AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3' ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ.

‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 17, 2023 | 12:43 PM

Share

ಶಾರುಖ್ ಖಾನ್ ನಟನೆಯ ‘ಡಾನ್’ ಹಾಗೂ ‘ಡಾನ್ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶಾರುಖ್ ಖಾತಿ ಹೆಚ್ಚಿತು. ಈ ಚಿತ್ರಗಳನ್ನು ನಿರ್ದೇಶನ ಮಾಡಿದ್ದು ಫರ್ಹಾನ್ ಅಖ್ತರ್ (Farhan Akhtar). ಈಗ ಅವರು ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಈ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ‘ಡಾನ್ 3’ (Don 3)ಸಿನಿಮಾದಿಂದ ಶಾರುಖ್ ಖಾನ್ ಹೊರನಡೆದಿದ್ದಾರೆ ಎಂದು ವರದಿ ಆಗಿದೆ. ಇದಕ್ಕೆ ಕಾರಣ ಏನು ಎಂಬುದಕ್ಕೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಫರ್ಹಾನ್ ಅಖ್ತರ್ ಹಾಗೂ ರಿತೇಶ್ ಸಿದ್ವಾನಿ ಸೇರಿ ‘ಎಕ್ಸೆಲ್ ಎಂಟರ್​ಟೇನ್​ಮೆಂಟ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಇತ್ತೀಚೆಗೆ ಮಾತನಾಡಿದ್ದ ರಿತೇಶ್ ಅವರು ‘ಡಾನ್ 3’ ಬಗ್ಗೆ ಅಪ್​ಡೇಟ್ ನೀಡಿದ್ದರು. ಫರ್ಹಾನ್ ಅವರು ಸದ್ಯ ‘ಡಾನ್ 3’ ಕೆಲಸಗಳಲ್ಲಿ ಬ್ಯುಸಿ ಇರುವ ವಿಚಾರವನ್ನು ಅವರು ಖಚಿತಪಡಿಸಿದ್ದರು.

ಇದನ್ನೂ ಓದಿ: ಅಂದುಕೊಂಡಂತೆ ನಡೆಯಲೇ ಇಲ್ಲ ಶಾರುಖ್ ಖಾನ್ ಪ್ಲಾನ್; ‘ಜವಾನ್​’ಗೆ ಹಿನ್ನಡೆ

ಶಾರುಖ್ ಖಾನ್ ‘ಡಾನ್ 3’ನ ಭಾಗವಾಗುತ್ತಿಲ್ಲ. ಫರ್ಹಾನ್ ಮತ್ತು ರಿತೇಶ್ ಅವರು ‘ಡಾನ್ 3′ ಕುರಿತು ಅನೇಕ ಬಾರಿ ಚರ್ಚೆ ನಡೆಸಿದ್ದಾರೆ. ಆದರೆ ಈ ಫ್ರ್ಯಾಂಚೈಸ್‌ಗೆ ಹಿಂದಿರುಗಲು ಶಾರುಖ್ ಉತ್ಸಾಹ ತೋರಿಲ್ಲ. ‘ಡಾನ್ 3’ ಕಥೆ ಸೂಕ್ತ ಅಲ್ಲ ಎಂದು ಅವರಿಗೆ ಅನಿಸಿದೆ. ಈ ಕಥೆ ಗಿಮಿಕ್ ಎನ್ನುವ ಅಭಿಪ್ರಾಯ ಮೂಡಿದೆ. ಈ ಕಾರಣಕ್ಕೆ ಅವರು ಹೊರ ನಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ವರದಿ ಪ್ರಕಾರ ಸಂಭಾವನೆ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮ್ಯಾನೇಜರ್ ಪೂಜಾ ಆಗರ್ಭ ಶ್ರೀಮಂತೆ; ವರ್ಷಕ್ಕೆ ಸಿಗೋ ಸಂಭಾವನೆ ಇಷ್ಟೊಂದಾ?

‘ಪಠಾಣ್’ ಗೆದ್ದ ಬಳಿಕ ಶಾರುಖ್ ಖಾನ್ ಖ್ಯಾತಿ ಹೆಚ್ಚಿದೆ. ಈ ಸಿನಿಮಾದಿಂದ ಬಂದ ಲಾಭದಲ್ಲಿ ಅವರು ಪರ್ಸಂಟೇಜ್ ಪಡೆದಿದ್ದರು. ಇದರಿಂದ ಅವರಿಗೆ ದೊಡ್ಡ ಲಾಭ ಆಗಿದೆ. ‘ಡಾನ್ 3’ ಚಿತ್ರಕ್ಕೂ ಅವರು ಇದೇ ರೀತಿಯ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ, ಇದಕ್ಕೆ ಫರ್ಹಾನ್ ಒಪ್ಪಿಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಅವರು ‘ಡಾನ್ 3’ ಸಿನಿಮಾ ಮಾಡಲು ನಿರಾಕರಿಸಿದ್ದಾರೆ ಎಂಬ ವರದಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್