AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಚಿತ್ರ ಮೊದಲ ದಿನ ಎಷ್ಟು ಕೋಟಿ ಕಲೆಕ್ಷನ್​ ಮಾಡಲಿದೆ? ಶಾರುಖ್​ ಖಾನ್​ಗೆ ನೇರ ಪ್ರಶ್ನೆ

Pathaan Box Office Collection Prediction: 2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಶಾರುಖ್​ ಖಾನ್​ ನಟನೆಯ ಈ ಸಿನಿಮಾ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಬಹುದು ಎಂಬ ಪ್ರಶ್ನೆ ಮೂಡಿದೆ.

Shah Rukh Khan: ‘ಪಠಾಣ್​’ ಚಿತ್ರ ಮೊದಲ ದಿನ ಎಷ್ಟು ಕೋಟಿ ಕಲೆಕ್ಷನ್​ ಮಾಡಲಿದೆ? ಶಾರುಖ್​ ಖಾನ್​ಗೆ ನೇರ ಪ್ರಶ್ನೆ
ಶಾರುಖ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Dec 18, 2022 | 10:48 PM

Share

ಬಹುನಿರೀಕ್ಷಿತ ‘ಪಠಾಣ್​’ (Pathaan Movie) ಚಿತ್ರದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದೆ. ಅಭಿಮಾನಿಗಳಿಗೆ ಈ ಸಿನಿಮಾ ಮೇಲಿನ ಕ್ರೇಜ್​ ಜೋರಾಗಿದೆ. ಟೀಸರ್​ ಮತ್ತು ಹಾಡಿನ ಮೂಲಕ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ದೊಡ್ಡ ಗ್ಯಾಪ್​ ಬಳಿಕ ಶಾರುಖ್​ ಖಾನ್​ (Shah Rukh Khan) ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿರುವುದರಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಾಗಿದೆ. ಒಂದೆಡೆ ಅಭಿಮಾನಿಗಳು ‘ಪಠಾಣ್​’ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಈ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಮಧ್ಯೆ ಇದರ ಬಾಕ್ಸ್​ ಆಫೀಸ್​ (Pathaan Movie Box Office Collection) ಭವಿಷ್ಯ ಏನಾಗಬಹುದು ಎಂದು ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಮೂಡಿದೆ. ಇದೇ ಪ್ರಶ್ನೆಯನ್ನು ಅಭಿಮಾನಿಯೊಬ್ಬರು ಶಾರುಖ್​ ಖಾನ್​ಗೆ ನೇರವಾಗಿ ಕೇಳಿದ್ದಾರೆ. ಅದಕ್ಕೆ ಶಾರುಖ್​ ಖಾನ್​ ಅವರ ಜಾಣತನದ ಉತ್ತರ ನೀಡಿದ್ದಾರೆ.

ಸಿನಿಮಾ ಪ್ರಚಾರದ ಸಲುವಾಗಿ ಸೋಶಿಯಲ್​ ಮೀಡಿಯಾದಲ್ಲಿ ಶಾರುಖ್​ ಖಾನ್​ ಅವರು ಅಭಿಮಾನಿಗಳ ಜೊತೆ ಇತ್ತೀಚೆಗೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಫ್ಯಾನ್ಸ್​ ಬಗೆಬಗೆಯ ಪ್ರಶ್ನೆ ಎಸೆದಿದ್ದಾರೆ. ‘ಪಠಾಣ್​ ಸಿನಿಮಾ ಮೊದಲು ದಿನ ಎಷ್ಟು ಕಲೆಕ್ಷನ್​ ಮಾಡಬಹುದು’ ಎಂದು ಅಭಿಮಾನಿಯೊಬ್ಬರು ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ಶಾರುಖ್​ ಖಾನ್​, ‘ಊಹಿಸುವ ಕೆಲಸ ನನ್ನದಲ್ಲ. ನಿಮ್ಮನ್ನು ರಂಜಿಸುವುದು ಮತ್ತು ನಗಿಸುವುದು ಮಾತ್ರ ನನ್ನ ಕೆಲಸ’ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ‘ಯಶ್​ ರಾಜ್​ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಕೂಡ ನಟಿಸಿದ್ದು, ಸ್ಟಾರ್​ ಮೆರುಗು ಹೆಚ್ಚಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾವನ್ನು ವಿವಿಧ ದೇಶಗಳಲ್ಲಿ ಚಿತ್ರಿಸಲಾಗಿದೆ.

ಇದನ್ನೂ ಓದಿ: Prakash Raj: ‘ಬೇಷರಂ ರಂಗ್​’ ವಿವಾದ; ‘ಇದನ್ನೆಲ್ಲ ಎಲ್ಲಿಯವರೆಗೆ ಸಹಿಸಬೇಕು’ ಅಂತ ಪ್ರಶ್ನೆ ಮಾಡಿದ ಪ್ರಕಾಶ್​ ರಾಜ್​

ಇತ್ತೀಚೆಗೆ ಈ ಸಿನಿಮಾದ ‘ಬೇಷರಂ ರಂಗ್​..’ ಹಾಡು ಬಿಡುಗಡೆ ಆಯಿತು. ಇದರಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಧರಿಸಿದ್ದಾರೆ ಎಂಬ ಕಾರಣಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಅದನ್ನೇ ನೆಪವಾಗಿಟ್ಟುಕೊಂಡು ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂಬ ಅಭಿಯಾನ ಕೂಡ ನಡೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ Boycott Pathaan ಹ್ಯಾಷ್ ಟ್ಯಾಗ್​ ಟ್ರೆಂಡ್​ ಆಗುತ್ತಿದೆ.

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಕೊಂಕು ನುಡಿದವರಿಗೆ ಶಾರುಖ್​ ಖಾನ್​ ತಿರುಗೇಟು:

ಡಿ.15ರಂದು ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನೆಗೊಂಡಿತು. ಈ ವೇದಿಕೆಯಲ್ಲಿ ಶಾರುಖ್​ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. ‘ಜಗತ್ತು ಸಹಜ ಸ್ಥಿತಿಗೆ ಬಂದಿದೆ. ನಾವೆಲ್ಲರೂ ಖುಷಿಯಾಗಿದ್ದೇವೆ. ನಾನು ಹೆಚ್ಚು ಖುಷಿಯಾಗಿದ್ದೇನೆ. ಜಗತ್ತು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು, ನೀವು ಮತ್ತು ಪಾಸಿಟಿವ್​ ಮನಸ್ಥಿತಿ ಇರುವ ಎಲ್ಲ ಜನರು ಜೀವಂತವಾಗಿದ್ದೇವೆ ಅಂತ ಹೇಳಲು ನನಗೆ ಯಾವುದೇ ಅಡೆತಡೆ ಇಲ್ಲ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?