AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?

‘ಪಠಾಣ್​’ ಸಿನಿಮಾ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ. ಈ ಕಾರಣಕ್ಕೆ ಟ್ವಿಟರ್​ ಟ್ರೆಂಡ್​ನಲ್ಲಿ ‘ಪಠಾಣ್​’, ಶಾರುಖ್​ ಖಾನ್​, ಚಿತ್ರದ ನಾಯಕಿ ದೀಪಿಕಾ ಹೆಸರು ರಾರಾಜಿಸಿದೆ.

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?
ಶಾರುಖ್​ ಖಾನ್​
TV9 Web
| Edited By: |

Updated on: Aug 28, 2021 | 4:58 PM

Share

‘ಜೀರೋ’ ಸೋಲಿನ ನಂತರದಲ್ಲಿ ಒಂದು ಬ್ರೇಕ್​ ತೆಗೆದುಕೊಂಡಿದ್ದ ಶಾರುಖ್​ ಖಾನ್​ ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಪಠಾಣ್​’ ಸಿನಿಮಾ ಕೈಗೆತ್ತಿಕೊಂಡಿರುವ ಅವರು, ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮೊದಲು ದುಬೈನಲ್ಲಿ ಶೂಟ್​ ಮಾಡಿದ್ದ ಚಿತ್ರತಂಡ​ ಈಗ ಯುರೋಪ್​ ದೇಶಗಳಿಗೆ ತೆರಳೋಕೆ ರೆಡಿ ಆಗಿದೆ. ಬೇರೆಬೇರೆ ದೇಶಗಳಲ್ಲಿ ಸಿನಿಮಾ ಶೂಟ್​ ನಡೆಯುತ್ತಿರುವ ವಿಚಾರ ಅಭಿಮಾನಿಗಳಿಗೆ ಎಗ್ಸೈಟ್​ಮೆಂಟ್​ ನೀಡಿದೆ.

‘ಪಠಾಣ್​’ ಸಿನಿಮಾ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ. ಈ ಕಾರಣಕ್ಕೆ ಟ್ವಿಟರ್​ ಟ್ರೆಂಡ್​ನಲ್ಲಿ ‘ಪಠಾಣ್​’, ಶಾರುಖ್​ ಖಾನ್​, ಚಿತ್ರದ ನಾಯಕಿ ದೀಪಿಕಾ ಹೆಸರು ರಾರಾಜಿಸಿದೆ. ಮುಂಬೈನ ಸ್ಟುಡಿಯೋದಲ್ಲಿ ಕೆಲ ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಆ ಬಳಿಕ ಚಿತ್ರತಂಡ ಸ್ಪೇನ್​ ಸೇರಿ ಯುರೋಪ್​​ನ ಹಲವು​ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿದೆ.

ಸದ್ಯ ಚಿತ್ರತಂಡ ಯುರೋಪ್​ಗೆ ಹಾರೋಕೆ ದಿನಾಂಕ ಫಿಕ್ಸ್​ ಮಾಡಿಲ್ಲ. ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಮೂರನೇ ಅಲೆ ಭೀತಿ ಕಾಡುತ್ತಿದೆ. ಅದಕ್ಕೂ ಮೊದಲೇ ದೇಶಬಿಡುವ ಆಲೋಚನೆಯಲ್ಲಿ ಚಿತ್ರತಂಡ ಇದೆ. ಸದ್ಯ, ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನು, ಅಪ್ಘಾನಿಸ್ತಾನದಲ್ಲೂ ಚಿತ್ರತಂಡ ಶೂಟಿಂಗ್​ ನಡೆಸೋಕೆ ಪ್ಲ್ಯಾನ್​ ಮಾಡಿತ್ತು ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಈ ಮಾತನ್ನು ಚಿತ್ರತಂಡ ಅಲ್ಲಗಳೆದಿದೆ. ‘ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡುವ ಯಾವುದೇ ಆಲೋಚನೆ ಇರಲಿಲ್ಲ. ಹಬ್ಬಿರುವ ಸುದ್ದಿ ಸುಳ್ಳು’ ಎನ್ನುವ ಸ್ಪಷ್ಟನೆ ಚಿತ್ರತಂಡದ ಕಡೆಯಿಂದ ಸಿಕ್ಕಿದೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಜಾನ್​ ಅಬ್ರಹಾಂ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ  ಶಾರುಖ್​ ಅವರದ್ದು ನೆಗೆಟಿವ್​ ಪಾತ್ರ ಎನ್ನುವ ಸುದ್ದಿ ಇದೆ. 2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈ ಕಾರಣಕ್ಕೆ ‘ಪಠಾಣ್’​ ಸಿನಿಮಾ ಬಹಳ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು