ನಿರ್ದೇಶಕನ ಎದುರು ತಮ್ಮ ಹೊಸ ಸಿನಿಮಾ ಟೈಟಲ್ ತಪ್ಪಾಗಿ ಓದಿದ ಶಾರುಖ್; ಮುಂದೇನಾಯ್ತು ನೋಡಿ

2018 ತೆರೆಗೆ ಬಂದ ‘ಸಂಜು’ ಚಿತ್ರ ಹಿಟ್ ಆಗಿತ್ತು. ಈ ಸಿನಿಮಾ ತೆರೆಕಂಡ ಬಂದ ಬಳಿಕ ಹಿರಾನಿ ಯಾವುದೇ ಚಿತ್ರ ಘೋಷಣೆ ಮಾಡಿಲ್ಲ. ಇದಾದ ನಾಲ್ಕು ವರ್ಷಗಳ ಬಳಿಕ ಅವರು ಶಾರುಖ್ ಖಾನ್ ಜತೆ ಕೈ ಜೋಡಿಸುತ್ತಿದ್ದಾರೆ.

ನಿರ್ದೇಶಕನ ಎದುರು ತಮ್ಮ ಹೊಸ ಸಿನಿಮಾ ಟೈಟಲ್ ತಪ್ಪಾಗಿ ಓದಿದ ಶಾರುಖ್; ಮುಂದೇನಾಯ್ತು ನೋಡಿ
ಶಾರುಖ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 19, 2022 | 5:02 PM

ಬಾಲಿವುಡ್​ನಲ್ಲಿ ಒಂದೂ ಸೋಲು ಕಾಣದ ನಿರ್ದೇಶಕ ಎಂದರೆ ಅದು ರಾಜ್​ಕುಮಾರ್ ಹಿರಾನಿ (Rajkumar Hirani). ‘ಮುನ್ನಾ ಭಾಯ್ ಎಂಬಿಬಿಎಸ್​’, ‘3 ಈಡಿಯಟ್ಸ್’, ‘ಪಿಕೆ’ ಮೊದಲಾದ ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಇವರ ಜತೆ ಕೆಲಸ ಮಾಡಬೇಕು ಎಂಬುದು ಹಲವರ ಕನಸು. ಶಾರುಖ್ ಖಾನ್ (Shah Rukh Khan) ಅವರು ಕೂಡ ಇದೇ ಕನಸನ್ನು ಕಂಡಿದ್ದರು. ಈ ಕನಸು ಈಗ ನನಸಾಗಿದೆ. ಇವರ ಕಾಂಬಿನೇಷನ್​ನ ಹೊಸ ಸಿನಿಮಾ ಘೋಷಣೆ ಆಗಿದೆ. ಇದಕ್ಕೆ ‘ಡಂಕಿ’ (Dunki Movie) ಎಂದು ಹೆಸರು ಇಡಲಾಗಿದೆ. ಸಿನಿಮಾ ಅನೌನ್ಸ್​ಮೆಂಟ್​ಅನ್ನು ತುಂಬಾನೇ ಫನ್ನಿಯಾಗಿ ಮಾಡಲಾಗಿದೆ.

ಶಾರುಖ್ ಖಾನ್ ಅವರು ರಾಜ್​ಕುಮಾರ್ ಹಿರಾನಿ ಕಚೇರಿಗೆ ಬಂದಿರುತ್ತಾರೆ. ಅಲ್ಲಿ ಹಿರಾನಿ ಅವರು ಮಾಡಿರುವ ಸಿನಿಮಾಗಳ ಪೋಸ್ಟರ್​​ಗಳನ್ನು ನೋಡುತ್ತಾರೆ. ಆಗ ಹಿರಾನಿ ಎಂಟ್ರಿ ಆಗುತ್ತದೆ. ‘ಸಂಜು ಆಗಿ ರಣಬೀರ್ ಕಾಣಿಸಿಕೊಂಡಿದ್ದರು. ಎಲ್ಲವೂ ಐಕಾನಿಕ್ ಪಾತ್ರಗಳು. ನನಗೋಸ್ಕರ ಈ ರೀತಿಯ ಸ್ಕ್ರಿಪ್ಟ್​ ಇದೆಯೇ’ ಎಂದು ಕೇಳುತ್ತಾರೆ ಶಾರುಖ್​. ಇದಕ್ಕೆ ಉತ್ತರಿಸುವ ಹಿರಾನಿ, ‘ಒಂದು ಸ್ಕ್ರಿಪ್ಟ್ ಇದೆ. ಅದರಲ್ಲಿ ಕಾಮಿಡಿ, ರೊಮ್ಯಾನ್ಸ್, ಎಮೋಷನ್ಸ್ ಎಲ್ಲವೂ ಇದೆ ಎನ್ನುತ್ತಾರೆ’ ಈ ವಿಚಾರ ಕೇಳಿ ಶಾರುಖ್ ಸಖತ್ ಖುಷಿ ಪಡುತ್ತಾರೆ.

ಸಿನಿಮಾ ಟೈಟಲ್ ಏನು ಎಂದು ಪ್ರಶ್ನೆ ಮಾಡುತ್ತಾರೆ ಶಾರುಖ್. ‘ಡಂಕಿ’ ಎಂಬ ಉತ್ತರ ಹಿರಾನಿ ಕಡೆಯಿಂದ ಬರುತ್ತದೆ. ‘ಡಾಂಕಿ’ ಎಂದು ಕೇಳಿಸಿಕೊಳ್ಳುತ್ತಾರೆ ಶಾರುಖ್. ಆಗ ಹಿರಾನಿ ಸರಿಯಾಗಿ ತಿದ್ದಿ ಹೇಳುತ್ತಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಶಾರುಖ್ ಅವರ ಮತ್ತೊಂದು ಚಿತ್ರ ಘೋಷಣೆ ಆದ ಬಗ್ಗೆ ಅಭಿಮಾನಿಗಳಿಗೆ ಖುಷಿ ಇದೆ.

2018 ತೆರೆಗೆ ಬಂದ ‘ಸಂಜು’ ಚಿತ್ರ ಹಿಟ್ ಆಗಿತ್ತು. ಈ ಸಿನಿಮಾ ತೆರೆಕಂಡ ಬಂದ ಬಳಿಕ ಹಿರಾನಿ ಯಾವುದೇ ಚಿತ್ರ ಘೋಷಣೆ ಮಾಡಿಲ್ಲ. ಇದಾದ ನಾಲ್ಕು ವರ್ಷಗಳ ಬಳಿಕ ಅವರು ಶಾರುಖ್ ಖಾನ್ ಜತೆ ಕೈ ಜೋಡಿಸುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಜ್​ಕುಮಾರ್ ಹಿರಾನಿ ಜತೆ ಶಾರುಖ್ ಖಾನ್ ಇದೇ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಸಂಜಯ್ ದತ್, ಆಮಿರ್ ಖಾನ್ ಜತೆಗೆ ಈ ಮೊದಲು ಹಿರಾನಿ ಕೆಲಸ ಮಾಡಿದ್ದಾರೆ. ‘ಡಂಕಿ’ ಸಿನಿಮಾ 2023ರ ಡಿಸೆಂಬರ್ 22ರಂದು ತೆರೆಗೆ ಬರುತ್ತಿದೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋ, ಶಾರುಖ್ ಅವರ ರೆಡ್​ ಚಿಲ್ಲೀ ಸ್ಟುಡಿಯೋ ಹಾಗೂ ರಾಜ್​ಕುಮಾರ್ ಹಿರಾನಿ ಫಿಲ್ಮ್ಸ್​ ಪ್ರೆಸೆಂಟ್ ಮಾಡುತ್ತಿದೆ.

ಇದನ್ನೂ ಓದಿ: ಸೈಫ್ ಮಗನನ್ನು ಕಂಡು ​ಶಾರುಖ್ ಪುತ್ರ ಅಂತ ಕರೆದ ಫ್ಯಾನ್ಸ್​​; ಇಬ್ರಾಹಿಂ ಅಲಿ ಖಾನ್​ ಪ್ರತಿಕ್ರಿಯೆ ಹೇಗಿತ್ತು?

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ