ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?

‘ಪಠಾಣ್​’ ಸಿನಿಮಾ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ. ಈ ಕಾರಣಕ್ಕೆ ಟ್ವಿಟರ್​ ಟ್ರೆಂಡ್​ನಲ್ಲಿ ‘ಪಠಾಣ್​’, ಶಾರುಖ್​ ಖಾನ್​, ಚಿತ್ರದ ನಾಯಕಿ ದೀಪಿಕಾ ಹೆಸರು ರಾರಾಜಿಸಿದೆ.

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು ಶಾರುಖ್​ ಖಾನ್​ ‘ಪಠಾಣ್​’; ಸಿನಿಮಾ ತಂಡ ಕೊಟ್ಟ ಹೊಸ ಅಪ್​ಡೇಟ್​ ಏನು?
ಶಾರುಖ್​ ಖಾನ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 28, 2021 | 4:58 PM

‘ಜೀರೋ’ ಸೋಲಿನ ನಂತರದಲ್ಲಿ ಒಂದು ಬ್ರೇಕ್​ ತೆಗೆದುಕೊಂಡಿದ್ದ ಶಾರುಖ್​ ಖಾನ್​ ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ‘ಪಠಾಣ್​’ ಸಿನಿಮಾ ಕೈಗೆತ್ತಿಕೊಂಡಿರುವ ಅವರು, ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ಮೊದಲು ದುಬೈನಲ್ಲಿ ಶೂಟ್​ ಮಾಡಿದ್ದ ಚಿತ್ರತಂಡ​ ಈಗ ಯುರೋಪ್​ ದೇಶಗಳಿಗೆ ತೆರಳೋಕೆ ರೆಡಿ ಆಗಿದೆ. ಬೇರೆಬೇರೆ ದೇಶಗಳಲ್ಲಿ ಸಿನಿಮಾ ಶೂಟ್​ ನಡೆಯುತ್ತಿರುವ ವಿಚಾರ ಅಭಿಮಾನಿಗಳಿಗೆ ಎಗ್ಸೈಟ್​ಮೆಂಟ್​ ನೀಡಿದೆ.

‘ಪಠಾಣ್​’ ಸಿನಿಮಾ ಶೂಟಿಂಗ್​ ಇಂದಿನಿಂದ ಆರಂಭವಾಗಿದೆ. ಈ ಕಾರಣಕ್ಕೆ ಟ್ವಿಟರ್​ ಟ್ರೆಂಡ್​ನಲ್ಲಿ ‘ಪಠಾಣ್​’, ಶಾರುಖ್​ ಖಾನ್​, ಚಿತ್ರದ ನಾಯಕಿ ದೀಪಿಕಾ ಹೆಸರು ರಾರಾಜಿಸಿದೆ. ಮುಂಬೈನ ಸ್ಟುಡಿಯೋದಲ್ಲಿ ಕೆಲ ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಆ ಬಳಿಕ ಚಿತ್ರತಂಡ ಸ್ಪೇನ್​ ಸೇರಿ ಯುರೋಪ್​​ನ ಹಲವು​ ರಾಷ್ಟ್ರಗಳಿಗೆ ಪ್ರಯಾಣ ಬೆಳೆಸಲಿದೆ.

ಸದ್ಯ ಚಿತ್ರತಂಡ ಯುರೋಪ್​ಗೆ ಹಾರೋಕೆ ದಿನಾಂಕ ಫಿಕ್ಸ್​ ಮಾಡಿಲ್ಲ. ಕೊವಿಡ್​ ಎರಡನೇ ಅಲೆ ಕಡಿಮೆ ಆಗಿದೆ. ಮೂರನೇ ಅಲೆ ಭೀತಿ ಕಾಡುತ್ತಿದೆ. ಅದಕ್ಕೂ ಮೊದಲೇ ದೇಶಬಿಡುವ ಆಲೋಚನೆಯಲ್ಲಿ ಚಿತ್ರತಂಡ ಇದೆ. ಸದ್ಯ, ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನು, ಅಪ್ಘಾನಿಸ್ತಾನದಲ್ಲೂ ಚಿತ್ರತಂಡ ಶೂಟಿಂಗ್​ ನಡೆಸೋಕೆ ಪ್ಲ್ಯಾನ್​ ಮಾಡಿತ್ತು ಎನ್ನುವ ಸುದ್ದಿ ಹರಿದಾಡಿದೆ. ಆದರೆ, ಈ ಮಾತನ್ನು ಚಿತ್ರತಂಡ ಅಲ್ಲಗಳೆದಿದೆ. ‘ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡುವ ಯಾವುದೇ ಆಲೋಚನೆ ಇರಲಿಲ್ಲ. ಹಬ್ಬಿರುವ ಸುದ್ದಿ ಸುಳ್ಳು’ ಎನ್ನುವ ಸ್ಪಷ್ಟನೆ ಚಿತ್ರತಂಡದ ಕಡೆಯಿಂದ ಸಿಕ್ಕಿದೆ.

ಸಿದ್ಧಾರ್ಥ್​ ಆನಂದ್ ನಿರ್ದೇಶನ ಮಾಡುತ್ತಿರುವ ‘ಪಠಾಣ್​’ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಜಾನ್​ ಅಬ್ರಹಾಂ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ  ಶಾರುಖ್​ ಅವರದ್ದು ನೆಗೆಟಿವ್​ ಪಾತ್ರ ಎನ್ನುವ ಸುದ್ದಿ ಇದೆ. 2013ರಲ್ಲಿ ತೆರೆಗೆ ಬಂದಿದ್ದ ಶಾರುಖ್​ ನಟನೆಯ ‘ಚೆನ್ನೈ ಎಕ್ಸ್​ಪ್ರೆಸ್’​ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಅವರ ಅಭಿನಯದ ‘ಹ್ಯಾಪಿ ನ್ಯೂ ಇಯರ್’​ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದರೂ, ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಇದಾದ ನಂತರ ತೆರೆಕಂಡ ಅವರ ನಟನೆಯ ಎಲ್ಲಾ ಚಿತ್ರಗಳೂ ನೆಲ ಕಚ್ಚಿದ್ದವು. ಈ ಕಾರಣಕ್ಕೆ ‘ಪಠಾಣ್’​ ಸಿನಿಮಾ ಬಹಳ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಶಾರುಖ್​ ನಟನೆಯ ಪಠಾಣ್​ ಸಿನಿಮಾ ರಿಲೀಸ್​ಗೆ ಫಿಕ್ಸ್​ ಆಯ್ತು ದಿನಾಂಕ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ