AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​?

ಶಾರುಖ್​ ಕರಿಯ ಕೋಟ್​ ಹಾಕಿ ನಿಂತಿದ್ದಾರೆ. ಅವರು​ ಗಡ್ಡ ಬಿಟ್ಟಿದ್ದಾರೆ. ತಲೆಯಲ್ಲಿ ಉದ್ದನೆಯ ಕೂದಲಿದೆ. ಅವರ ಈ ಲುಕ್​ ಫ್ಯಾನ್​ ಪೇಜ್​ಗಳಲ್ಲಿ ವೈರಲ್​ ಆಗುತ್ತಿದೆ.

ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​?
ಶಾರುಖ್​ ಖಾನ್
TV9 Web
| Edited By: |

Updated on: Feb 20, 2022 | 6:01 PM

Share

Shah Rukh Khanಶಾರುಖ್​ ಖಾನ್​ ಅವರು (Shah Rukh Khan) ಬಾಲಿವುಡ್​ನಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ಅವರ ಚಾರ್ಮ್​ ಕೊಂಚ ಮಂಕಾಗಿದೆ. 2018ರಲ್ಲಿ ತೆರೆಗೆ ಬಂದ ‘ಝೀರೋ’ ಸಿನಿಮಾ (Zero Movie) ಕೊನೆ. ಅದಾದ ಬಳಿಕ ಅವರ ನಟನೆಯ ಯಾವುದೇ ಸಿನಿಮಾಗಳು ತೆರೆಗೆ ಬಂದಿಲ್ಲ. ಈಗ ಎರಡು ಹೊಸ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಅವರ ನಟನೆಯ ‘ಪಠಾಣ್​’ ಚಿತ್ರದ (Pathan Movie) ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಇದಲ್ಲದೆ, ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಆ್ಯಕ್ಷನ್​ ಕಟ್​ ಹೇಳುತ್ತಿರುವ ಚಿತ್ರದಲ್ಲೂ ಶಾರುಖ್​ ನಟಿಸುತ್ತಿದ್ದಾರೆ. ಈ ಎರಡೂ ಚಿತ್ರ ತಂಡದಿಂದ ಯಾವುದೇ ಪೋಸ್ಟರ್​ಗಳು ಅಥವಾ ಫಸ್ಟ್​ ಲುಕ್​ ರಿಲೀಸ್​ ಆಗಿಲ್ಲ. ಹೀಗಿರುವಾಗಲೇ ಶಾರುಖ್​ ಅವರ ಹೊಸ ಲುಕ್​ ಒಂದು ವೈರಲ್​ ಆಗಿದೆ. ಇದು ಯಾವ ಸಿನಿಮಾದ ಲುಕ್​ ಎಂದು ಅಭಿಮಾನಿಗಳು ತಲೆಕೆಡಿಸಿಕೊಳ್ಳುತ್ತಿದ್ದಾರೆ.

ಶಾರುಖ್​ ಕರಿಯ ಕೋಟ್​ ಹಾಕಿ ನಿಂತಿದ್ದಾರೆ. ಅವರು​ ಗಡ್ಡ ಬಿಟ್ಟಿದ್ದಾರೆ. ತಲೆಯಲ್ಲಿ ಉದ್ದನೆಯ ಕೂದಲಿದೆ. ಅವರ ಈ ಲುಕ್​ ಫ್ಯಾನ್​ ಪೇಜ್​ಗಳಲ್ಲಿ ವೈರಲ್​ ಆಗುತ್ತಿದೆ. ಇದು ಜಾಹೀರಾತಿನ ಲುಕ್​ ಎಂದು ಕೆಲವರು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು ಹೊಸ ಸಿನಿಮಾ ಪೋಸ್ಟರ್​ ಎಂದು ಭಾವಿಸಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯೇ ಇದೆ.

ಇದು ಶಾರುಖ್​ ಅವರ ಫೋಟೋಶಾಪ್​ ಮಾಡಿದ ಫೋಟೋ. 2017ರಲ್ಲಿ ಡಬೂ ರತ್ನಾನಿ ಅವರು ಶಾರುಖ್​ ಫೋಟೋಶೂಟ್​ ಮಾಡಿದ್ದರು. ಈ ಫೋಟೋವನ್ನು ಬಳಕೆ ಮಾಡಿಕೊಂಡು ಯಾರೋ ಅಭಿಮಾನಿ ಎಡಿಟ್​ ಮಾಡಿ ಹರಿಬಿಟ್ಟಿದ್ದಾರೆ. ಇದು ನೋಡೋಕೆ ಹೊಸ ಲುಕ್​ ಮಾದರಿಯಲ್ಲೇ ಕಾಣಿಸಿದೆ. ಕೆಲವರು ಶಾರುಖ್​ ಅವರ ಈ ಲುಕ್ ಇಷ್ಟಪಟ್ಟಿದ್ದಾರೆ. ನಿಜ ಜೀವನದಲ್ಲಿ ಅವರು ಇದೇ ಲುಕ್​ನಲ್ಲಿ ಕಾಣಿಸಿಕೊಳ್ಳಬೇಕು ಎನ್ನುವ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?

80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್