AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3' ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 17, 2023 | 12:43 PM

Share

ಶಾರುಖ್ ಖಾನ್ ನಟನೆಯ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶಾರುಖ್ ಖಾತಿ ಹೆಚ್ಚಿತು. ಈ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಫರ್ಹಾನ್ ಅಖ್ತರ್ (Farhan Akhtar). ಈಗ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ‘ಡಾನ್ 3’ (Don 3)ಸಿನಿಮಾದಿಂದ ಶಾರುಖ್ ಖಾನ್ ಹೊರನಡೆದಿದ್ದಾರೆ ಎಂದು ವರದಿ ಆಗಿದೆ. ಇದಕ್ಕೆ ಕಾರಣ ಏನು ಎಂಬುದಕ್ಕೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಫರ್ಹಾನ್ ಅಖ್ತರ್ ಹಾಗೂ ರಿತೇಶ್ ಸಿದ್ವಾನಿ ಸೇರಿ ‘ಎಕ್ಸೆಲ್ ಎಂಟರ್​ಟೇನ್​ಮೆಂಟ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ರಿತೇಶ್ ಅವರು ‘ಡಾನ್ 3’ ಬಗ್ಗೆ ಅಪ್​ಡೇಟ್ ನೀಡಿದ್ದರು. ಫರ್ಹಾನ್ ಅವರು ಸದ್ಯ ‘ಡಾನ್ 3’ ಕೆಲಸಗಳಲ್ಲಿ ಬ್ಯುಸಿ ಇರುವ ವಿಚಾರವನ್ನು ಅವರು ಖಚಿತಪಡಿಸಿದ್ದರು.

ಇದನ್ನೂ ಓದಿ: ಅಂದುಕೊಂಡಂತೆ ನಡೆಯಲೇ ಇಲ್ಲ ಶಾರುಖ್ ಖಾನ್ ಪ್ಲಾನ್; ‘ಜವಾನ್​’ಗೆ ಹಿನ್ನಡೆ

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3′ ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ. ‘ಡಾನ್ 3’ ಕಥೆ ಸೂಕ್ತ ಅಲ್ಲ ಎಂದು ಅವರಿಗೆ ಅನಿಸಿದೆ. ಈ ಕಥೆ ಗಿಮಿಕ್ ಎನ್ನುವ ಅಭಿಪ್ರಾಯ ಮೂಡಿದೆ. ಈ ಕಾರಣಕ್ಕೆ ಅವರು ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ವರದಿ ಪ್ರಕಾರ ಸಂಭಾವನೆ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮ್ಯಾನೇಜರ್ ಪೂಜಾ ಆಗರ್ಭ ಶ್ರೀಮಂತೆ; ವರ್ಷಕ್ಕೆ ಸಿಗೋ ಸಂಭಾವನೆ ಇಷ್ಟೊಂದಾ?

‘ಪಠಾಣ್’ ಗೆದ್ದ ಬಳಿಕ ಶಾರುಖ್ ಖಾನ್ ಖ್ಯಾತಿ ಹೆಚ್ಚಿದೆ. ಈ ಸಿನಿಮಾದಿಂದ ಬಂದ ಲಾಭದಲ್ಲಿ ಅವರು ಪರ್ಸಂಟೇಜ್ ಪಡೆದಿದ್ದರು. ಇದರಿಂದ ಅವರಿಗೆ ದೊಡ್ಡ ಲಾಭ ಆಗಿದೆ. ‘ಡಾನ್ 3’ ಚಿತ್ರಕ್ಕೂ ಅವರು ಇದೇ ರೀತಿಯ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ, ಇದಕ್ಕೆ ಫರ್ಹಾನ್ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಅವರು ‘ಡಾನ್ 3’ ಸಿನಿಮಾ ಮಾಡಲು ನಿರಾಕರಿಸಿದ್ದಾರೆ ಎಂಬ ವರದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್