AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

Pathaan Movie Trailer | Burj Khalifa: ಶಾರುಖ್​ ಖಾನ್​ ಅವರಿಗೆ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಫ್ಯಾನ್ಸ್​ ಇದ್ದಾರೆ. ದುಬೈನಲ್ಲೂ ಅವರನ್ನು ಇಷ್ಟ ಪಡುವ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.

Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​
ಶಾರುಖ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on:Jan 15, 2023 | 10:57 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ನಾಲ್ಕು ವರ್ಷಗಳ ಬಳಿಕ ಕಮ್​ಬ್ಯಾಕ್​ ಮಾಡುತ್ತಿರುವುದರಿಂದ ನಿರೀಕ್ಷೆ ಜೋರಾಗಿದೆ. ಅವರು ಅಭಿನಯಿಸಿರುವ ‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್​ ಆಗಲು ಸಜ್ಜಾಗಿದೆ. ಈ ನಡುವೆ ಈ ಚಿತ್ರಕ್ಕೆ ಒಂದು ವರ್ಗದ ಜನರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದಾಗಿನಿಂದ ಕೆಲವು ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಲೇ ಇವೆ. ‘ಪಠಾಣ್​’ ಚಿತ್ರ (Pathaan Movie) ಬಿಡುಗಡೆ ಆಗಬಾರದು ಎಂದು ಕೆಲವರು ಪಟ್ಟು ಹಿಡಿದ್ದಿದ್ದಾರೆ. ಭಾರತದಲ್ಲಿ ಇಷ್ಟೆಲ್ಲ ವಿರೋಧ ವ್ಯಕ್ತವಾಗುತ್ತಿರುವಾಗಲೇ ಶಾರುಖ್​ ಖಾನ್​ ಅವರು ದುಬೈಗೆ (Dubai) ತೆರಳಿ ತಮ್ಮ ಸಿನಿಮಾದ ಪ್ರಚಾರ ಮಾಡಿದ್ದಾರೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ‘ಪಠಾಣ್​’ ಸಿನಿಮಾದ ಟ್ರೇಲರ್​ ಪ್ರದರ್ಶನ ಮಾಡಲಾಗಿದೆ.

ಶಾರುಖ್​ ಖಾನ್​ ಅವರಿಗೆ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಫ್ಯಾನ್ಸ್​ ಇದ್ದಾರೆ. ದುಬೈನಲ್ಲೂ ಅವರನ್ನು ಇಷ್ಟ ಪಡುವ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ದುಬೈ ಪ್ರವಾಸೋದ್ಯಮ ಇಲಾಖೆ ಜೊತೆಗೆ ಶಾರುಖ್​ ಉತ್ತಮ ನಂಟು ಹೊಂದಿದ್ದಾರೆ. ಅವರ ಸಿನಿಮಾಗಳು ಅಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತವೆ. ಹಾಗಾಗಿ ದುಬೈನಲ್ಲಿ ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಪ್ರಚಾರ ಮಾಡಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​

ವಿಶ್ವದ ಅತಿ ಎತ್ತರದ ಕಟ್ಟಡ ಎನಿಸಿಕೊಂಡಿರುವ ಬುರ್ಜ್​ ಖಲೀಫಾ ಮೇಲೆ ‘ಪಠಾಣ್​’ ಚಿತ್ರದ ಟ್ರೇಲರ್​ ಬಿತ್ತರ ಆಗುತ್ತಿರುವುದನ್ನು ಶಾರುಖ್​ ಖಾನ್​ ಅವರು ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ, ಸಿನಿಮಾದ ಒಂದೆರಡು ಡೈಲಾಗ್​ಗಳನ್ನು ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ದುಬೈನಲ್ಲಿ ನಡೆದ ಈ ಪ್ರಚಾರ ಕಾರ್ಯಕ್ರಮದ ವಿಡಿಯೋಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ: Shah Rukh Khan: ಎಷ್ಟೇ ವಿರೋಧ ಬಂದ್ರೂ ಜಗ್ಗದ ಶಾರುಖ್​ ಖಾನ್​; ‘ಪಠಾಣ್​’ ಟೈಟಲ್​ ಬದಲಾಗಬೇಕು ಎಂದವರಿಗೆ ಇಲ್ಲಿದೆ ಉತ್ತರ

‘ಪಠಾಣ್​’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಹಲವು ದೇಶಗಳಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ. ಶಾರುಖ್​ ಖಾನ್​ ಅವರು ಈ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​ ಮಾಡಿಕೊಂಡು ಕಷ್ಟಪಟ್ಟಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ಅವರು ನಟಿಸಿದ್ದಾರೆ. ‘ಪಠಾಣ್​’ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

View this post on Instagram

A post shared by Maha (@mahasrk1)

ಈ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ‘ಪಠಾಣ್​’ ರಿಲೀಸ್​ ಆಗುತ್ತಿರುವುದರಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್ ಅವರು ಜೋಡಿಯಾಗಿ ನಟಿಸಿರುವ ನಾಲ್ಕನೇ ಸಿನಿಮಾ ಇದು. ಆ ಕಾರಣದಿಂದಲೂ ‘ಪಠಾಣ್​’ ಹೈಪ್​ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Sun, 15 January 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ