ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​?

ಶಾರುಖ್​ ಕರಿಯ ಕೋಟ್​ ಹಾಕಿ ನಿಂತಿದ್ದಾರೆ. ಅವರು​ ಗಡ್ಡ ಬಿಟ್ಟಿದ್ದಾರೆ. ತಲೆಯಲ್ಲಿ ಉದ್ದನೆಯ ಕೂದಲಿದೆ. ಅವರ ಈ ಲುಕ್​ ಫ್ಯಾನ್​ ಪೇಜ್​ಗಳಲ್ಲಿ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​?
ಶಾರುಖ್​ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Feb 20, 2022 | 6:01 PM

Shah Rukh Khanಶಾರುಖ್​ ಖಾನ್​ ಅವರು (Shah Rukh Khan) ಬಾಲಿವುಡ್​ನಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ಅವರ ಚಾರ್ಮ್​ ಕೊಂಚ ಮಂಕಾಗಿದೆ. 2018ರಲ್ಲಿ ತೆರೆಗೆ ಬಂದ ‘ಝೀರೋ’ ಸಿನಿಮಾ (Zero Movie) ಕೊನೆ. ಅದಾದ ಬಳಿಕ ಅವರ ನಟನೆಯ ಯಾವುದೇ ಸಿನಿಮಾಗಳು ತೆರೆಗೆ ಬಂದಿಲ್ಲ. ಈಗ ಎರಡು ಹೊಸ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಅವರ ನಟನೆಯ ‘ಪಠಾಣ್​’ ಚಿತ್ರದ (Pathan Movie) ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಇದಲ್ಲದೆ, ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಆ್ಯಕ್ಷನ್​ ಕಟ್​ ಹೇಳುತ್ತಿರುವ ಚಿತ್ರದಲ್ಲೂ ಶಾರುಖ್​ ನಟಿಸುತ್ತಿದ್ದಾರೆ. ಈ ಎರಡೂ ಚಿತ್ರ ತಂಡದಿಂದ ಯಾವುದೇ ಪೋಸ್ಟರ್​ಗಳು ಅಥವಾ ಫಸ್ಟ್​ ಲುಕ್​ ರಿಲೀಸ್​ ಆಗಿಲ್ಲ. ಹೀಗಿರುವಾಗಲೇ ಶಾರುಖ್​ ಅವರ ಹೊಸ ಲುಕ್​ ಒಂದು ವೈರಲ್​ ಆಗಿದೆ. ಇದು ಯಾವ ಸಿನಿಮಾದ ಲುಕ್​ ಎಂದು ಅಭಿಮಾನಿಗಳು ತಲೆಕೆಡಿಸಿಕೊಳ್ಳುತ್ತಿದ್ದಾರೆ.

ಶಾರುಖ್​ ಕರಿಯ ಕೋಟ್​ ಹಾಕಿ ನಿಂತಿದ್ದಾರೆ. ಅವರು​ ಗಡ್ಡ ಬಿಟ್ಟಿದ್ದಾರೆ. ತಲೆಯಲ್ಲಿ ಉದ್ದನೆಯ ಕೂದಲಿದೆ. ಅವರ ಈ ಲುಕ್​ ಫ್ಯಾನ್​ ಪೇಜ್​ಗಳಲ್ಲಿ ವೈರಲ್​ ಆಗುತ್ತಿದೆ. ಇದು ಜಾಹೀರಾತಿನ ಲುಕ್​ ಎಂದು ಕೆಲವರು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು ಹೊಸ ಸಿನಿಮಾ ಪೋಸ್ಟರ್​ ಎಂದು ಭಾವಿಸಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯೇ ಇದೆ.

ಇದು ಶಾರುಖ್​ ಅವರ ಫೋಟೋಶಾಪ್​ ಮಾಡಿದ ಫೋಟೋ. 2017ರಲ್ಲಿ ಡಬೂ ರತ್ನಾನಿ ಅವರು ಶಾರುಖ್​ ಫೋಟೋಶೂಟ್​ ಮಾಡಿದ್ದರು. ಈ ಫೋಟೋವನ್ನು ಬಳಕೆ ಮಾಡಿಕೊಂಡು ಯಾರೋ ಅಭಿಮಾನಿ ಎಡಿಟ್​ ಮಾಡಿ ಹರಿಬಿಟ್ಟಿದ್ದಾರೆ. ಇದು ನೋಡೋಕೆ ಹೊಸ ಲುಕ್​ ಮಾದರಿಯಲ್ಲೇ ಕಾಣಿಸಿದೆ. ಕೆಲವರು ಶಾರುಖ್​ ಅವರ ಈ ಲುಕ್ ಇಷ್ಟಪಟ್ಟಿದ್ದಾರೆ. ನಿಜ ಜೀವನದಲ್ಲಿ ಅವರು ಇದೇ ಲುಕ್​ನಲ್ಲಿ ಕಾಣಿಸಿಕೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?

80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್