AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3' ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?
ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: May 17, 2023 | 12:43 PM

ಶಾರುಖ್ ಖಾನ್ ನಟನೆಯ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶಾರುಖ್ ಖಾತಿ ಹೆಚ್ಚಿತು. ಈ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಫರ್ಹಾನ್ ಅಖ್ತರ್ (Farhan Akhtar). ಈಗ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ‘ಡಾನ್ 3’ (Don 3)ಸಿನಿಮಾದಿಂದ ಶಾರುಖ್ ಖಾನ್ ಹೊರನಡೆದಿದ್ದಾರೆ ಎಂದು ವರದಿ ಆಗಿದೆ. ಇದಕ್ಕೆ ಕಾರಣ ಏನು ಎಂಬುದಕ್ಕೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಫರ್ಹಾನ್ ಅಖ್ತರ್ ಹಾಗೂ ರಿತೇಶ್ ಸಿದ್ವಾನಿ ಸೇರಿ ‘ಎಕ್ಸೆಲ್ ಎಂಟರ್​ಟೇನ್​ಮೆಂಟ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ರಿತೇಶ್ ಅವರು ‘ಡಾನ್ 3’ ಬಗ್ಗೆ ಅಪ್​ಡೇಟ್ ನೀಡಿದ್ದರು. ಫರ್ಹಾನ್ ಅವರು ಸದ್ಯ ‘ಡಾನ್ 3’ ಕೆಲಸಗಳಲ್ಲಿ ಬ್ಯುಸಿ ಇರುವ ವಿಚಾರವನ್ನು ಅವರು ಖಚಿತಪಡಿಸಿದ್ದರು.

ಇದನ್ನೂ ಓದಿ: ಅಂದುಕೊಂಡಂತೆ ನಡೆಯಲೇ ಇಲ್ಲ ಶಾರುಖ್ ಖಾನ್ ಪ್ಲಾನ್; ‘ಜವಾನ್​’ಗೆ ಹಿನ್ನಡೆ

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3′ ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ. ‘ಡಾನ್ 3’ ಕಥೆ ಸೂಕ್ತ ಅಲ್ಲ ಎಂದು ಅವರಿಗೆ ಅನಿಸಿದೆ. ಈ ಕಥೆ ಗಿಮಿಕ್ ಎನ್ನುವ ಅಭಿಪ್ರಾಯ ಮೂಡಿದೆ. ಈ ಕಾರಣಕ್ಕೆ ಅವರು ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ವರದಿ ಪ್ರಕಾರ ಸಂಭಾವನೆ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮ್ಯಾನೇಜರ್ ಪೂಜಾ ಆಗರ್ಭ ಶ್ರೀಮಂತೆ; ವರ್ಷಕ್ಕೆ ಸಿಗೋ ಸಂಭಾವನೆ ಇಷ್ಟೊಂದಾ?

‘ಪಠಾಣ್’ ಗೆದ್ದ ಬಳಿಕ ಶಾರುಖ್ ಖಾನ್ ಖ್ಯಾತಿ ಹೆಚ್ಚಿದೆ. ಈ ಸಿನಿಮಾದಿಂದ ಬಂದ ಲಾಭದಲ್ಲಿ ಅವರು ಪರ್ಸಂಟೇಜ್ ಪಡೆದಿದ್ದರು. ಇದರಿಂದ ಅವರಿಗೆ ದೊಡ್ಡ ಲಾಭ ಆಗಿದೆ. ‘ಡಾನ್ 3’ ಚಿತ್ರಕ್ಕೂ ಅವರು ಇದೇ ರೀತಿಯ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ, ಇದಕ್ಕೆ ಫರ್ಹಾನ್ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಅವರು ‘ಡಾನ್ 3’ ಸಿನಿಮಾ ಮಾಡಲು ನಿರಾಕರಿಸಿದ್ದಾರೆ ಎಂಬ ವರದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ