜೊತೆ ಸಿನಿಮಾ ಮಾಡುತ್ತಿದ್ದು, ಇದಕ್ಕೆ ‘ಕಿಂಗ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಅಭಿಷೇಕ್ ಬಚ್ಚನ್ ಅವುರ ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಜನವರಿ 2025ರಲ್ಲಿ ಆರಂಭ ಆಗಲಿದೆ. ಸಿನಿಮಾ ರಿಲೀಸ್ ಆಗೋದು 2026ರಲ್ಲಿ ಎಂದು ವರದಿ ಆಗಿದೆ.

ಸದ್ಯ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರದ ಶೂಟಿಂಗ್ ಯುರೋಪ್​ನಲ್ಲಿ ನಡೆಯಲಿದೆ. ಅಲ್ಲಿನ ಜನವರಿ ವಾತಾವರಣದಲ್ಲೇ ಶೂಟ್ ಮಾಡುವ ಅಗತ್ಯತೆ ಇದೆ. ಈ ಕಾರಣದಿಂದಲೇ ನಿರ್ದೇಶಕ ಸುಜಯ್ ಘೋಷ್ ಅವರು ಜನವರಿಯಲ್ಲಿ ಸಿನಿಮಾ ಶೂಟ್ ಆರಂಭಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ:‘ಚಾರ್ ಬೋಟಲ್ ವೋಡ್ಕಾ‘ ಹಾಡು ಬರೆದಾಗ ಹನಿ ಸಿಂಗ್‌ಗೆ ಎಚ್ಚರಿಕೆ ನೀಡಿದ್ದ ಶಾರುಖ್ ಖಾನ್ 

ಶಾರುಖ್ ಖಾನ್​ಗೆ ಜನವರಿ ಲಕ್ಕಿ. 2023ರ ಜನವರಿಯಲ್ಲಿ ರಿಲೀಸ್ ಆದ ‘ಪಠಾಣ್’ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಹೀಗಾಗಿ, 2026ರ ಜನವರಿಯಲ್ಲಿ ‘ಕಿಂಗ್’ ಚಿತ್ರವನ್ನು ರಿಲೀಸ್ ಮಾಡುವ ಆಲೋಚನೆ ಶಾರುಖ್ ಖಾನ್​ಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅಭಿಷೇಕ್ ಅವರನ್ನು ವಿಲನ್ ಪಾತ್ರದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ